Homeಕರ್ನಾಟಕದಿವಂಗತ ಆರ್‌.ಧ್ರುವನಾರಾಯಣ ಅವರ ಪತ್ನಿ ವೀಣಾ ನಿಧನ

ದಿವಂಗತ ಆರ್‌.ಧ್ರುವನಾರಾಯಣ ಅವರ ಪತ್ನಿ ವೀಣಾ ನಿಧನ

- Advertisement -
- Advertisement -

ಮಾರ್ಚ್ 11ರಂದು ನಿಧನರಾಗಿದ್ದ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಆರ್‌.ಧ್ರುವ ನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರು ಇಂದು (ಏ.7) ನಿಧನರಾಗಿದ್ದಾರೆ. ಕೇವಲ ಒಂದು ತಿಂಗಳ ಅಂತರದಲ್ಲೇ ಪತಿ-ಪತ್ನಿ ಇಬ್ಬರೂ ಇಹಲೋಕ ತ್ಯಜಿಸಿರುವುದು ಅವರ ಕುಟುಂಬಕ್ಕೆ ಭಾರೀ ದುಃಖ ತಂದಿದೆ.

ಬ್ರೈನ್ ಟ್ಯೂಮರ್‌‌ನಿಂದ ಬಳಲುತ್ತಿದ್ದ ವೀಣಾ (50) ಅವರು ಸುಮಾರು 16 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೀರ್ಘಕಾಲದಿಂದ ಅನಾರೋಗ್ಯದಲ್ಲಿದ್ದರಿಂದಾಗಿ, ಮೃತರ ಅಂತ್ಯಕ್ರಿಯೆನ್ನು ಶುಕ್ರವಾರ ಸಂಜೆಯೇ ಧ್ರುವನಾರಾಯಣ ಹುಟ್ಟೂರಾದ ಚಾಮರಾಜ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮಾ. 11ರಂದು ನಿಧನರಾಗಿದ್ದ ಧ್ರುವನಾರಾಯಣ ಅವರ ಅಂತ್ಯಕ್ರಿಯೆಯನ್ನು ಮಾ. 12ರಂದು ಹೆಗ್ಗವಾಡಿಯಲ್ಲೇ ನಡೆಸಲಾಗಿತ್ತು. ಅವರ ಸಮಾಧಿಯ ಪಕ್ಕದಲ್ಲೇ ವೀಣಾ ಅವರ ಅಂತ್ಯಕ್ರಿಯೆಯನ್ನೂ ನಡೆಸಲು ತೀರ್ಮಾನಿಸಿದೆ ಎಂದು ಅವರ ಕುಟುುಂಬದ ಮೂಲಗಳು ತಿಳಿಸಿವೆ.

ಕಳೆದ ಫೆಬ್ರುವರಿ ತಿಂಗಳು ವೀಣಾ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಚುನಾವಣೆ ಒತ್ತಡಗಳ ನಡುವೆಯೇ ಧ್ರುವ ಅವರು ತಮ್ಮ ಪತ್ನಿಯನ್ನು ಚೆನ್ನೈಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ನಂತರ ಧ್ರುವ ಅವರು ತೀರಿಕೊಂಡ ಮಾರನೇ ದಿನವೇ ಆಸ್ಪತ್ರೆಗೆ ವೀಣಾ ಅವರು ದಾಖಲಾಗಿದ್ದರು. ಅಂದಿನಿಂದಲೂ ಆಸ್ಪತ್ರೆಯಲ್ಲೇ ಇದ್ದರು. ಕಳೆದ ನಾಲ್ಕೈದು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದರು.

ನಿವೃತ್ತ ಆರ್‌ಎಫ್‌ಒ, ನಂಜನಗೂಡು ಗ್ರಾಮದ ಬದನವಾಳು ನಿವಾಸಿ ರಾಮಯ್ಯ ಅವರು ಧ್ರುವನಾರಾಯಣ ಅವರ ಸೋದರ ಮಾವ. ರಾಮಯ್ಯ ಅವರ ಮಗಳಾದ ವೀಣಾ ಅವರನ್ನು ಧ್ರುವ ವಿವಾಹವಾಗಿದ್ದರು. ವೀಣಾ ಅವರು ಬಿಎಸ್‌ಸಿ ಕಂಪ್ಯೂಟರ್‌ ಸೈನ್ಸ್‌ ಪದವೀಧರರಾಗಿದ್ದರು. ವೀಣಾ ಹಾಗೂ ಧ್ರುವ ದಂಪತಿಗೆ ಇಬ್ಬರು ಮಕ್ಕಳು (ದರ್ಶನ್‌ ಮತ್ತು ಬೀರನ್‌).

ಮಾ. 11ರಂದು ಧ್ರುವನಾರಾಯಣ್ ಅವರು ನಿಧನರಾಗಿದ್ದರು. ಅಂದು ಬೆಳಗಿನ ಜಾವದಲ್ಲಿ ಅವರಿಗೆ ಹೃದಯಾಘಾತವಾಗಿತ್ತು. ಮೈಸೂರಿನ ತಮ್ಮ ನಿವಾಸದಲ್ಲಿದ್ದ ಧ್ರುವನಾರಾಯಣ ಅವರನ್ನು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ನಿಧನರಾಗಿದ್ದರು. ಹೃದಯಾಘಾತ ಸಂಭವಿಸಿದಾಗಲೇ ಅವರು ತಮ್ಮ ಕಾರು ಚಾಲಕನಿಗೆ ಕರೆ ಮಾಡಿ, ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು.

ಕಾರಿನ ಚಾಲಕ ತಕ್ಷಣವೇ ಬಂದು ಅವರನ್ನು ಕಾರಿನಲ್ಲಿ ಕರೆದುಕೊಂಡು ಆಸ್ಪತ್ರೆಯನ್ನು ತಲುಪುವಷ್ಟರಲ್ಲಿ ತೀವ್ರವಾಗಿ ಅಸ್ವಸ್ಥರಾಗಿದ್ದ ಧ್ರುವನಾರಾಯಣ ಅವರು ಪ್ರಜ್ಞಾಶೂನ್ಯರಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಒಳಪಡಿಸಲಾಗಿತ್ತಾದರೂ ಅವರನ್ನು ಉಳಿಸಲಾಗಿರಲಿಲ್ಲ. ತಪಾಸಣೆ ನಡೆಸಿದ್ದ ವೈದ್ಯರು, ಧ್ರುವನಾರಾಯಣ ಅವರಿಗೆ ಹೃದಯಾಘಾತದಿಂದಾಗಿ ತೀವ್ರವಾಗಿ ಆಂತರಿಕ ರಕ್ತಸ್ರಾವವಾಗಿತ್ತು. ಉಸಿರಾಡಲೂ ಕಷ್ಟಪಡುತ್ತಿದ್ದ ಅವರು ಒಮ್ಮೆ ದೀರ್ಘವಾಗಿ ಉಸಿರು ಎಳೆದುಕೊಂಡಾಗ ರಕ್ತವು ಶ್ವಾಸಕೋಶದೊಳಕ್ಕೆ ನುಗ್ಗಿರುವುದರಿಂದ ಅವರ ಸಾವಿಗೆ ಕಾರಣ ಎಂದು ಹೇಳಿದ್ದರು.

ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಧ್ರುವನಾರಾಯಣ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬಹುತೇಕ ನಿರ್ಧರಿಸಿತ್ತು. ಆದರೆ ಅವರ ಹಠಾತ್‌ ನಿರ್ಗಮನದಿಂದಾಗಿ ಕಾಂಗ್ರೆಸ್‌ ನಲುಗಿ ಹೋಗಿತ್ತು. ಹೀಗಾಗಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಧ್ರುವ ನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ತಂದೆಯ ಸಾವಿನ ಆಘಾತದಿಂದ ಹಂತಹಂತವಾಗಿ ಹೊರಬಂದಿದ್ದ ದರ್ಶನ್, ಏ. 3ರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಶುರು ಮಾಡಿದ್ದರು. ಹಳ್ಳಿಹಳ್ಳಿಗಳಿಗೂ ತೆರಳಿ ಮತಯಾಚನೆ ಮಾಡಿದ್ದರು. ಆದರೆ, ಪ್ರಚಾರ ಆರಂಭಿಸಿದ ಮೂರನೇ ದಿನಗಳಲ್ಲಿ ತಾಯಿಯ ಸಾವಿನ ಬರಸಿಡಿಲು ಅವರಿಗೆ ತಟ್ಟಿದೆ. ಮಾ. 11ರಂದು ಧ್ರುವನಾರಾಯಣ ಅವರು ನಿಧನರಾಗಿದ್ದು, ಅದಾಗಿ ಒಂದು ತಿಂಗಳೊಳಗೇ ಈಗ ತಾಯಿಯನ್ನೂ ಕಳೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...