Homeಮುಖಪುಟಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಆಗ್ರಹವನ್ನು ಎನ್‌ಸಿಪಿ ವಿರೋಧಿಸಿದೆ

- Advertisement -
- Advertisement -

“ಅದಾನಿ ಗ್ರೂಪ್ ಕುರಿತು ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ ಸಂಸ್ಥೆ ಮಾಡಿದ ವರದಿಯು ಉದ್ದೇಶಿತ ದಾಳಿಯಾಗಿದೆ ಎಂದು ತೋರುತ್ತದೆ” ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಕಂಪನಿ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಮಿತ್ರಪಕ್ಷ ಕಾಂಗ್ರೆಸ್‌ ಇಡುತ್ತಿರುವ ಬೇಡಿಕೆಯನ್ನೂ ವಿರೋಧಿಸಿರುವ ಅವರು, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಈ ಆಗ್ರಹದಿಂದ ದೂರವಿದೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಗೌತಮ್ ಅದಾನಿಯವರಿಗೆ ಸೇರಿದ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಪವಾರ್ ಅವರು ಈ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು ಬಿಡುಗಡೆಯಾದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಅದಾನಿ ಗುಂಪಿನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿತು. ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ಅದಾನಿ ಗ್ರೂಪ್‌ ತೊಡಗಿಸಿಕೊಂಡಿದೆ ಎಂದು ವರದಿ ಬಹಿರಂಗಪಡಿಸಿತ್ತು.

“[ಅದಾನಿ ಗ್ರೂಪ್‌ ಕುರಿತು] ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಬಹಳ ಹಿಂದೆಯೇ ನೀಡಿದ್ದರು ಮತ್ತು ಕೆಲವು ದಿನಗಳ ಕಾಲ ಸಂಸತ್ತಿನಲ್ಲಿ ಗದ್ದಲವಾಗಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ” ಎಂದು ಪವಾರ್‌ ತಿಳಿಸಿದ್ದಾರೆ.

“ಈ ಹೇಳಿಕೆಯನ್ನು ನೀಡಿದ [ಹಿಂಡೆನ್‌ಬರ್ಗ್] ಸಂಸ್ಥೆ ಬಗ್ಗೆ ನಾವು ಎಂದಿಗೂ ಕೇಳಿರಲಿಲ್ಲ… ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಮುಂದೆ ತಂದಾಗ ಎಲ್ಲಾ ವೆಚ್ಚವನ್ನು ದೇಶದ ಆರ್ಥಿಕತೆ ಭರಿಸುತ್ತದೆ, ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ” ಎಂದಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸುತ್ತಿರುವುದೇಕೆ? ಎಂಬುದಕ್ಕೆ ಪವಾರ್‌ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಆದರೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ನೇಮಿಸಿದ ಸಮಿತಿಯು ಬಹಳ ಮಹತ್ವದ್ದಾಗಿದೆ ಎಂದು ನನಗೆ ತಿಳಿದಿದೆ. ಬಹುಶಃ ಒಂದು ಜಂಟಿ ಸಂಸದೀಯ ಸಮಿತಿ ಪ್ರಾರಂಭವಾದ ನಂತರ, ಅದರ ಕಾರ್ಯವಿಧಾನಗಳು ಪ್ರತಿದಿನವೂ ಮಾಧ್ಯಮಗಳಲ್ಲಿ ವರದಿಯಾಗುತ್ತವೆ ಎಂಬುದು ತಾರ್ಕಿಕವಾಗಿರಬಹುದು. ಬಹುಶಃ ಯಾರಾದರೂ ಎರಡು-ನಾಲ್ಕು ತಿಂಗಳವರೆಗೆ ಸಮಸ್ಯೆಯನ್ನು ಉಲ್ಬಣಗೊಳಿಸಬೇಕೆಂದು ಬಯಸಿರಬಹುದು, ಆದರೆ ಸತ್ಯವು ಎಂದಿಗೂ ಹೊರಬರುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ಸಮಿತಿಯನ್ನು ರಚಿಸಿರುವಾಗ ಸಂಸದೀಯ ತನಿಖೆಗೆ ಯಾವುದೇ ಮಹತ್ವವಿಲ್ಲ ಎಂದು ಹಿರಿಯ ರಾಜಕಾರಣಿ ಪವಾರ್‌‌ ಹೇಳಿದ್ದಾರೆ.

“ಸಂಸದೀಯ ಸಮಿತಿಯನ್ನು ನೇಮಿಸಿದರೆ, ಮೇಲ್ವಿಚಾರಣೆಯು ಆಡಳಿತ ಪಕ್ಷದಲ್ಲಿರುತ್ತದೆ” ಎಂದು ಅವರು ವಿವರಿಸಿದ್ದಾರೆ. “ಈಗಿನ ಆಗ್ರಹವು ಆಡಳಿತ ಪಕ್ಷದ ವಿರುದ್ಧವಾಗಿತ್ತು, ತನಿಖೆಗಾಗಿ ನೇಮಿಸಲಾದ ಸಮಿತಿಯಲ್ಲಿ ಆಡಳಿತ ಪಕ್ಷದ ಬಹುಮತವಿದ್ದರೆ, ಸತ್ಯವು ಹೇಗೆ ಹೊರಬರುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

“ಇಂದು, ಅಂಬಾನಿ ಪೆಟ್ರೋಕೆಮಿಕಲ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ, ದೇಶಕ್ಕೆ ಇದು ಅಗತ್ಯವಿಲ್ಲವೇ? ವಿದ್ಯುತ್ ಕ್ಷೇತ್ರದಲ್ಲಿ ಅದಾನಿ ಕೊಡುಗೆ ನೀಡಿದ್ದಾರೆ. ದೇಶಕ್ಕೆ ವಿದ್ಯುತ್ ಬೇಡವೇ? ಅಂತಹ ಜವಾಬ್ದಾರಿಯನ್ನು ಹೊತ್ತುಕೊಂಡು ದೇಶದ ಹೆಸರಿಗಾಗಿ ಕೆಲಸ ಮಾಡುವವರು ಇವರು” ಎಂದು ಬಣ್ಣಿಸಿದ್ದಾರೆ.

ಪವಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತನ್ನದೇ ಆದ ನಿಲುವು ಹೊಂದಿರಬಹುದು. ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪಗಳು ನೈಜ ಮತ್ತು ಅತ್ಯಂತ ಗಂಭೀರ ಎಂದು 19 ವಿರೋಧ ಪಕ್ಷಗಳು ಮನವರಿಕೆ ಮಾಡಿವೆ” ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ಎನ್‌ಸಿಪಿ ಸೇರಿದಂತೆ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...