Homeಕರ್ನಾಟಕಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

“ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ”

- Advertisement -
- Advertisement -

“ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ಮೂರನೇ ಸಂಚು ನಡೆದಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಮುಲ್ ಜತೆ ನಂದಿನಿ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಹೇಳಿಕೆ ನೀಡಿದ್ದು ಮೊದಲ ಸಂಚಾಗಿತ್ತು. ಮೊಸರಿನ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಎರಡನೇ ಸಂಚಾಗಿತ್ತು. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಗಿವೆ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರಕಾರ ಹೊರಟಿದೆ” ಎಂದು ಅವರು ಆರೋಪಿಸಿದ್ದಾರೆ.

ಅಮುಲ್‌ ಹಾಲು, ಮೊಸರು ಮಾರಾಟಕ್ಕಾಗಿ ನಂದಿನಿ ಹಾಲು, ಮೊಸರಿನ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪಗಳು ಬಂದಿರುವ ಹಿನ್ನೆಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡಿದ್ದಾರೆ.

“ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್ʼಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್‌ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್‌ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ” ಎಂದು ದೂರಿದ್ದಾರೆ.

“ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ, ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ.ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ” ಎಂದು ತಿಳಿಸಿದ್ದಾರೆ.

“ಬಿಜೆಪಿ ಡಬಲ್ ಎಂಜನ್ ಸರಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ” ಎಂದಿದ್ದಾರೆ.

“ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್‌ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ” ಎಂದು ಟೀಕಿಸಿದ್ದಾರೆ.

“ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು. ಎಚ್‌.ಡಿ.ದೇವೇಗೌಡರು ಪ್ರಧಾನಿ ಆಗಿದ್ದಾಗ, ಎಚ್‌.ಡಿ.ರೇವಣ್ಣ ಅವರು ಕೆ.ಎಂ.ಎಫ್‌. ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್ ಐಸ್‌ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ” ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿರಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

“ಅಷ್ಟೇ ಅಲ್ಲ;‌ ರಾಜ್ಯ ಸರಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್ʼಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್‌ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ” ಎಂದು ಎಚ್ಚರಿಸಿದೆ.

“ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದು ಕರೆ ನೀಡಿದ್ದಾರೆ.

“ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್‌ನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಮನವಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...