Homeಮುಖಪುಟಸರ್ಕಾರಿ ಫ್ಯಾಕ್ಟ್‌ಚೆಕ್‌: ಐಟಿ ನಿಯಮಗಳ ತಿದ್ದುಪಡಿಗೆ ಪ್ರತಿಪಕ್ಷಗಳ ಆಕ್ರೋಶ

ಸರ್ಕಾರಿ ಫ್ಯಾಕ್ಟ್‌ಚೆಕ್‌: ಐಟಿ ನಿಯಮಗಳ ತಿದ್ದುಪಡಿಗೆ ಪ್ರತಿಪಕ್ಷಗಳ ಆಕ್ರೋಶ

- Advertisement -
- Advertisement -

ಸುಳ್ಳು ಸುದ್ದಿಗಳ ಪತ್ತೆಗಾಗಿ ಹೊಸ ಫ್ಯಾಕ್ಟ್‌ಚೆಕ್ ಸಂಸ್ಥೆ ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ನಿರ್ಧರಿಸಿರುವುದು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. “ಬಿಜೆಪಿಗಿರುವ ತೀವ್ರತರನಾದ ಅಭದ್ರತೆಯನ್ನು ಇದು ತೋರಿಸುತ್ತದೆ” ಎಂದು ಪ್ರತಿಪಕ್ಷಗಳು ಟೀಕಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಸರ್ಕಾರದ ಫ್ಯಾಕ್ಟ್‌ಚೆಕ್‌ ಸಂಸ್ಥೆಯು ಯಾವುದನ್ನು ಫೇಕ್‌ ಎಂದು ಗುರುತಿಸುತ್ತದೆಯೋ ಅದನ್ನು ನಿರ್ದಾಕ್ಷಿಣ್ಯವಾಗಿ ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕುವ ಕ್ರಮವನ್ನು ಸರ್ಕಾರ ಜರುಗಿಸಿದೆ.

2021 ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತಂದು ಫ್ಯಾಕ್ಟ್‌ಚೆಕ್‌ ಸಂಸ್ಥೆಯನ್ನು ರಚಿಸಲು ಮುಂದಾಗಿದೆ.

ಕಾಂಗ್ರೆಸ್ ಸಂವಹನ ಮುಖ್ಯಸ್ಥ ಜೈರಾಮ್ ರಮೇಶ್ ಶುಕ್ರವಾರ ಪ್ರತಿಕ್ರಿಯಿಸಿ, “ಮೋದಿ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳಬೇಕು. ಆರ್‌ಎಸ್‌ಎಸ್ ಜೊತೆಯಲ್ಲಿ ಸೇರಿಕೊಂಡು ಭಾರತದಲ್ಲಿ ನಕಲಿ ಸೃಷ್ಟಿಸುತ್ತಿರುವ ಅತಿದೊಡ್ಡ ನಿರ್ಮಾಪಕ ಬಿಜೆಪಿಯಾಗಿದೆ” ಎಂದು ಟೀಕಿಸಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ನಾಯಕ ಪವನ್ ಖೇರಾ ಪ್ರತಿಕ್ರಿಯಿಸಿ, “ಸರ್ಕಾರವೇ ನ್ಯಾಯಾಧೀಶರಂತೆ ವರ್ತಿಸುತ್ತಿದೆ, ತೀರ್ಪು ನೀಡುತ್ತಿದೆ, ಶಿಕ್ಷಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸರ್ಕಾರವು ಭಿನ್ನಾಭಿಪ್ರಾಯಗಳಿಗೆ ಹೆದರುತ್ತದೆ. ಪ್ರಶ್ನೆ ಕೇಳುವ ಮೂಲಕ, ಸತ್ಯಗಳನ್ನು ನುಡಿದು ಮೂಲೆಗುಂಪು ಮಾಡುವ ಯಾರಿಗಾದರೂ ಇವರು ಭಯಪಡುತ್ತಾರೆ. ಇದು ನಿಯಮವಾಗದಂತೆ ನಾವು ನಮ್ಮ ಎಲ್ಲಾ ಶಕ್ತಿಯನ್ನು ಮೀರಿ ವಿರೋಧಿಸಬೇಕು” ಎಂದಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಖಾತೆಯ ಮಾಜಿ ಸಚಿವ ಮನೀಶ್ ತಿವಾರಿ ಪ್ರತಿಕ್ರಿಯಿಸಿ, “ತಮ್ಮ ಬಗೆಗಿನ ಸುದ್ದಿಗಳನ್ನು ಪರಿಶೀಲಿಸಲು ಸಂಸ್ಥೆಯನ್ನು ಸ್ಥಾಪಿಸುವ ಕೇಂದ್ರದ ನಿರ್ಧಾರವು ಸೆನ್ಸಾರ್ಶಿಪ್ ವಿಧಿಸುವುದಕ್ಕೆ ಸಮಾನವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಯಾವ ಟೀಕೆ ನಕಲಿ ಮತ್ತು ಯಾವುದು ಅಸಲಿ ಎಂಬುದಕ್ಕೆ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಸುರಕ್ಷತಾ ಕ್ರಮಗಳನ್ನು ಸರ್ಕಾರದ ಅನುಸರಿಸದೆ, ಯಾವುದೇ ಮೇಲ್ಮನವಿ ಇಲ್ಲದೆಯೇ ಸರ್ಕಾರ ಅಂತಿಮ ತೀರ್ಪುಗಾರನಾಗುತ್ತಿರುವುದು ವಿಲಕ್ಷಣವಾಗಿದೆ” ಎಂದು ವಿರೋಧಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ ನೆಪದಲ್ಲಿ ಸತ್ಯಕ್ಕೆ ಮೂಗುದಾರ; ಇದು ಕೇಂದ್ರ ಸರ್ಕಾರದ ಹೊಸತಂತ್ರ

ಐಟಿ ನಿಯಮಗಳಿಗೆ ಮಾಡಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒತ್ತಾಯಿಸಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ ಮತ್ತು ಸ್ವೀಕಾರಾರ್ಹವಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ ಸಂಸದ ಮನೋಜ್ ಝಾ ಮಾತನಾಡಿ, “ಪ್ರಜಾಸತ್ತಾತ್ಮಕವಲ್ಲದ ಯಾವುದರ ಬಗ್ಗೆಯೂ ಸರ್ಕಾರ ಜಾಗರೂಕರಾಗಿರಬೇಕು. ನಿಮಗೆ ಅಸಹ್ಯಕರವಾದ ಯಾವುದನ್ನಾದರೂ ತೆಗೆದುಹಾಕಲು ನೀವು ಜನರನ್ನು ಒತ್ತಾಯಿಸುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಪ್ರತಿಕ್ರಿಯಿಸಿ, “ಬಿಜೆಪಿಯು ನಕಲಿ ಸುದ್ದಿಗಳನ್ನು ಸೃಷ್ಟಿಸುವ ಮಾಸ್ಟರ್. ಆದರೆ ಈಗ ವಿಷಯಗಳನ್ನು ನಿಯಂತ್ರಿಸಲು ಬಯಸುತ್ತಿದೆ” ಎಂದು ಕುಟುಕಿದ್ದಾರೆ.

ಆದರೆ ಪ್ರತಿಪಕ್ಷಗಳ ಟೀಕೆಯನ್ನು ತಳ್ಳಿಹಾಕಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, “ಪ್ರತಿಪಕ್ಷಗಳು ತಪ್ಪು ಮಾಹಿತಿಗಳನ್ನು ಹರಡುತ್ತಿವೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...