Homeಮುಖಪುಟಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಆಗ್ರಹವನ್ನು ಎನ್‌ಸಿಪಿ ವಿರೋಧಿಸಿದೆ

- Advertisement -
- Advertisement -

“ಅದಾನಿ ಗ್ರೂಪ್ ಕುರಿತು ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ ಸಂಸ್ಥೆ ಮಾಡಿದ ವರದಿಯು ಉದ್ದೇಶಿತ ದಾಳಿಯಾಗಿದೆ ಎಂದು ತೋರುತ್ತದೆ” ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಕಂಪನಿ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಮಿತ್ರಪಕ್ಷ ಕಾಂಗ್ರೆಸ್‌ ಇಡುತ್ತಿರುವ ಬೇಡಿಕೆಯನ್ನೂ ವಿರೋಧಿಸಿರುವ ಅವರು, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಈ ಆಗ್ರಹದಿಂದ ದೂರವಿದೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಗೌತಮ್ ಅದಾನಿಯವರಿಗೆ ಸೇರಿದ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಪವಾರ್ ಅವರು ಈ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು ಬಿಡುಗಡೆಯಾದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಅದಾನಿ ಗುಂಪಿನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿತು. ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ಅದಾನಿ ಗ್ರೂಪ್‌ ತೊಡಗಿಸಿಕೊಂಡಿದೆ ಎಂದು ವರದಿ ಬಹಿರಂಗಪಡಿಸಿತ್ತು.

“[ಅದಾನಿ ಗ್ರೂಪ್‌ ಕುರಿತು] ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಬಹಳ ಹಿಂದೆಯೇ ನೀಡಿದ್ದರು ಮತ್ತು ಕೆಲವು ದಿನಗಳ ಕಾಲ ಸಂಸತ್ತಿನಲ್ಲಿ ಗದ್ದಲವಾಗಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ” ಎಂದು ಪವಾರ್‌ ತಿಳಿಸಿದ್ದಾರೆ.

“ಈ ಹೇಳಿಕೆಯನ್ನು ನೀಡಿದ [ಹಿಂಡೆನ್‌ಬರ್ಗ್] ಸಂಸ್ಥೆ ಬಗ್ಗೆ ನಾವು ಎಂದಿಗೂ ಕೇಳಿರಲಿಲ್ಲ… ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಮುಂದೆ ತಂದಾಗ ಎಲ್ಲಾ ವೆಚ್ಚವನ್ನು ದೇಶದ ಆರ್ಥಿಕತೆ ಭರಿಸುತ್ತದೆ, ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ” ಎಂದಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸುತ್ತಿರುವುದೇಕೆ? ಎಂಬುದಕ್ಕೆ ಪವಾರ್‌ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಆದರೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ನೇಮಿಸಿದ ಸಮಿತಿಯು ಬಹಳ ಮಹತ್ವದ್ದಾಗಿದೆ ಎಂದು ನನಗೆ ತಿಳಿದಿದೆ. ಬಹುಶಃ ಒಂದು ಜಂಟಿ ಸಂಸದೀಯ ಸಮಿತಿ ಪ್ರಾರಂಭವಾದ ನಂತರ, ಅದರ ಕಾರ್ಯವಿಧಾನಗಳು ಪ್ರತಿದಿನವೂ ಮಾಧ್ಯಮಗಳಲ್ಲಿ ವರದಿಯಾಗುತ್ತವೆ ಎಂಬುದು ತಾರ್ಕಿಕವಾಗಿರಬಹುದು. ಬಹುಶಃ ಯಾರಾದರೂ ಎರಡು-ನಾಲ್ಕು ತಿಂಗಳವರೆಗೆ ಸಮಸ್ಯೆಯನ್ನು ಉಲ್ಬಣಗೊಳಿಸಬೇಕೆಂದು ಬಯಸಿರಬಹುದು, ಆದರೆ ಸತ್ಯವು ಎಂದಿಗೂ ಹೊರಬರುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ಸಮಿತಿಯನ್ನು ರಚಿಸಿರುವಾಗ ಸಂಸದೀಯ ತನಿಖೆಗೆ ಯಾವುದೇ ಮಹತ್ವವಿಲ್ಲ ಎಂದು ಹಿರಿಯ ರಾಜಕಾರಣಿ ಪವಾರ್‌‌ ಹೇಳಿದ್ದಾರೆ.

“ಸಂಸದೀಯ ಸಮಿತಿಯನ್ನು ನೇಮಿಸಿದರೆ, ಮೇಲ್ವಿಚಾರಣೆಯು ಆಡಳಿತ ಪಕ್ಷದಲ್ಲಿರುತ್ತದೆ” ಎಂದು ಅವರು ವಿವರಿಸಿದ್ದಾರೆ. “ಈಗಿನ ಆಗ್ರಹವು ಆಡಳಿತ ಪಕ್ಷದ ವಿರುದ್ಧವಾಗಿತ್ತು, ತನಿಖೆಗಾಗಿ ನೇಮಿಸಲಾದ ಸಮಿತಿಯಲ್ಲಿ ಆಡಳಿತ ಪಕ್ಷದ ಬಹುಮತವಿದ್ದರೆ, ಸತ್ಯವು ಹೇಗೆ ಹೊರಬರುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

“ಇಂದು, ಅಂಬಾನಿ ಪೆಟ್ರೋಕೆಮಿಕಲ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ, ದೇಶಕ್ಕೆ ಇದು ಅಗತ್ಯವಿಲ್ಲವೇ? ವಿದ್ಯುತ್ ಕ್ಷೇತ್ರದಲ್ಲಿ ಅದಾನಿ ಕೊಡುಗೆ ನೀಡಿದ್ದಾರೆ. ದೇಶಕ್ಕೆ ವಿದ್ಯುತ್ ಬೇಡವೇ? ಅಂತಹ ಜವಾಬ್ದಾರಿಯನ್ನು ಹೊತ್ತುಕೊಂಡು ದೇಶದ ಹೆಸರಿಗಾಗಿ ಕೆಲಸ ಮಾಡುವವರು ಇವರು” ಎಂದು ಬಣ್ಣಿಸಿದ್ದಾರೆ.

ಪವಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತನ್ನದೇ ಆದ ನಿಲುವು ಹೊಂದಿರಬಹುದು. ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪಗಳು ನೈಜ ಮತ್ತು ಅತ್ಯಂತ ಗಂಭೀರ ಎಂದು 19 ವಿರೋಧ ಪಕ್ಷಗಳು ಮನವರಿಕೆ ಮಾಡಿವೆ” ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ಎನ್‌ಸಿಪಿ ಸೇರಿದಂತೆ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...