Homeಕರ್ನಾಟಕದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

- Advertisement -
- Advertisement -

ದೇಶ- ವಿದೇಶಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಆದರೆ ಸ್ಥಳೀಯವಾಗಿ ಕರ್ನಾಟಕದಲ್ಲಿ ಮಾತ್ರ ನಂದಿನಿ ಹಾಲು ಸಿಗುತ್ತಿಲ್ಲ. ಬೆಂಗಳೂರಿನ ನಂದಿನಿ ಮಿಲ್ಕ್ ಪಾರ್ಲರ್‌ ಗಳಲ್ಲಿ ನಂದಿನಿ ಉತ್ಪನ್ನಗಳು ಸಿಗುತ್ತಿಲ್ಲ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಸೇರಿ ವಿವಿಧ ದೇಶಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಿಗುತ್ತವೆ. ಪ್ರಮುಖವಾಗಿ ಸಿಂಗಪುರ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ನಂದಿನಿ ಹಾಲಿನ ಉತ್ಪನ್ನಗಳು ಪೂರೈಕೆಯಾಗುತ್ತಿವೆ.

ರಾಜ್ಯದಲ್ಲಿ ನಂದಿನಿ ಉತ್ಪನ್ನ ಪೂರೈಕೆ ಕಡಿಮೆಯಾಗಿರುವುದನ್ನೇ ನೋಡಿಕೊಂಡು ಅಮುಲ್ ಹಾಲು ಮತ್ತು ಮೊಸರನ್ನು ಇ–ಕಾಮರ್ಸ್‌ ಮೂಲಕ ಮಾರುಕಟ್ಟೆಗೆ ಪ್ರವೇಶ ಮಾಡಿಸಲಾಗುತ್ತಿದೆ. ಈ ಹಿಂದೆ ಕೆಎಂಎಫ್ ಮತ್ತು ಅಮುಲ್ ವಿಲೀನದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತಾಪಿಸಿದ್ದರು. ಆದರೆ ರಾಜ್ಯದಲ್ಲಿ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಇದೀಗ ಕೃತಕ ಅಭಾವ ಸೃಷ್ಟಿಸಿ, ಅಮುಲ್‌ನ್ನು ರಾಜ್ಯದಲ್ಲಿ ಪ್ರವೇಶ ಮಾಡಿಸಲಾಗುತ್ತಿದೆ ಎನ್ನುವ ಅನುಮಾನ ರೈತರು ಮತ್ತು ಗ್ರಾಹಕರಲ್ಲಿ ಮೂಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ”ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದಿದ್ದಾರೆ.

”ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಬಂದು ಹೋದ ಬಳಿಕ ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಾಗಿತ್ತು, ಅದರಂತೆ ಹಾಲು ಶೇಖರಣೆ ಪ್ರಮಾಣವೂ ಹೆಚ್ಚಾಗಿತ್ತು. ಕೆಎಮ್‌ಎಫ್‌ ದಿನಕ್ಕೆ 96 ಲಕ್ಷ ಕೆ.ಜಿ ತನಕವೂ ಹಾಲು ಸಂಗ್ರಹ ಮಾಡುವ ಮೂಲಕ ದಾಖಲೆ ಬರೆದಿತ್ತು. ಹಾಲಿನ ಪ್ರಮಾಣ ಏರಿಕೆಯಾದ ಬಳಿಕ ಕೆಎಂಎಫ್ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿಕೊಂಡಿದೆ. ಹಾಲಿನ ಪುಡಿ, ಐಸ್‌ಕ್ರೀಮ್, ಚೀಸ್‌, ಬೆಣ್ಣೆ, ತುಪ್ಪ, ಸಿಹಿ ತಿನಿಸು ತಯಾರಿಕೆಯನ್ನೂ ಹೆಚ್ಚಳ ಮಾಡಿಕೊಂಡಿದೆ. ಶಾಲಾ ಮಕ್ಕಳಿಗೆ, ಮಿಲಿಟರಿ ಕ್ಯಾಂಪ್‌ಗಳಿಗೆ ಗುಡ್‌ಲೈಫ್ ಹಾಲು ಪೂರೈಕೆಯಾಗುತ್ತಿದೆ.

ಆದರೆ ಕೆಲದಿನಗಳಿಂದ ಹಾಲು ಸಂಗ್ರಹ ಪ್ರಮಾಣ ಸರಾಸರಿ 76 ಲಕ್ಷ ಕೆ.ಜಿಗೆ ಇಳಿಕೆಯಾಗಿದೆ. 20 ಲಕ್ಷ ಕೆ.ಜಿ ಹಾಲು ಕಡಿಮೆಯಾಗಿದ್ದು, ಈ ವ್ಯತ್ಯಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕೆಎಂಎಫ್ ಅಧಿಕಾರಿಗಳು ಮಾತನಾಡಿ, ”ಬೇಸಿಗೆಯಲ್ಲಿ ಹಾಲು ಉತ್ಪಾದನೆ ಕಡಿಮೆಯಾಗುವುದು ಸಾಮಾನ್ಯ. ಒಂದು ದಿನ ಮಾತ್ರ 96 ಲಕ್ಷ ಕೆ.ಜಿ ತನಕ ಹೋಗಿತ್ತು. ನಿತ್ಯ ಹಾಲು ಸಂಗ್ರಹ ಪ್ರಮಾಣ ಸರಾಸರಿ 81 ಲಕ್ಷ ಕೆ.ಜಿ. ಇತ್ತು. ಈಗ 5 ಲಕ್ಷ ಕೆ.ಜಿ ಕಡಿಮೆಯಾಗಿದ್ದು, ಹಾಲಿನ ಪುಡಿ ಸೇರಿ ಬೇರೆ ಉತ್ಪನ್ನಗಳ ತಯಾರಿಕೆ ಕಡಿಮೆ ಮಾಡಿ ಗ್ರಾಹಕರಿಗೆ ಹಾಲು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಹಾಲು ಸಂಗ್ರಹ ಕಡಿಮೆಯಾಗುತ್ತಿರುವ ಬಗ್ಗೆ ಹಾಲು ಒಕ್ಕೂಟ ಪ್ರತಿಕ್ರಿಯಿಸಿದ್ದು, ”ರೈತರಿಂದ ಹಾಲು ಖರೀದಿಯ ದರ ಕಡಿಮೆ ಇದೆ. ಇದೇ ಕಾರಣಕ್ಕೆ ಹಾಲು ಸಂಗ್ರಹ ಪ್ರಮಾಣ ಕಡಿಮೆಯಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ”ಬೇರೆ ರಾಜ್ಯಗಳಲ್ಲಿ ರೈತರಿಂದ ಲೀಟರ್‌ ಹಾಲಿಗೆ ₹50ರಿಂದ ₹60 ತನಕ ಹಣ ಕೊಟ್ಟು ಖರೀದಿ ಮಾಡಲಾಗುತ್ತದೆ ಆದರೆ ನಮ್ಮ ರಾಜ್ಯದಲ್ಲಿ ಲೀಟರ್‌ಗೆ ಕೇವಲ ₹39 ಮಾತ್ರ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ”ದುಬಾರಿ ಪಶು ಆಹಾರ ಖರೀದಿಸಿ ಹೈನುಗಾರಿಕೆ ಮಾಡುವುದು ರೈತರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಹಾಲು ಉತ್ಪಾದನೆ ಕಡಿಮೆಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...