Homeಮುಖಪುಟಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

ಬಿಜೆಪಿ ಸ್ಟಾರ್ ಪ್ರಚಾರಕ ಸುದೀಪ್‌ರವರ ಪ್ರಚಾರ ಆರಂಭ: ವೈರಲ್ ಆಯ್ತು ಕಿಚ್ಚ ಸಿನಿಮಾದ ದೃಶ್ಯ

- Advertisement -
- Advertisement -

ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ನೀಡುತ್ತೇನೆ. ಅವರು ಸೂಚಿಸಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಖ್ಯಾತ ಕನ್ನಡ ಸಿನಿಮಾ ನಟ ಸುದೀಪ್ ಘೋಷಿಸಿದ ಬೆನ್ನಲ್ಲೆ ಅವರ ಕಿಚ್ಚ ಸಿನಿಮಾದಲ್ಲಿ ರಾಜಕಾರಣಿಗಳನ್ನು ಬೈಯ್ಯುವ, ಸಿಎಂ ಖುರ್ಚಿಗೆ ಶಾಸಕರನ್ನು ಖರೀದಿಸುವುದನ್ನು ಖಂಡಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ, “ನಾನು ಮುಖ್ಯಮಂತ್ರಿಯಾಗಬೇಕು, ಅವನು ಮುಖ್ಯಮಂತ್ರಿಯಾಗಬೇಕು ಎಂದು ಒಬ್ಬೊಬ್ಬ ಎಂಎಲ್‌ಎಗಳನ್ನು ಪರ್ಚೇಸ್ ಮಾಡಲು ಕೋಟಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದ್ದಾರೆ ಈನನ್ಮಕ್ಕಳು. ಯಾರ್ಯಾರ ಹತ್ರ ಎಷ್ಟೆಸ್ಟು ಹೊಡೆದೆ? ಎಷ್ಟೆಷ್ಟು ತಿಂದೆ ಎಂದು ಹೇಳದೆ ಹೋದರೆ ನ್ಯಾಯ ಅಲ್ಲ ಅಲ್ವಾ? ಅವರುಗಳಿಗೂ ಗೊತ್ತಾಗಲಿ ಅವರ ರಕ್ತ ಹೀರಿ ನೀವು ಎಷ್ಟು ಹಣ ಸಂಪಾದನೆ ಮಾಡಿದ್ದೀರಿ ಅಂತ” ಎಂಬ ಡೈಲಾಗ್‌ಗಳು ಕಂಡುಬರುತ್ತವೆ.

ಮುಂದುವರಿದು ರಾಜ್ಯವನ್ನು ಒಳ್ಳೆ ರೀತಿಯಲ್ಲಿ ಆಳಲಿ ಎಂದು ನೀವೆಲ್ಲ ಓಟ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ್ದೀರಿ ಈ ಸಿಂಗಾರಪ್ಪನನ್ನು. ಇವನು ಎಷ್ಟು ದುಡ್ಡು ಮಾಡಿದ್ದಾನೆ ಅಂತ ನಿಮಗೆಲ್ಲರಿಗೂ ಎಂದು ಹೇಳಿದ್ದ ಸುದೀಪ್ ಡೈಲಾಗ್ ಅನ್ನು ಇಂದಿನ ರಾಜಕಾರಣಕ್ಕೆ ಅನ್ವಯಿಸಿ ಜನ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಕೇವಲ ಅರ್ಧ ಗಂಟೆ ಸಮಯದಲ್ಲಿ ಸಾವಿರಾರು ಜನ ವಿಡಿಯೋ ಷೇರ್ ಮಾಡಿರುವುದು ಕಂಡುಬಂದಿದೆ.

ವಿಡಿಯೋ ಹಂಚಿಕೊಂಡಿರುವ ಹಿರಿಯ ಲೇಖಕರಾದ ಪುರಷೋತ್ತಮ ಬಿಳಿಮಲೆಯವರು, “ಈ ಜನ ಬಹಳ ಕ್ರಿಯೇಟಿವ್‌ ಇದ್ದಾರಪ್ಪಾ! ಬಾಪ್ರೇ.. ವಾಟ್ಸಾಪ್‌ ತುಂಬಾ ಇದುವೇ.. ಇವರ ಸಿನೇಮಾ ಒಂದೂ ನೋಡಿರಲಿಲ್ಲ. ಇವತ್ತು ನೋಡಬೇಕು! ಸಖತ್‌ ಇಸ್ಟೈಲ್” ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪ್ರಚಾರ ಸಭೆಯಲ್ಲಿ ಕಿಚ್ಚ ಸುದೀಪ್ ಭಾಷಣದ ತುಣುಕು ಎಂದು ಸಿಕಂದರ್ ವಿಡಿಯೋ ಹಂಚಿಕೊಂಡಿದ್ದಾರೆ.

ಸುದೀಪ್‌ ಥರದ ನಟರು ಒಂದು ರಾಜಕೀಯ ನಿಲುವು ತೆಗೆದುಕೊಂಡರೆ ಅದನ್ನು ಧೈರ್ಯವಾಗಿ ಹೇಳುವ ಬದ್ಧತೆಯನ್ನೂ ತೋರಬೇಕು. ಇವತ್ತಿನ ಅವರ ಪತ್ರಿಕಾಗೋಷ್ಟಿಯ ಸಾರಾಂಶ ಏನೆಂದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಅದಕ್ಕೆ ಕಾರಣ ಏನೇ ಇರಲಿ, ಅವರು ಈ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್‌ ಪ್ರಚಾರಕ ಎಂಬುದು ದಿಟ. ಇಷ್ಟನ್ನು ನೇರವಾಗಿ ಹೇಳುವ ಬದಲು, ನಾನು ರಾಜಕೀಯಕ್ಕೆ ಬಂದಿಲ್ಲ, ಪಾರ್ಟಿ ಸೇರಿಲ್ಲ, ವೈಯಕ್ತಿಕ ಸಂಬಂಧ, ಸಹಾಯ-ಋಣ ಲಂಗು ಲೊಟ್ಟೆ ಅನ್ನೋದು ಒಂಥರಾ ಹೇಡಿತನ. ಸುದೀಪ್‌ ಗೆ ಬಿಜೆಪಿ ಅಂತಲ್ಲ, ಯಾವುದೇ ಪಾರ್ಟಿ ಸೇರುವ ವೈಯಕ್ತಿಕ ಆಯ್ಕೆ, ಹಕ್ಕು ಇದ್ದೇ ಇರುತ್ತದೆ. ಆದರೆ ತನಗೆ ಯಾವುದೇ ರಾಜಕೀಯ ನಿಲುವು ಇಲ್ಲ ಎಂಬಂತೆ ಮಾತನಾಡುತ್ತ ಒಂದು ಪಾರ್ಟಿಯನ್ನು ಬೆಂಬಲಿಸುವುದು ಗೋಸುಂಬೆತನ. ಇತರ ಪಕ್ಷವನ್ನು ಬೆಂಬಲಿಸುವ ತನ್ನ ಅಭಿಮಾನಿಗಳು ಎಲ್ಲಿ ದೂರ ಹೋಗುತ್ತಾರೋ ಎಂಬ ಲೆಕ್ಕಾಚಾರ ಅವರನ್ನು ಕಾಡುತ್ತಿರಬಹುದು. ಇದನ್ನು ಸಮಯಸಾಧಕತನ ಅಂತಾರೆ. ಸುದೀಪ್‌ ಗೆ ಇದು ಬೇಡವಾಗಿತ್ತು. ಒಂದೇ ಗೆರೆ ನಂಬು, ಇಲ್ಲದೇ ಇದ್ದರೆ ನೆರೆ ನಂಬು ಎಂಬುವ ಮಾತೊಂದಿದೆ. ಸುದೀಪ್‌ ಮಧ್ಯೆ ನಿಂತಿದ್ದಾರೆ, ಅಂಜುಬುರುಕನಂತೆ. ಸದಾ ಎಲ್ಲರಿಗೂ ಬೋಧನೆ ಮಾಡುವ ಸುದೀಪ್‌ ಅವರಿಗೆ ಇಷ್ಟು ಮಾತ್ರ ತಿಳಿಯದೇ ಹೋಯ್ತು ಎನ್ನುವಂತಿಲ್ಲ. ಇದು ಗೊತ್ತಿದ್ದೇ ತಂದುಕೊಂಡಿರುವ ಸನ್ನಿವೇಶ. ಅಂದಹಾಗೆ ಸುದೀಪ್‌ ಬಿಜೆಪಿಗೆ ಪ್ರಚಾರ ಮಾಡುವುದರಿಂದ ಅವರು ರಾಜಕೀಯವಾಗಿಯೂ ಸಾರ್ವಜನಿಕ ಜೀವನಕ್ಕೆ ಬಂದಿದ್ದಾರೆ. ಹೀಗಾಗಿ ಟೀಕೆ, ವಿಮರ್ಶೆಗಳು ಹೆಚ್ಚಲಿವೆ. ಅದನ್ನು ಎದುರಿಸಲೂ ಅವರು ಸಜ್ಜಾಗಿರಬೇಕು ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಬರೆದಿದ್ದಾರೆ.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...