Homeಮುಖಪುಟಇವಿಎಂ ಬದಲು ಬ್ಯಾಲೆಟ್ ಪೇಪರ್‌ ಮತದಾನಕ್ಕೆ ಮರಳಿದ ಬಾಂಗ್ಲಾದೇಶ

ಇವಿಎಂ ಬದಲು ಬ್ಯಾಲೆಟ್ ಪೇಪರ್‌ ಮತದಾನಕ್ಕೆ ಮರಳಿದ ಬಾಂಗ್ಲಾದೇಶ

- Advertisement -
- Advertisement -

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಪ್ರಭಾವ ಬೀರಬಹುದಾದ ಮಹತ್ವದ ಕ್ರಮವನ್ನು ನೆರೆಯ ಬಾಂಗ್ಲಾದೇಶ ತೆಗೆದುಕೊಂಡಿದೆ. ಮತದಾನಕ್ಕಾಗಿ ಇವಿಎಂ (ವಿದ್ಯುನ್ಮಾನ ಮತಯಂತ್ರ) ಬದಲು ಬ್ಯಾಲೇಟ್ ಪೇಪರ್‌ ಬಳಸಲು ಬಾಂಗ್ಲಾ ಮುಂದಾಗಿದೆ ಎಂದು ‘ನ್ಯಾಷನಲ್‌ ಹೆರಾಲ್ಡ್‌’ ವರದಿ ಮಾಡಿದೆ.

ಮತದಾನಕ್ಕಾಗಿ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ರದ್ದುಗೊಳಿಸಿರುವ ಬಾಂಗ್ಲಾದೇಶ ಚುನಾವಣಾ ಆಯೋಗವು (ಬಿಇಸಿ) ಮುಂದಿನ ಸಂಸತ್ತಿನ ಚುನಾವಣೆಯಲ್ಲಿ ಇವಿಎಂಗಳನ್ನು ಬಳಸದಿರಲು ನಿರ್ಧರಿಸಿದೆ. ಮುಂದಿನ ಜನವರಿ 24ರಂದು ಚುನಾವಣೆ ನಡೆಯಬಹುದು.

ಎಲ್ಲಾ 300 ಸಂಸದೀಯ ಸ್ಥಾನಗಳಿಗೆ ಬ್ಯಾಲೆಟ್ ಪೇಪರ್‌ಗಳು ಮತ್ತು ಪಾರದರ್ಶಕ ಬ್ಯಾಲೆಟ್ ಬಾಕ್ಸ್‌ಗಳನ್ನು ಬಳಸಿಕೊಂಡು ಮುಂದಿನ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಬಿಇಸಿ ನಿರ್ಧರಿಸಿದೆ ಎಂದು ಬಾಂಗ್ಲಾದೇಶದ ಚುನಾವಣಾ ಆಯುಕ್ತರು ಸೋಮವಾರ ತಿಳಿಸಿದ್ದಾರೆ.

“ಈ ಹಿಂದೆ, ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ 150 ಕ್ಷೇತ್ರಗಳಲ್ಲಿ ಮಾತ್ರ ಇವಿಎಂ ಬಳಸುವ ಯೋಜನೆಯನ್ನು ಚುನಾವಣಾ ಆಯೋಗ ಕೈಗೆತ್ತಿಕೊಂಡಿತ್ತು. ಆದರೆ, ಚುನಾವಣಾ ಆಯೋಗ ಯೋಜಿಸಿದ್ದ 8700 ಕೋಟಿ ಟಾಕಾ (ಬಾಂಗ್ಲಾದೇಶದ ಕರೆನ್ಸಿ) ಪ್ರಸ್ತಾವನೆಯನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗಲಿಲ್ಲ. ಇವಿಎಂಗಳ ನವೀಕರಣವನ್ನು ಸಹ ಸರ್ಕಾರವು ಅನುಮೋದಿಸಿರಲಿಲ್ಲ” ಎಂದು ಎಐಆರ್‌ ವರದಿ ಮಾಡಿದೆ.

ಕುತೂಹಲಕಾರಿ ಸಂಗತಿಯೆಂದರೆ ಇವಿಎಂಗಳನ್ನು ರದ್ದುಗೊಳಿಸುತ್ತಿರುವುದಕ್ಕೆ ಯಾವುದೇ ಕಾರಣವನ್ನು ಬಾಂಗ್ಲಾ ಚುನಾವಣಾ ಆಯೋಗ ನೀಡಿಲ್ಲ. ಇವಿಎಂಗಳನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಸೇರಿದಂತೆ ಪ್ರತಿಪಕ್ಷಗಳು ಆರೋಪಿಸಿದ್ದರಿಂದ ಜನರ ವಿಶ್ವಾಸಾರ್ಹತೆಯನ್ನು ಪಡೆಯುವುದಕ್ಕೆ ಶೇಖ್ ಹಸೀನಾ ಸರ್ಕಾರ ಬಯಸಲಿದೆ ಎಂದು ಊಹಿಸಲಾಗಿದೆ.

ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಬಾಂಗ್ಲಾದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಇವಿಎಂಗಳನ್ನು ಬಳಸುವುದಿಲ್ಲ. ಮಾಧ್ಯಮಗಳ ವರದಿ ಪ್ರಕಾರ ಈ ಬಾರಿ ಕನಿಷ್ಠ 150 ಕ್ಷೇತ್ರಗಳಲ್ಲಿ ಇವಿಎಂ ಮೂಲಕ ಮತದಾನ ನಡೆಸಲು ಬಿಇಸಿ ಸಿದ್ಧತೆ ನಡೆಸಿದೆ.

ಮತದಾನಕ್ಕಾಗಿ ಹಳೆಯ ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಹಿಂತಿರುಗಲು ಬಾಂಗ್ಲಾದೇಶ ನಿರ್ಧಾರ ಕೈಗೊಂಡಿರುವುದಿರಂದ ಭಾರತದಲ್ಲೂ ಚರ್ಚೆ ಹುಟ್ಟಿಕೊಳ್ಳಬಹುದು, ಇವಿಎಂ ಬದಲು ಬ್ಯಾಲೆಟ್ ಪೇಪರ್‌ ಬಳಸಿ ಎಂಬ ಬೇಡಿಕೆಗೆ ಮರುಜೀವ ಬರಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ. ಮತದಾನ ವ್ಯವಸ್ಥೆಯಲ್ಲಿ ಇವಿಎಂಗಳ ದುರ್ಬಳಕೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ಬಹುತೇಕ ವಿರೋಧ ಪಕ್ಷಗಳು ತೀವ್ರ ಕಳವಳ ವ್ಯಕ್ತಪಡಿಸುತ್ತಾ ಬಂದಿವೆ.

ಆದರೆ, ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಕೇಂದ್ರ ಸರ್ಕಾರ ಪದೇ ಪದೇ ಈ ಬೇಡಿಕೆಯನ್ನು ತಿರುಸ್ಕರಿಸುತ್ತಾ ಬಂದಿವೆ ಎಂದು ‘ನ್ಯಾಷನಲ್‌ ಹೆರಾಲ್ಡ್‌’ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...