Homeಕರ್ನಾಟಕಸಾಮಾಜಿಕ ಮಾಧ್ಯಮದಲ್ಲಿ '#AmulGoback, #SaveKMF' ಹ್ಯಾಶ್‌ಟ್ಯಾಗ್‌ ಟ್ರೆಂಡ್

ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

- Advertisement -
- Advertisement -

ನಂದಿನಿ ಹಾಲು ಉತ್ಪನ್ನಗಳ ಜೊತೆ ಕರ್ನಾಟಕದ ಜನರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಇತ್ತಿಚೆಗೆ ಬೆಂಗಳೂರಿನಲ್ಲಿ ನಂದಿನಿ ಹಾಲು ಮತ್ತು ಮೊಸರು ಬದಲಿಗೆ ಅಮುಲ್ ಹಾಲು ಮೊಸರು ಮಾರಾಟ ಮಾಡಲಾಗುತ್ತಿದೆ. ಕರ್ನಾಟಕ ಹಾಲು ಒಕ್ಕೂಟವನ್ನು (ಕೆಎಂಎಫ್) ದುರ್ಬಲಗೊಳಿಸಲು ಅಮುಲ್‌ ಉತ್ಪನ್ನಗಳನ್ನು ಮಾರುಕಟ್ಟೆಗೆ ಹೇರಳವಾಗಿ ಬಿಡಲಾಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ನಿವಾಸಿಗಳು ಸ್ಥಳೀಯ ಸಹಕಾರಕ್ಕೆ ಬೆಂಬಲ ವ್ಯಕ್ತಪಡಿಸಲು ”#AmulGoback” ಮತ್ತು ”#SaveKMF” ನಂತಹ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ.

”ಕೆಎಂಎಫ್ ಅಧಿಕಾರಿಗಳು ಮತ್ತು ರಾಜಕಾರಣಿಗಳು ಅಮುಲ್ ಸಹಕಾರ ಸಂಘಗಳ ಅಲಿಖಿತ ನಿಯಮಗಳನ್ನು ಉಲ್ಲಂಘಿಸಿ “ಹಳಸಿದ ಹಾಲು” ಮಾರಾಟ ಮಾಡುವ ಮೂಲಕ ಪರಭಕ್ಷಕ ಚಟುವಟಿಕೆಗಳಲ್ಲಿ ತೊಡಗಿದ್ದಾರೆ” ಎಂದು ಜನರು ಆರೋಪಿಸಿದ್ದಾರೆ.

ದೇಶದಲ್ಲೇ ಎರಡನೇ ಅತಿ ದೊಡ್ಡ ಹಾಲು ಸಂಗ್ರಾಹಕ ಸಂಸ್ಥೆಯಾಗಿರುವ ಕೆಎಂಎಫ್ ನಂದಿನಿ ಟೋನ್ಡ್ ಹಾಲನ್ನು ಲೀಟರ್‌ಗೆ 40 ರೂ.ಗೆ ಮಾರಾಟ ಮಾಡುತ್ತಿದ್ದರೆ, ಅಮುಲ್ ತನ್ನ ಟೋನ್ಡ್ ಹಾಲನ್ನು ಲೀಟರ್‌ಗೆ 54 ರೂ. ಮಾರಾಟ ಮಾಡಲಾಗುತ್ತಿದೆ ಇದು ಜನರಿಗೂ ಹೊರೆಯಾಗಿದೆ ಎಂದು ಜನರು ಕಿಡಿಕಾರುತ್ತಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು, ”ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ ಕನ್ನಡಿಗರೇ ಎಚ್ಚರ…!!” ಎಂದಿದ್ದಾರೆ.

”ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

”ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ” ಎಂದು ಆರೋಪ ಮಾಡಿದ್ದಾರೆ.

”ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ರಾಜ್ಯ ಬಿಜೆಪಿ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ” ಎಂದು ಟೀಕಿಸಿದ್ದಾರೆ.

”ಬಿಜೆಪಿ ಆಡಳಿತಾವಧಿಯಲ್ಲಿ ಕೆಎಂಎಫ್ ನಲ್ಲಿ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. ದಿನಕ್ಕೆ 99 ಲಕ್ಷ ಲೀಟರ್ ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದು ಕೆಎಂಎಫ್ ವಿರುದ್ಧದ ಷಡ್ಯಂತ್ರವೇ?” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

”ಕರ್ನಾಟಕದ ಬಿಜೆಪಿ ನಾಯಕತ್ವ ಎಷ್ಟೊಂದು ದುರ್ಬಲವಾಗಿದೆಯೆಂದರೆ ಒಂದೆಡೆ ಬೆಳಗಾವಿ ಗಡಿಪ್ರದೇಶದಲ್ಲಿ ಮಹಾರಾಷ್ಟ್ರ ಸರ್ಕಾರ ನೇರವಾಗಿ ತನ್ನ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇನ್ನೊಂದೆಡೆ ಗುಜರಾತ್ ರಾಜ್ಯ ಅಮುಲ್ ಮೂಲಕ ಇಲ್ಲಿನ ರೈತರನ್ನು ಬೀದಿಗೆ ತಳ್ಳುವ ಪ್ರಯತ್ನ ಮಾಡುತ್ತಿದೆ” ಎಂದು ಹೇಳಿದ್ದಾರೆ.

”ಹಿಂದಿ ಹೇರಿಕೆಯ ಮೂಲಕ ನಡೆಸುತ್ತಿರುವ ಭಾಷಾದ್ರೋಹ ಮತ್ತು ರಾಜ್ಯದ ಗಡಿಯೊಳಗೆ ಅತಿಕ್ರಮಿಸುವ ಮೂಲಕ ನಡೆಸುತ್ತಿರುವ ನೆಲದ್ರೋಹದ ಜೊತೆಗೆ ಈಗ ಕೆಎಂಎಫ್ ಅನ್ನು ಮುಚ್ಚಿಸುವ ಮೂಲಕ ರೈತದ್ರೋಹ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಹೊರಟಿದೆ” ಎಂದು ಕಿಡಿಕಾರಿದ್ದಾರೆ.

ಜನತಾ ದಳ (ಜಾತ್ಯತೀತ) ಕೂಡ ಕೆಎಂಎಫ್ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದು, ”ರಾಜ್ಯದೆಲ್ಲೆಡೆ ಕೆಎಂಎಫ್ ನಂದಿನಿಯ ಹಾಲು, ತುಪ್ಪ, ಬೆಣ್ಣೆ ಸಮರ್ಪಕವಾಗಿ ಸಿಗದೇ ಇರುವ ಸನ್ನಿವೇಶದಲ್ಲಿ ಗುಜರಾತ್ ನ ಅಮುಲ್ ಸಂಸ್ಥೆಯು ಆನ್ ಲೈನ್ ಮಾರುಕಟ್ಟೆಗೆ ಮುಂದಾಗಿರುವ ಈ ಬೆಳವಣಿಗೆ ಏನನ್ನು ಸೂಚಿಸುತ್ತಿದೆ? ನಂದಿನಿ ಹಾಲು ನಂಬಿ ಬದುಕುತ್ತಿರುವ ಅಸಂಖ್ಯ ಕನ್ನಡಿಗರ ಕೆಲಸದ ಮೇಲೆ ಇದು ಕರಿನೆರಳಿನಂತೆ ಭಾಸವಾಗುವುದಿಲ್ಲವೆ?” ಎಂದು ಪ್ರಶ್ನಿಸಿದೆ.

”ಕೆಎಂಎಫ್ ನಂದಿನಿ ಎಂಬ ನಮ್ಮ ನಾಡಿನ ಹೆಮ್ಮೆಯ ಸಂಸ್ಥೆಯನ್ನು ಹಂತ ಹಂತವಾಗಿ ಮುಗಿಸುವ ದುಷ್ಟ ಯೋಜನೆಯ ಭಾಗವಾಗಿ ಈ ಬೆಳವಣಿಗೆ ಕಾಣುತ್ತಿದೆ. ನೇರವಾಗಿ ವಿಲೀನ ಮಾಡಲು ಸಾಧ್ಯವಿಲ್ಲದಾಗ, ಈ ರೀತಿಯ ಕುತಂತ್ರಗಳು ಶುರುವಾಗುತ್ತವೆ. ದೈತ್ಯ ಸಂಸ್ಥೆ ಜತೆ ಸ್ಪರ್ಧೆ ಇದು ಎಂದು ಸುಮ್ಮನೆ ಕುಳಿತರೆ, ಭವಿಷ್ಯ ಅಯೋಮಯವಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದ ಮೊದಲ ಸಹಕಾರ ಸಚಿವರಾಗಿರುವ ಅಮಿತ್ ಶಾ ಅವರು ಡಿಸೆಂಬರ್ 30, 2022 ರಂದು ”ಅಮುಲ್ ಮತ್ತು ಕೆಎಂಎಫ್ ಒಟ್ಟಾಗಿ ಕರ್ನಾಟಕದ ಪ್ರತಿ ಹಳ್ಳಿಯಲ್ಲಿ ಕೆಲಸ ಮಾಡುತ್ತವೆ” ಎಂದು ಘೋಷಿಸಿದರು.

ಅಮಿತ್ ಶಾ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳು ಮತ್ತು ರೈತರ ಗುಂಪುಗಳು ಮಾತ್ರವಲ್ಲದೆ ಕರ್ನಾಟಕದ ಸಾಮಾನ್ಯ ಜನರಿಂದಲೂ ವಿರೋಧ ವ್ಯಕ್ತವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...