Homeಕರ್ನಾಟಕಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿಗೆ ಸೇರ್ಪಡೆ

ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್‌ಕುಮಾರ್‌ ರೆಡ್ಡಿ ಬಿಜೆಪಿಗೆ ಸೇರ್ಪಡೆ

ಮಾಜಿ ಕೇಂದ್ರ ಸಚಿವ ಎ.ಕೆ.ಆಂಟನಿ ಅವರ ಪುತ್ರ ಅನಿಲ್ ಆಂಟನಿ ಇತ್ತೀಚೆಗೆ ಬಿಜೆಪಿಗೆ ಸೇರಿದ್ದರು.

- Advertisement -
- Advertisement -

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಕಿರಣ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕತ್ವದೊಂದಿಗಿನ ಭಿನ್ನಾಭಿಪ್ರಾಯವನ್ನು ಉಲ್ಲೇಖಿಸಿರುವ ರೆಡ್ಡಿ ಮಾರ್ಚ್ 12 ರಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. 2014ರಲ್ಲಿ ರಾಜ್ಯವನ್ನು ವಿಭಜಿಸಿ ತೆಲಂಗಾಣವನ್ನು ರಚಿಸುವ ಮೊದಲು, ಅಂದರೆ ಅವರು ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು.

ಬಿಜೆಪಿಗೆ ಸೇರ್ಪಡೆಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿರಣ್ ರೆಡ್ಡಿ, ‘ನಾನು ಕಾಂಗ್ರೆಸ್ ತೊರೆಯುತ್ತೇನೆ ಎಂದು ಊಹಿಸಿರಲಿಲ್ಲ. ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪತನಕ್ಕೆ ಪಕ್ಷದ ಉನ್ನತ ನಾಯಕತ್ವವೇ ಕಾರಣ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಉನ್ನತ ನಾಯಕರು ಜನರೊಂದಿಗೆ ಸಂವಹನ ನಡೆಸುವುದಿಲ್ಲ, ನಾಯಕರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವುದಿಲ್ಲ. ದುಃಖಕರ ವಿಚಾರವೆಂದರೆ ಅವರು ಯಾವನ್ನೂ ತಿದ್ದಿಕೊಳ್ಳಲು ಆಸಕ್ತಿ ಹೊಂದಿಲ್ಲ. ತಪ್ಪು ನಡೆದಿದ್ದರೆ ಅದನ್ನು ಒಪ್ಪಿಕೊಂಡು ಸರಿಪಡಿಸುವ ಪ್ರಯತ್ನ ಮಾಡಬೇಕು. ಕಾಂಗ್ರೆಸ್‌ನಲ್ಲಿ ಅಂತಹದ್ದೇನೂ ಇಲ್ಲ ಎಂದು ದೂರಿದ್ದಾರೆ.

“ಬಿಜೆಪಿ ರಾಷ್ಟ್ರದ ಹಿತದೃಷ್ಟಿಯಿಂದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಮತ್ತು ಬದ್ಧತೆಯಿಂದ ನಾನು ಪ್ರೇರಿತನಾಗಿದ್ದೇನೆ” ಎಂದು ಕಿರಣ್ ರೆಡ್ಡಿ ಹೇಳಿಕೊಂಡಿದ್ದಾರೆ.

ಮುಂದಿನ ವರ್ಷ ಆಂಧ್ರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ರೆಡ್ಡಿ ರಾಜೀನಾಮೆ ನೀಡಿದ್ದು, ಅಲ್ಲಿ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಕ್ಷ ನಾಯಕತ್ವಕ್ಕಾಗಿ ಪೈಪೋಟಿ ನಡೆಸುತ್ತಿವೆ.

ಈ ವಾರ ಬಿಜೆಪಿ ಸೇರಿದ ಎರಡನೇ ಕಾಂಗ್ರೆಸ್ ನಾಯಕ ರೆಡ್ಡಿಯವರಾಗೊದ್ದಾರೆ. ಗುರುವಾರ ಮಾಜಿ ಕಾಂಗ್ರೆಸ್ ನಾಯಕ ಅನಿಲ್ ಆಂಟೋನಿ ಕೂಡ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ಟೀಕಿಸಿದ ನಂತರ ಆಂಟನಿಯವರು ಜನವರಿ ದಿನಗಳಲ್ಲಿ ಕಾಂಗ್ರೆಸ್ ತೊರೆದಿದ್ದರು.

ಅನಿಲ್ ಆಂಟೋನಿಯವರು ಮಾಜಿ ಕೇಂದ್ರ ಸಚಿವ ಎಕೆ ಆಂಟನಿ ಅವರ ಪುತ್ರ. ಭಾರತದ ವಿರುದ್ಧ ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ ಹೊಂದಿರುವ ಸರ್ಕಾರಿ ಪ್ರಾಯೋಜಿತ ಚಾನೆಲ್ ಬಿಬಿಸಿ ಎಂದು ಅವರು ಟೀಕಿಸಿದ್ದರು.

ಗಾಂಧಿ ಕುಟುಂಬವನ್ನು ಹೆಸರಿಸದೆ ಟೀಕೆಗಳನ್ನು ಮಾಡಿದ್ದ ಅನಿಲ್ ಆಂಟನಿ, “ಅನೇಕ ಕಾಂಗ್ರೆಸ್ ನಾಯಕರು ಅವರಿಗಾಗಿ ಕೆಲಸ ಮಾಡುವುದು ತಮ್ಮ ಕರ್ತವ್ಯ ಎಂದು ನಂಬುತ್ತಾರೆ” ಎಂದು ಆರೋಪಿಸಿದ್ದರು.

“ಜನರಿಗಾಗಿ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ನಾನು ನಂಬುತ್ತೇನೆ. ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸ್ಪಷ್ಟ ದೃಷ್ಟಿಕೋನವನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...