Homeಕರ್ನಾಟಕಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

“ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ”

- Advertisement -
- Advertisement -

“ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ಮೂರನೇ ಸಂಚು ನಡೆದಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಮುಲ್ ಜತೆ ನಂದಿನಿ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಹೇಳಿಕೆ ನೀಡಿದ್ದು ಮೊದಲ ಸಂಚಾಗಿತ್ತು. ಮೊಸರಿನ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಎರಡನೇ ಸಂಚಾಗಿತ್ತು. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಗಿವೆ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ” ಎಂದು ಅವರು ಆರೋಪಿಸಿದ್ದಾರೆ.

ಅಮುಲ್‌ ಹಾಲು, ಮೊಸರು ಮಾರಾಟಕ್ಕಾಗಿ ನಂದಿನಿ ಹಾಲು, ಮೊಸರಿನ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡಿದ್ದಾರೆ.

“ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ʼಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್‌ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್‌ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ” ಎಂದು ದೂರಿದ್ದಾರೆ.

“ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ.ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ” ಎಂದು ತಿಳಿಸಿದ್ದಾರೆ.

“ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ” ಎಂದಿದ್ದಾರೆ.

“ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್‌ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ” ಎಂದು ಟೀಕಿಸಿದ್ದಾರೆ.

“ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಎಚ್‌.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಎಚ್‌.ಡಿ.ರೇವಣ್ಣ ಅವರು ಕೆ.ಎಂ.ಎಫ್‌. ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್‌ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

“ಅಷ್ಟೇ ಅಲ್ಲ;‌ ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ʼಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್‌ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ” ಎಂದು ಎಚ್ಚರಿಸಿದೆ.

“ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದು ಕರೆ ನೀಡಿದ್ದಾರೆ.

“ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್‌ನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಮನವಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...