Homeಕರ್ನಾಟಕಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

- Advertisement -
- Advertisement -

ಗುಜರಾತ್ ಮೂಲಕ ಅಮುಲ್ ಹಾಲು ಮತ್ತು ಮೊಸರಿನ ಉತ್ಪನ್ನಗಳು ಬೆಂಗಳೂರು ಮಾರುಕಟ್ಟೆಗೆ ಲಗ್ಗೆ ಹಿಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದರಿಂದಾಗಿ ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ಮೇಲೆ ನಕರಾತ್ಮಕ ಪರಿಣಾಮ ಬೀರಲಿದ್ದು, ರೈತರಿಗೆ ಅನ್ಯಾಯವಾಗಲಿದೆ ಎಂಬ ಆತಂಕ ವ್ಯಕ್ತವಾಗಿದೆ. ಹಾಗಾಗಿ ಕನ್ನಡಿಗರು ಟ್ವಿಟರ್‌ನಲ್ಲಿ #SaveNandini #SaveKMF ಹ್ಯಾಸ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಿದ್ದಾರೆ.

ಈ ಹಿಂದೆ ಮಂಡ್ಯದಲ್ಲಿ ಅಮಿತ್ ಶಾರವರು ಕೆಎಂಎಫ್‌ನೊಂದಿಗೆ ಅಮುಲ್ ವಿಲೀನ ಮಾಡುವುದಾಗಿ ಹೇಳಿದ್ದಾಗಲೂ ಭಾರೀ ವಿರೋಧ ಕೇಳಿಬಂದಿತ್ತು. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ಪಕ್ಷಗಳು ಸಹ ಅಮುಲ್ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿವೆ.

“ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ….” ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.

ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ ಎಂದು ಅವರು ಆರೋಪಿಸಿದ್ದಾರೆ.

ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರವು ಹಾಲಿಗೆ ನೀಡುವ ಸಹಾಯಧನವನ್ನು ಲೀಟರಿಗೆ 5 ರೂ.ಗಳಷ್ಟು ಹೆಚ್ಚಿಸಿತ್ತು. ಇದರಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಈಗ ಕಡಿಮೆಯಾಗುತ್ತ ಸಾಗಲು ಕಾರಣವೇನು? ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಹಾಯಧನಕ್ಕಾಗಿ ರೈತರಿಗೆ ಕೊಟ್ಟಿದ್ದೆವು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1200 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಒದಗಿಸಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ. ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಕಿಡಿಕಾರಿದ್ದಾರೆ.

ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. ಅಮುಲ್ ಉತ್ಪನ್ನಗಳನ್ನು ಖರೀದಿಸವುದಿಲ್ಲ ಎಂದು ಕನ್ನಡಿಗರೆಲ್ಲರೂ ಪ್ರತಿಜ್ಞೆ ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣ ಮಧ್ಯಪ್ರವೇಶಿಸಿ ಹಿಂಬಾಗಿಲಿನಿಂದ ಪ್ರವೇಶಿಸುತ್ತಿರುವ ಅಮುಲ್ ಸಂಸ್ಥೆಯನ್ನು ತಡೆಯಬೇಕಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ರಾಜ್ಯದ ಜನಾಭಿಪ್ರಾಯವನ್ನು ಗಮನಕ್ಕೆ ತಂದು ಈ ದ್ರೋಹ ಚಿಂತನೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಜೆಡಿಎಸ್ ಪಕ್ಷ ಸಹ ಅಮುಲ್‌ಗೆ ವಿರೋಧ ವ್ಯಕ್ತಪಡಿಸಿದೆ. “ರಾಜ್ಯದೆಲ್ಲೆಡೆ ಕೆಎಂಎಫ್ ನಂದಿನಿಯ ಹಾಲು, ತುಪ್ಪ, ಬೆಣ್ಣೆ ಸಮರ್ಪಕವಾಗಿ ಸಿಗದೇ ಇರುವ ಸನ್ನಿವೇಶದಲ್ಲಿ ಗುಜರಾತ್ ನ ಅಮುಲ್ ಸಂಸ್ಥೆಯು ಆನ್ ಲೈನ್ ಮಾರುಕಟ್ಟೆಗೆ ಮುಂದಾಗಿರುವ ಈ ಬೆಳವಣಿಗೆ ಏನನ್ನು ಸೂಚಿಸುತ್ತಿದೆ? ನಂದಿನಿ ಹಾಲು ನಂಬಿ ಬದುಕುತ್ತಿರುವ ಅಸಂಖ್ಯ ಕನ್ನಡಿಗರ ಕೆಲಸದ ಮೇಲೆ ಇದು ಕರಿನೆರಳಿನಂತೆ ಭಾಸವಾಗುವುದಿಲ್ಲವೆ” ಎಂದು ಪ್ರಶ್ನಿಸಿದೆ.

ಕೆಎಂಎಫ್ ನಂದಿನಿ ಎಂಬ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆಯನ್ನು ಹಂತ ಹಂತವಾಗಿ ಮುಗಿಸುವ ದುಷ್ಟ ಯೋಜನೆಯ ಭಾಗವಾಗಿ ಈ ಬೆಳವಣಿಗೆ ಕಾಣುತ್ತಿದೆ. ನೇರವಾಗಿ ವಿಲೀನ ಮಾಡಲು ಸಾಧ್ಯವಿಲ್ಲದಾಗ, ಈ ರೀತಿಯ ಕುತಂತ್ರಗಳು ಶುರುವಾಗುತ್ತವೆ. ದೈತ್ಯ ಸಂಸ್ಥೆ ಜತೆ ಸ್ಪರ್ಧೆ ಇದು ಎಂದು ಸುಮ್ಮನೆ ಕುಳಿತರೆ, ಭವಿಷ್ಯ ಅಯೋಮಯವಾಗಲಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತೆ: ಕೆಎಂಎಫ್‌-ಅಮುಲ್ ವಿಲೀನ ಪ್ರಸ್ತಾಪಕ್ಕೆ ಎಚ್‌ಡಿಕೆ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....