Homeಮುಖಪುಟಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

- Advertisement -
- Advertisement -

ರಾಮನವಮಿ ಹಬ್ಬಕ್ಕೆ ಮುನ್ನ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸುವ ಸಲುವಾಗಿ ಅಖಿಲ ಭಾರತ ಹಿಂದೂ ಮಹಾಸಭಾದ ಸದಸ್ಯರು ಹಸುವನ್ನು ಕೊಂದಿರುವ ಘಟನೆ ಆಗ್ರಾದಲ್ಲಿ ನಡೆದಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ನಕಿಮ್, ಮೊಹಮ್ಮದ್ ಶಾನು ಮತ್ತು ಇಮ್ರಾನ್ ಖುರೇಷಿ ಎಂಬ ನಾಲ್ವರ ವಿರುದ್ಧ ಆಗ್ರಾ ಪೊಲೀಸರು ಗೋಹತ್ಯೆ ಆರೋಪದ ಮೇಲೆ ದೂರು ದಾಖಲಿಸಿದ್ದರು. ಆದರೆ, ನಾಲ್ವರು ವ್ಯಕ್ತಿಗಳಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸ್ ತನಿಖೆಯ ನಂತರ ತಿಳಿದುಬಂದಿದೆ.

“ಹಿಂದೂ ಮಹಾಸಭಾ ನಾಯಕ ಸಂಜಯ್ ಜಾಟ್ ಮುಖ್ಯ ಸಂಚುಕೋರನಾಗಿದ್ದೇನೆ” ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ಆರ್.ಕೆ.ಸಿಂಗ್ ಅವರು ‘ದಿ ಟೆಲಿಗ್ರಾಫ್‌’ಗೆ ತಿಳಿಸಿದ್ದಾರೆ.

“ಈತನ ಫಾಲೋವರ್ಸ್ ಮತ್ತು ಸ್ನೇಹಿತರು ಮಾರ್ಚ್ 29 ರ ರಾತ್ರಿ ಮೆಹ್ತಾಬ್ ಬಾಗ್ ಪ್ರದೇಶದಲ್ಲಿ ಹಸುವನ್ನು ಕೊಂದಿದ್ದರು. ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ನಕಿಮ್ ಮತ್ತು ಮೊಹಮ್ಮದ್ ಶಾನು ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷದ ಸದಸ್ಯ ಜಿತೇಂದ್ರ ಕುಶ್ವಾಹಾ ಎಂಬಾತನಿಗೆ ಹೇಳಿದ್ದರು” ಎಂಬುದು ಬಯಲಾಗಿದೆ.

ಮರುದಿನ ಖುರೇಷಿ ಮತ್ತು ಶಾನು ಅವರನ್ನು ಬಂಧಿಸಲಾಯಿತು. ಆದರೆ ಹಿಂದೂ ಮಹಾಸಭಾದ ವಕ್ತಾರನಾದ ಸಂಜಯ್‌ ಜಾಟ್‌‌ನಿಗೆ ಇವರ ಮೇಲೆ ದ್ವೇಷವಿತ್ತು. ಆ ಕಾರಣದಿಂದಾಗಿ ಈ ವ್ಯಕ್ತಿಗಳ ಗುಂಪನ್ನು ಪ್ರಕರಣದಲ್ಲಿ ಸಿಲುಕಿಸಲು ಬಯಸಿದ್ದನು ಎಂಬುದು ನಂತರದ ತನಿಖೆಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ವಿಚಾರಣೆಯ ಸಮಯದಲ್ಲಿ ಜಿತೇಂದ್ರ [ಕುಶ್ವಾಹ] ನಮಗೆ ಸುಳ್ಳು ಹೇಳಿರುವುದು ತಿಳಿದುಬಂದಿದೆ” ಎಂದು ಆರ್.ಕೆ.ಸಿಂಗ್‌ ಅವರು ದಿ ಟೆಲಿಗ್ರಾಫ್‌ನೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಆತ ಮತ್ತು ಸಂಜಯ್, ಇನ್ನೂ ಕೆಲವರು ಗೋಹತ್ಯೆಯ ಸ್ಥಳದ ಸಮೀಪದಲ್ಲಿದ್ದರು ಎಂಬುದು ಫೋನ್‌ ಕರೆಗಳ ದಾಖಲೆಗಳಿಂದ ತಿಳಿದುಬಂದಿದೆ. ಇವರು ದೂರಿನಲ್ಲಿ ಹೆಸರಿಸಿದ ಆರೋಪಿಗಳು ಒಂದು ತಿಂಗಳಿನಿಂದ ಆ ಸ್ಥಳಕ್ಕೆ ಹೋಗಿಲ್ಲ ಎಂಬುದು ಫೋನ್‌ ಕರೆಯ ದಾಖಲೆಗಳಿಂದ ಸ್ಪಷ್ಟವಾಗಿದೆ” ಎಂದಿದ್ದಾರೆ.

ಖುರೇಷಿ ಮತ್ತು ಶಾನು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಪ್ರತಿಕ್ರಿಯೆ ನೀಡಿರುವ ಸಂಜಯ್‌, “ಪೊಲೀಸರು ನಮ್ಮನ್ನು ಈ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ” ಎಂದು ವಾದಿಸಿದ್ದಾನೆ. “ಪ್ರಕರಣವನ್ನು ಸರಿಯಾಗಿ ತನಿಖೆ ಮಾಡದಿದ್ದರೆ ನಾವು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿರಿ: ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ ಎಚ್‌ಡಿಕೆ ಖಂಡನೆ

ಸುಲಿಗೆ ಪ್ರಕರಣದಲ್ಲಿ ಸಿಲುಕಿದ್ದ ಸಂಜಯ್‌ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾನೆ. ಆತ ಮತ್ತು ಆತನ ಬೆಂಬಲಿಗರು ಆಗಾಗ್ಗೆ ಗೋಮಾಂಸ ಸಾಗಿಸುವ ವಾಹನಗಳನ್ನು ತಡೆದು ನಿಲ್ಲಿಸಿ ಬೆದರಿಸುತ್ತಾರೆಂಬುದು ತಿಳಿದುಬಂದಿದೆ. ಹಣ ಕೊಡದಿದ್ದರೆ ಪೊಲೀಸ್ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸಿ ಸುಲಿಗೆ ಮಾಡುವ ದಂಧೆಯಲ್ಲಿ ಇವರು ತೊಡಗಿದ್ದಾರೆಂದು ಪೊಲೀಸರು ಹೇಳಿರುವುದಾಗಿ ‘ದಿ ಟೆಲಿಗ್ರಾಫ್‌’ ವರದಿ ಮಾಡಿದೆ.

ಇಂತಹದ್ದೇ ಪ್ರಕರಣ ಇತ್ತೀಚೆಗೆ ರಾಜ್ಯದ ರಾಮನಗರ ಜಿಲ್ಲೆಯ ಸಾತನೂರಿನ ಬಳಿ ನಡೆದಿತ್ತು. ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಮತ್ತು ಆತನ ಸಂಗಡಿಗರು ಗೋರಕ್ಷಣೆಯ ಹೆಸರಿನಲ್ಲಿ ಮಂಡ್ಯ ನಿವಾಸಿ ಇದ್ರೀಶ್ ಪಾಶಾ ಎಂಬವರನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಜೊತೆಗೆ ಎರಡು ಲಕ್ಷ ರೂ.ಗಳ ಬೇಡಿಕೆಯನ್ನು ಪುನೀತ್‌ ಕೆರೆಹಳ್ಳಿ ಗ್ಯಾಂಗ್‌ ಇಟ್ಟಿತ್ತು ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...