Homeಮುಖಪುಟಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ನೀಡುತ್ತೇನೆ. ಅವರು ಸೂಚಿಸಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖ್ಯಾತ ಕನ್ನಡ ಸಿನಿಮಾ ನಟ ಸುದೀಪ್ ಘೋಷಿಸಿದ ಬೆನ್ನಲ್ಲೆ ಅವರ ಕಿಚ್ಚ ಸಿನಿಮಾದಲ್ಲಿ ರಾಜಕಾರಣಿಗಳನ್ನು ಬೈಯ್ಯುವ, ಸಿಎಂ ಖುರ್ಚಿಗೆ ಶಾಸಕರನ್ನು ಖರೀದಿಸುವುದನ್ನು ಖಂಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, “ನಾನು ಮುಖ್ಯಮಂತ್ರಿಯಾಗಬೇಕು, ಅವನು ಮುಖ್ಯಮಂತ್ರಿಯಾಗಬೇಕು ಎಂದು ಒಬ್ಬೊಬ್ಬ ಎಂಎಲ್‌ಎಗಳನ್ನು ಪರ್ಚೇಸ್ ಮಾಡಲು ಕೋಟಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದ್ದಾರೆ ಈನನ್ಮಕ್ಕಳು. ಯಾರ್ಯಾರ ಹತ್ರ ಎಷ್ಟೆಸ್ಟು ಹೊಡೆದೆ? ಎಷ್ಟೆಷ್ಟು ತಿಂದೆ ಎಂದು ಹೇಳದೆ ಹೋದರೆ ನ್ಯಾಯ ಅಲ್ಲ ಅಲ್ವಾ? ಅವರುಗಳಿಗೂ ಗೊತ್ತಾಗಲಿ ಅವರ ರಕ್ತ ಹೀರಿ ನೀವು ಎಷ್ಟು ಹಣ ಸಂಪಾದನೆ ಮಾಡಿದ್ದೀರಿ ಅಂತ” ಎಂಬ ಡೈಲಾಗ್‌ಗಳು ಕಂಡುಬರುತ್ತವೆ.

ಮುಂದುವರಿದು ರಾಜ್ಯವನ್ನು ಒಳ್ಳೆ ರೀತಿಯಲ್ಲಿ ಆಳಲಿ ಎಂದು ನೀವೆಲ್ಲ ಓಟ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದೀರಿ ಈ ಸಿಂಗಾರಪ್ಪನನ್ನು. ಇವನು ಎಷ್ಟು ದುಡ್ಡು ಮಾಡಿದ್ದಾನೆ ಅಂತ ನಿಮಗೆಲ್ಲರಿಗೂ ಎಂದು ಹೇಳಿದ್ದ ಸುದೀಪ್ ಡೈಲಾಗ್ ಅನ್ನು ಇಂದಿನ ರಾಜಕಾರಣಕ್ಕೆ ಅನ್ವಯಿಸಿ ಜನ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಕೇವಲ ಅರ್ಧ ಗಂಟೆ ಸಮಯದಲ್ಲಿ ಸಾವಿರಾರು ಜನ ವಿಡಿಯೋ ಷೇರ್ ಮಾಡಿರುವುದು ಕಂಡುಬಂದಿದೆ.

ವಿಡಿಯೋ ಹಂಚಿಕೊಂಡಿರುವ ಹಿರಿಯ ಲೇಖಕರಾದ ಪುರಷೋತ್ತಮ ಬಿಳಿಮಲೆಯವರು, “ಈ ಜನ ಬಹಳ ಕ್ರಿಯೇಟಿವ್‌ ಇದ್ದಾರಪ್ಪಾ! ಬಾಪ್ರೇ.. ವಾಟ್ಸಾಪ್‌ ತುಂಬಾ ಇದುವೇ.. ಇವರ ಸಿನೇಮಾ ಒಂದೂ ನೋಡಿರಲಿಲ್ಲ. ಇವತ್ತು ನೋಡಬೇಕು! ಸಖತ್‌ ಇಸ್ಟೈಲ್” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಚಾರ ಸಭೆಯಲ್ಲಿ ಕಿಚ್ಚ ಸುದೀಪ್ ಭಾಷಣದ ತುಣುಕು ಎಂದು ಸಿಕಂದರ್ ವಿಡಿಯೋ ಹಂಚಿಕೊಂಡಿದ್ದಾರೆ.

ಸುದೀಪ್‌ ಥರದ ನಟರು ಒಂದು ರಾಜಕೀಯ ನಿಲುವು ತೆಗೆದುಕೊಂಡರೆ ಅದನ್ನು ಧೈರ್ಯವಾಗಿ ಹೇಳುವ ಬದ್ಧತೆಯನ್ನೂ ತೋರಬೇಕು. ಇವತ್ತಿನ ಅವರ ಪತ್ರಿಕಾಗೋಷ್ಟಿಯ ಸಾರಾಂಶ ಏನೆಂದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅದಕ್ಕೆ ಕಾರಣ ಏನೇ ಇರಲಿ, ಅವರು ಈ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್‌ ಪ್ರಚಾರಕ ಎಂಬುದು ದಿಟ. ಇಷ್ಟನ್ನು ನೇರವಾಗಿ ಹೇಳುವ ಬದಲು, ನಾನು ರಾಜಕೀಯಕ್ಕೆ ಬಂದಿಲ್ಲ, ಪಾರ್ಟಿ ಸೇರಿಲ್ಲ, ವೈಯಕ್ತಿಕ ಸಂಬಂಧ, ಸಹಾಯ-ಋಣ ಲಂಗು ಲೊಟ್ಟೆ ಅನ್ನೋದು ಒಂಥರಾ ಹೇಡಿತನ. ಸುದೀಪ್‌ ಗೆ ಬಿಜೆಪಿ ಅಂತಲ್ಲ, ಯಾವುದೇ ಪಾರ್ಟಿ ಸೇರುವ ವೈಯಕ್ತಿಕ ಆಯ್ಕೆ, ಹಕ್ಕು ಇದ್ದೇ ಇರುತ್ತದೆ. ಆದರೆ ತನಗೆ ಯಾವುದೇ ರಾಜಕೀಯ ನಿಲುವು ಇಲ್ಲ ಎಂಬಂತೆ ಮಾತನಾಡುತ್ತ ಒಂದು ಪಾರ್ಟಿಯನ್ನು ಬೆಂಬಲಿಸುವುದು ಗೋಸುಂಬೆತನ. ಇತರ ಪಕ್ಷವನ್ನು ಬೆಂಬಲಿಸುವ ತನ್ನ ಅಭಿಮಾನಿಗಳು ಎಲ್ಲಿ ದೂರ ಹೋಗುತ್ತಾರೋ ಎಂಬ ಲೆಕ್ಕಾಚಾರ ಅವರನ್ನು ಕಾಡುತ್ತಿರಬಹುದು. ಇದನ್ನು ಸಮಯಸಾಧಕತನ ಅಂತಾರೆ. ಸುದೀಪ್‌ ಗೆ ಇದು ಬೇಡವಾಗಿತ್ತು. ಒಂದೇ ಗೆರೆ ನಂಬು, ಇಲ್ಲದೇ ಇದ್ದರೆ ನೆರೆ ನಂಬು ಎಂಬುವ ಮಾತೊಂದಿದೆ. ಸುದೀಪ್‌ ಮಧ್ಯೆ ನಿಂತಿದ್ದಾರೆ, ಅಂಜುಬುರುಕನಂತೆ. ಸದಾ ಎಲ್ಲರಿಗೂ ಬೋಧನೆ ಮಾಡುವ ಸುದೀಪ್‌ ಅವರಿಗೆ ಇಷ್ಟು ಮಾತ್ರ ತಿಳಿಯದೇ ಹೋಯ್ತು ಎನ್ನುವಂತಿಲ್ಲ. ಇದು ಗೊತ್ತಿದ್ದೇ ತಂದುಕೊಂಡಿರುವ ಸನ್ನಿವೇಶ. ಅಂದಹಾಗೆ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದರಿಂದ ಅವರು ರಾಜಕೀಯವಾಗಿಯೂ ಸಾರ್ವಜನಿಕ ಜೀವನಕ್ಕೆ ಬಂದಿದ್ದಾರೆ. ಹೀಗಾಗಿ ಟೀಕೆ, ವಿಮರ್ಶೆಗಳು ಹೆಚ್ಚಲಿವೆ. ಅದನ್ನು ಎದುರಿಸಲೂ ಅವರು ಸಜ್ಜಾಗಿರಬೇಕು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...