Homeಮುಖಪುಟಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ನೀಡುತ್ತೇನೆ. ಅವರು ಸೂಚಿಸಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖ್ಯಾತ ಕನ್ನಡ ಸಿನಿಮಾ ನಟ ಸುದೀಪ್ ಘೋಷಿಸಿದ ಬೆನ್ನಲ್ಲೆ ಅವರ ಕಿಚ್ಚ ಸಿನಿಮಾದಲ್ಲಿ ರಾಜಕಾರಣಿಗಳನ್ನು ಬೈಯ್ಯುವ, ಸಿಎಂ ಖುರ್ಚಿಗೆ ಶಾಸಕರನ್ನು ಖರೀದಿಸುವುದನ್ನು ಖಂಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, “ನಾನು ಮುಖ್ಯಮಂತ್ರಿಯಾಗಬೇಕು, ಅವನು ಮುಖ್ಯಮಂತ್ರಿಯಾಗಬೇಕು ಎಂದು ಒಬ್ಬೊಬ್ಬ ಎಂಎಲ್‌ಎಗಳನ್ನು ಪರ್ಚೇಸ್ ಮಾಡಲು ಕೋಟಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದ್ದಾರೆ ಈನನ್ಮಕ್ಕಳು. ಯಾರ್ಯಾರ ಹತ್ರ ಎಷ್ಟೆಸ್ಟು ಹೊಡೆದೆ? ಎಷ್ಟೆಷ್ಟು ತಿಂದೆ ಎಂದು ಹೇಳದೆ ಹೋದರೆ ನ್ಯಾಯ ಅಲ್ಲ ಅಲ್ವಾ? ಅವರುಗಳಿಗೂ ಗೊತ್ತಾಗಲಿ ಅವರ ರಕ್ತ ಹೀರಿ ನೀವು ಎಷ್ಟು ಹಣ ಸಂಪಾದನೆ ಮಾಡಿದ್ದೀರಿ ಅಂತ” ಎಂಬ ಡೈಲಾಗ್‌ಗಳು ಕಂಡುಬರುತ್ತವೆ.

ಮುಂದುವರಿದು ರಾಜ್ಯವನ್ನು ಒಳ್ಳೆ ರೀತಿಯಲ್ಲಿ ಆಳಲಿ ಎಂದು ನೀವೆಲ್ಲ ಓಟ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದೀರಿ ಈ ಸಿಂಗಾರಪ್ಪನನ್ನು. ಇವನು ಎಷ್ಟು ದುಡ್ಡು ಮಾಡಿದ್ದಾನೆ ಅಂತ ನಿಮಗೆಲ್ಲರಿಗೂ ಎಂದು ಹೇಳಿದ್ದ ಸುದೀಪ್ ಡೈಲಾಗ್ ಅನ್ನು ಇಂದಿನ ರಾಜಕಾರಣಕ್ಕೆ ಅನ್ವಯಿಸಿ ಜನ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಕೇವಲ ಅರ್ಧ ಗಂಟೆ ಸಮಯದಲ್ಲಿ ಸಾವಿರಾರು ಜನ ವಿಡಿಯೋ ಷೇರ್ ಮಾಡಿರುವುದು ಕಂಡುಬಂದಿದೆ.

ವಿಡಿಯೋ ಹಂಚಿಕೊಂಡಿರುವ ಹಿರಿಯ ಲೇಖಕರಾದ ಪುರಷೋತ್ತಮ ಬಿಳಿಮಲೆಯವರು, “ಈ ಜನ ಬಹಳ ಕ್ರಿಯೇಟಿವ್‌ ಇದ್ದಾರಪ್ಪಾ! ಬಾಪ್ರೇ.. ವಾಟ್ಸಾಪ್‌ ತುಂಬಾ ಇದುವೇ.. ಇವರ ಸಿನೇಮಾ ಒಂದೂ ನೋಡಿರಲಿಲ್ಲ. ಇವತ್ತು ನೋಡಬೇಕು! ಸಖತ್‌ ಇಸ್ಟೈಲ್” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಚಾರ ಸಭೆಯಲ್ಲಿ ಕಿಚ್ಚ ಸುದೀಪ್ ಭಾಷಣದ ತುಣುಕು ಎಂದು ಸಿಕಂದರ್ ವಿಡಿಯೋ ಹಂಚಿಕೊಂಡಿದ್ದಾರೆ.

ಸುದೀಪ್‌ ಥರದ ನಟರು ಒಂದು ರಾಜಕೀಯ ನಿಲುವು ತೆಗೆದುಕೊಂಡರೆ ಅದನ್ನು ಧೈರ್ಯವಾಗಿ ಹೇಳುವ ಬದ್ಧತೆಯನ್ನೂ ತೋರಬೇಕು. ಇವತ್ತಿನ ಅವರ ಪತ್ರಿಕಾಗೋಷ್ಟಿಯ ಸಾರಾಂಶ ಏನೆಂದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅದಕ್ಕೆ ಕಾರಣ ಏನೇ ಇರಲಿ, ಅವರು ಈ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್‌ ಪ್ರಚಾರಕ ಎಂಬುದು ದಿಟ. ಇಷ್ಟನ್ನು ನೇರವಾಗಿ ಹೇಳುವ ಬದಲು, ನಾನು ರಾಜಕೀಯಕ್ಕೆ ಬಂದಿಲ್ಲ, ಪಾರ್ಟಿ ಸೇರಿಲ್ಲ, ವೈಯಕ್ತಿಕ ಸಂಬಂಧ, ಸಹಾಯ-ಋಣ ಲಂಗು ಲೊಟ್ಟೆ ಅನ್ನೋದು ಒಂಥರಾ ಹೇಡಿತನ. ಸುದೀಪ್‌ ಗೆ ಬಿಜೆಪಿ ಅಂತಲ್ಲ, ಯಾವುದೇ ಪಾರ್ಟಿ ಸೇರುವ ವೈಯಕ್ತಿಕ ಆಯ್ಕೆ, ಹಕ್ಕು ಇದ್ದೇ ಇರುತ್ತದೆ. ಆದರೆ ತನಗೆ ಯಾವುದೇ ರಾಜಕೀಯ ನಿಲುವು ಇಲ್ಲ ಎಂಬಂತೆ ಮಾತನಾಡುತ್ತ ಒಂದು ಪಾರ್ಟಿಯನ್ನು ಬೆಂಬಲಿಸುವುದು ಗೋಸುಂಬೆತನ. ಇತರ ಪಕ್ಷವನ್ನು ಬೆಂಬಲಿಸುವ ತನ್ನ ಅಭಿಮಾನಿಗಳು ಎಲ್ಲಿ ದೂರ ಹೋಗುತ್ತಾರೋ ಎಂಬ ಲೆಕ್ಕಾಚಾರ ಅವರನ್ನು ಕಾಡುತ್ತಿರಬಹುದು. ಇದನ್ನು ಸಮಯಸಾಧಕತನ ಅಂತಾರೆ. ಸುದೀಪ್‌ ಗೆ ಇದು ಬೇಡವಾಗಿತ್ತು. ಒಂದೇ ಗೆರೆ ನಂಬು, ಇಲ್ಲದೇ ಇದ್ದರೆ ನೆರೆ ನಂಬು ಎಂಬುವ ಮಾತೊಂದಿದೆ. ಸುದೀಪ್‌ ಮಧ್ಯೆ ನಿಂತಿದ್ದಾರೆ, ಅಂಜುಬುರುಕನಂತೆ. ಸದಾ ಎಲ್ಲರಿಗೂ ಬೋಧನೆ ಮಾಡುವ ಸುದೀಪ್‌ ಅವರಿಗೆ ಇಷ್ಟು ಮಾತ್ರ ತಿಳಿಯದೇ ಹೋಯ್ತು ಎನ್ನುವಂತಿಲ್ಲ. ಇದು ಗೊತ್ತಿದ್ದೇ ತಂದುಕೊಂಡಿರುವ ಸನ್ನಿವೇಶ. ಅಂದಹಾಗೆ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದರಿಂದ ಅವರು ರಾಜಕೀಯವಾಗಿಯೂ ಸಾರ್ವಜನಿಕ ಜೀವನಕ್ಕೆ ಬಂದಿದ್ದಾರೆ. ಹೀಗಾಗಿ ಟೀಕೆ, ವಿಮರ್ಶೆಗಳು ಹೆಚ್ಚಲಿವೆ. ಅದನ್ನು ಎದುರಿಸಲೂ ಅವರು ಸಜ್ಜಾಗಿರಬೇಕು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...