Homeಕರ್ನಾಟಕದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

- Advertisement -
- Advertisement -

ದೇಶ- ವಿದೇಶಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಆದರೆ ಸ್ಥಳೀಯವಾಗಿ ಕರ್ನಾಟಕದಲ್ಲಿ ಮಾತ್ರ ನಂದಿನಿ ಹಾಲು ಸಿಗುತ್ತಿಲ್ಲ. ಬೆಂಗಳೂರಿನ ನಂದಿನಿ ಮಿಲ್ಕ್ ಪಾರ್ಲರ್‌ ಗಳಲ್ಲಿ ನಂದಿನಿ ಉತ್ಪನ್ನಗಳು ಸಿಗುತ್ತಿಲ್ಲ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಸೇರಿ ವಿವಿಧ ದೇಶಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಿಗುತ್ತವೆ. ಪ್ರಮುಖವಾಗಿ ಸಿಂಗಪುರ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ನಂದಿನಿ ಹಾಲಿನ ಉತ್ಪನ್ನಗಳು ಪೂರೈಕೆಯಾಗುತ್ತಿವೆ.

ರಾಜ್ಯದಲ್ಲಿ ನಂದಿನಿ ಉತ್ಪನ್ನ ಪೂರೈಕೆ ಕಡಿಮೆಯಾಗಿರುವುದನ್ನೇ ನೋಡಿಕೊಂಡು ಅಮುಲ್ ಹಾಲು ಮತ್ತು ಮೊಸರನ್ನು ಇ–ಕಾಮರ್ಸ್‌ ಮೂಲಕ ಮಾರುಕಟ್ಟೆಗೆ ಪ್ರವೇಶ ಮಾಡಿಸಲಾಗುತ್ತಿದೆ. ಈ ಹಿಂದೆ ಕೆಎಂಎಫ್ ಮತ್ತು ಅಮುಲ್ ವಿಲೀನದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತಾಪಿಸಿದ್ದರು. ಆದರೆ ರಾಜ್ಯದಲ್ಲಿ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಇದೀಗ ಕೃತಕ ಅಭಾವ ಸೃಷ್ಟಿಸಿ, ಅಮುಲ್‌ನ್ನು ರಾಜ್ಯದಲ್ಲಿ ಪ್ರವೇಶ ಮಾಡಿಸಲಾಗುತ್ತಿದೆ ಎನ್ನುವ ಅನುಮಾನ ರೈತರು ಮತ್ತು ಗ್ರಾಹಕರಲ್ಲಿ ಮೂಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ”ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದಿದ್ದಾರೆ.

”ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಬಂದು ಹೋದ ಬಳಿಕ ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಾಗಿತ್ತು, ಅದರಂತೆ ಹಾಲು ಶೇಖರಣೆ ಪ್ರಮಾಣವೂ ಹೆಚ್ಚಾಗಿತ್ತು. ಕೆಎಮ್‌ಎಫ್‌ ದಿನಕ್ಕೆ 96 ಲಕ್ಷ ಕೆ.ಜಿ ತನಕವೂ ಹಾಲು ಸಂಗ್ರಹ ಮಾಡುವ ಮೂಲಕ ದಾಖಲೆ ಬರೆದಿತ್ತು. ಹಾಲಿನ ಪ್ರಮಾಣ ಏರಿಕೆಯಾದ ಬಳಿಕ ಕೆಎಂಎಫ್ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿಕೊಂಡಿದೆ. ಹಾಲಿನ ಪುಡಿ, ಐಸ್‌ಕ್ರೀಮ್, ಚೀಸ್‌, ಬೆಣ್ಣೆ, ತುಪ್ಪ, ಸಿಹಿ ತಿನಿಸು ತಯಾರಿಕೆಯನ್ನೂ ಹೆಚ್ಚಳ ಮಾಡಿಕೊಂಡಿದೆ. ಶಾಲಾ ಮಕ್ಕಳಿಗೆ, ಮಿಲಿಟರಿ ಕ್ಯಾಂಪ್‌ಗಳಿಗೆ ಗುಡ್‌ಲೈಫ್ ಹಾಲು ಪೂರೈಕೆಯಾಗುತ್ತಿದೆ.

ಆದರೆ ಕೆಲದಿನಗಳಿಂದ ಹಾಲು ಸಂಗ್ರಹ ಪ್ರಮಾಣ ಸರಾಸರಿ 76 ಲಕ್ಷ ಕೆ.ಜಿಗೆ ಇಳಿಕೆಯಾಗಿದೆ. 20 ಲಕ್ಷ ಕೆ.ಜಿ ಹಾಲು ಕಡಿಮೆಯಾಗಿದ್ದು, ಈ ವ್ಯತ್ಯಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕೆಎಂಎಫ್ ಅಧಿಕಾರಿಗಳು ಮಾತನಾಡಿ, ”ಬೇಸಿಗೆಯಲ್ಲಿ ಹಾಲು ಉತ್ಪಾದನೆ ಕಡಿಮೆಯಾಗುವುದು ಸಾಮಾನ್ಯ. ಒಂದು ದಿನ ಮಾತ್ರ 96 ಲಕ್ಷ ಕೆ.ಜಿ ತನಕ ಹೋಗಿತ್ತು. ನಿತ್ಯ ಹಾಲು ಸಂಗ್ರಹ ಪ್ರಮಾಣ ಸರಾಸರಿ 81 ಲಕ್ಷ ಕೆ.ಜಿ. ಇತ್ತು. ಈಗ 5 ಲಕ್ಷ ಕೆ.ಜಿ ಕಡಿಮೆಯಾಗಿದ್ದು, ಹಾಲಿನ ಪುಡಿ ಸೇರಿ ಬೇರೆ ಉತ್ಪನ್ನಗಳ ತಯಾರಿಕೆ ಕಡಿಮೆ ಮಾಡಿ ಗ್ರಾಹಕರಿಗೆ ಹಾಲು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಹಾಲು ಸಂಗ್ರಹ ಕಡಿಮೆಯಾಗುತ್ತಿರುವ ಬಗ್ಗೆ ಹಾಲು ಒಕ್ಕೂಟ ಪ್ರತಿಕ್ರಿಯಿಸಿದ್ದು, ”ರೈತರಿಂದ ಹಾಲು ಖರೀದಿಯ ದರ ಕಡಿಮೆ ಇದೆ. ಇದೇ ಕಾರಣಕ್ಕೆ ಹಾಲು ಸಂಗ್ರಹ ಪ್ರಮಾಣ ಕಡಿಮೆಯಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ”ಬೇರೆ ರಾಜ್ಯಗಳಲ್ಲಿ ರೈತರಿಂದ ಲೀಟರ್‌ ಹಾಲಿಗೆ ₹50ರಿಂದ ₹60 ತನಕ ಹಣ ಕೊಟ್ಟು ಖರೀದಿ ಮಾಡಲಾಗುತ್ತದೆ ಆದರೆ ನಮ್ಮ ರಾಜ್ಯದಲ್ಲಿ ಲೀಟರ್‌ಗೆ ಕೇವಲ ₹39 ಮಾತ್ರ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ”ದುಬಾರಿ ಪಶು ಆಹಾರ ಖರೀದಿಸಿ ಹೈನುಗಾರಿಕೆ ಮಾಡುವುದು ರೈತರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಹಾಲು ಉತ್ಪಾದನೆ ಕಡಿಮೆಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...