Homeಮುಖಪುಟಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಆಗ್ರಹವನ್ನು ಎನ್‌ಸಿಪಿ ವಿರೋಧಿಸಿದೆ

- Advertisement -
- Advertisement -

“ಅದಾನಿ ಗ್ರೂಪ್ ಕುರಿತು ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ ಸಂಸ್ಥೆ ಮಾಡಿದ ವರದಿಯು ಉದ್ದೇಶಿತ ದಾಳಿಯಾಗಿದೆ ಎಂದು ತೋರುತ್ತದೆ” ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಕಂಪನಿ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂದು ಮಿತ್ರಪಕ್ಷ ಕಾಂಗ್ರೆಸ್‌ ಇಡುತ್ತಿರುವ ಬೇಡಿಕೆಯನ್ನೂ ವಿರೋಧಿಸಿರುವ ಅವರು, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಈ ಆಗ್ರಹದಿಂದ ದೂರವಿದೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಗೌತಮ್ ಅದಾನಿಯವರಿಗೆ ಸೇರಿದ ಎನ್‌ಡಿಟಿವಿಯೊಂದಿಗಿನ ಸಂದರ್ಶನದಲ್ಲಿ ಪವಾರ್ ಅವರು ಈ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು ಬಿಡುಗಡೆಯಾದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯು ಅದಾನಿ ಗುಂಪಿನ ಮೇಲೆ ಗುರುತರವಾದ ಆರೋಪಗಳನ್ನು ಮಾಡಿತು. ಸ್ಟಾಕ್ ಮ್ಯಾನಿಪ್ಯುಲೇಷನ್, ಅಕೌಂಟಿಂಗ್ ವಂಚನೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ಅದಾನಿ ಗ್ರೂಪ್‌ ತೊಡಗಿಸಿಕೊಂಡಿದೆ ಎಂದು ವರದಿ ಬಹಿರಂಗಪಡಿಸಿತ್ತು.

“[ಅದಾನಿ ಗ್ರೂಪ್‌ ಕುರಿತು] ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಬಹಳ ಹಿಂದೆಯೇ ನೀಡಿದ್ದರು ಮತ್ತು ಕೆಲವು ದಿನಗಳ ಕಾಲ ಸಂಸತ್ತಿನಲ್ಲಿ ಗದ್ದಲವಾಗಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ” ಎಂದು ಪವಾರ್‌ ತಿಳಿಸಿದ್ದಾರೆ.

“ಈ ಹೇಳಿಕೆಯನ್ನು ನೀಡಿದ [ಹಿಂಡೆನ್‌ಬರ್ಗ್] ಸಂಸ್ಥೆ ಬಗ್ಗೆ ನಾವು ಎಂದಿಗೂ ಕೇಳಿರಲಿಲ್ಲ… ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಮುಂದೆ ತಂದಾಗ ಎಲ್ಲಾ ವೆಚ್ಚವನ್ನು ದೇಶದ ಆರ್ಥಿಕತೆ ಭರಿಸುತ್ತದೆ, ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ” ಎಂದಿದ್ದಾರೆ.

ಜಂಟಿ ಸಂಸದೀಯ ಸಮಿತಿಯ ತನಿಖೆಯನ್ನು ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸುತ್ತಿರುವುದೇಕೆ? ಎಂಬುದಕ್ಕೆ ಪವಾರ್‌ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

“ಆದರೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ನೇಮಿಸಿದ ಸಮಿತಿಯು ಬಹಳ ಮಹತ್ವದ್ದಾಗಿದೆ ಎಂದು ನನಗೆ ತಿಳಿದಿದೆ. ಬಹುಶಃ ಒಂದು ಜಂಟಿ ಸಂಸದೀಯ ಸಮಿತಿ ಪ್ರಾರಂಭವಾದ ನಂತರ, ಅದರ ಕಾರ್ಯವಿಧಾನಗಳು ಪ್ರತಿದಿನವೂ ಮಾಧ್ಯಮಗಳಲ್ಲಿ ವರದಿಯಾಗುತ್ತವೆ ಎಂಬುದು ತಾರ್ಕಿಕವಾಗಿರಬಹುದು. ಬಹುಶಃ ಯಾರಾದರೂ ಎರಡು-ನಾಲ್ಕು ತಿಂಗಳವರೆಗೆ ಸಮಸ್ಯೆಯನ್ನು ಉಲ್ಬಣಗೊಳಿಸಬೇಕೆಂದು ಬಯಸಿರಬಹುದು, ಆದರೆ ಸತ್ಯವು ಎಂದಿಗೂ ಹೊರಬರುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ಸಮಿತಿಯನ್ನು ರಚಿಸಿರುವಾಗ ಸಂಸದೀಯ ತನಿಖೆಗೆ ಯಾವುದೇ ಮಹತ್ವವಿಲ್ಲ ಎಂದು ಹಿರಿಯ ರಾಜಕಾರಣಿ ಪವಾರ್‌‌ ಹೇಳಿದ್ದಾರೆ.

“ಸಂಸದೀಯ ಸಮಿತಿಯನ್ನು ನೇಮಿಸಿದರೆ, ಮೇಲ್ವಿಚಾರಣೆಯು ಆಡಳಿತ ಪಕ್ಷದಲ್ಲಿರುತ್ತದೆ” ಎಂದು ಅವರು ವಿವರಿಸಿದ್ದಾರೆ. “ಈಗಿನ ಆಗ್ರಹವು ಆಡಳಿತ ಪಕ್ಷದ ವಿರುದ್ಧವಾಗಿತ್ತು, ತನಿಖೆಗಾಗಿ ನೇಮಿಸಲಾದ ಸಮಿತಿಯಲ್ಲಿ ಆಡಳಿತ ಪಕ್ಷದ ಬಹುಮತವಿದ್ದರೆ, ಸತ್ಯವು ಹೇಗೆ ಹೊರಬರುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಗ್ರೂಪ್‌ನಲ್ಲಿ ಮಾರಿಷಸ್ ಫಂಡ್ ಬಗ್ಗೆ SEBI ತನಿಖೆ ಏಕಿಲ್ಲ? ರಘುರಾಮ್ ರಾಜನ್ ಪ್ರಶ್ನೆ

ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

“ಇಂದು, ಅಂಬಾನಿ ಪೆಟ್ರೋಕೆಮಿಕಲ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ, ದೇಶಕ್ಕೆ ಇದು ಅಗತ್ಯವಿಲ್ಲವೇ? ವಿದ್ಯುತ್ ಕ್ಷೇತ್ರದಲ್ಲಿ ಅದಾನಿ ಕೊಡುಗೆ ನೀಡಿದ್ದಾರೆ. ದೇಶಕ್ಕೆ ವಿದ್ಯುತ್ ಬೇಡವೇ? ಅಂತಹ ಜವಾಬ್ದಾರಿಯನ್ನು ಹೊತ್ತುಕೊಂಡು ದೇಶದ ಹೆಸರಿಗಾಗಿ ಕೆಲಸ ಮಾಡುವವರು ಇವರು” ಎಂದು ಬಣ್ಣಿಸಿದ್ದಾರೆ.

ಪವಾರ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ತನ್ನದೇ ಆದ ನಿಲುವು ಹೊಂದಿರಬಹುದು. ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪಗಳು ನೈಜ ಮತ್ತು ಅತ್ಯಂತ ಗಂಭೀರ ಎಂದು 19 ವಿರೋಧ ಪಕ್ಷಗಳು ಮನವರಿಕೆ ಮಾಡಿವೆ” ಎಂದಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ಭಾರತೀಯ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವಲ್ಲಿ ಎನ್‌ಸಿಪಿ ಸೇರಿದಂತೆ ಪ್ರತಿಪಕ್ಷಗಳು ಒಗ್ಗಟ್ಟಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...