Homeಕರ್ನಾಟಕ2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

- Advertisement -
- Advertisement -

2007ರಲ್ಲಿ ಆಂಧ್ರಪ್ರದೇಶದ ಪೊಲೀಸ್ ಸಿಬ್ಬಂದಿಗಳ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ್ದರು ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರು, ಪೊಲೀಸರು ಇನ್ನೊಬ್ಬ ಪೋಲೀಸರ ಅಪರಾಧವನ್ನು ಎಂದಿಗೂ ತನಿಖೆ ಮಾಡುವುದಿಲ್ಲ ಎಂದು ಭಾನುವಾರ ಆರೋಪಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ 2007ರ ಆಗಸ್ಟ್ 20ರಂದು 11 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ ಎಲ್ಲ 13 ಪೊಲೀಸರನ್ನು ವಿಶಾಖಪಟ್ಟಣಂನ ಜಿಲ್ಲಾ ನ್ಯಾಯಾಲಯವು ಏಪ್ರಿಲ್ 6ರಂದು ಖುಲಾಸೆಗೊಳಿಸಿದೆ. ಈ ಪ್ರಕರಣದ ತನಿಖಾಧಿಕಾರಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ವಿಫಲರಾಗಿದ್ದರು ಎಂದು ದಿ ನ್ಯೂಸ್ ಮಿನಿಟ್ ಹೇಳಿದೆ.

ವಿಶೇಷ ನ್ಯಾಯಾಧೀಶ ಎಲ್.ಶ್ರೀಧರ್ ಅವರು, ತನಿಖಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ ಮತ್ತು ಮಹಿಳೆಯರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

”ನಮಗೆ ಪರಿಹಾರವನ್ನು ಒದಗಿಸಲು ನ್ಯಾಯಾಲಯದ ಆದೇಶ ನೀಡಿರುವುದು ಬೆಳ್ಳಿ ರೇಖೆ ಎಳೆದಂತಾಗಿದೆ ಅಂದರೆ ನಾವು ಬಲಿಪಶುಗಳು ಎಂದು ನ್ಯಾಯಾಲಯ ನಂಬುತ್ತದೆ” ಎಂದು ಬುಡಕಟ್ಟು ಮಹಿಳೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಇದನ್ನೂ ಓದಿ: ಜಾರ್ಖಂಡ್: 4 ದಿನದ ಹಸುಗೂಸನ್ನು ತುಳಿದ ಕೊಂದ ಆರೋಪ: ಆರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಾಮೂಹಿಕ ಅತ್ಯಾಚಾರ ಪ್ರಕರಣ

ಆಗಸ್ಟ್ 2007ರಲ್ಲಿ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ವಾಕಪಲ್ಲಿ ಗ್ರಾಮದಲ್ಲಿ ವಿಶೇಷ ಮಾವೋವಾದಿ ವಿರೋಧಿ ತಂಡವು ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಪೊಲೀಸರು ತಮ್ಮ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಕೊಂಡ್ ಬುಡಕಟ್ಟು ಜನಾಂಗದ ಹನ್ನೊಂದು ಮಹಿಳೆಯರು ಆರೋಪಿಸಿದ್ದಾರೆ.

ಎಫ್‌ಐಆರ್‌ ತಡವಾಗಿ ದಾಖಲಿಸಿಕೊಳ್ಳಲಾಗಿದೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲೂ ವಿಳಂಬ ಮಾಡಲಾಗಿದೆ. ಈ ಪ್ರಕರಣದ ತನಿಖೆ ಕೂಡ ನಿಧಾನಗತಿಯಲ್ಲಿ ನಡೆಸಿ ಲೋಪ ಎಸಗಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) (ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ಬಳಿಕ ಸರಿಸುಮಾರು 11 ವರ್ಷಗಳ ನಂತರ ಆಪಾದಿತ ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರಣೆಯು ಆಗಸ್ಟ್ 2018ರಲ್ಲಿ ಪ್ರಾರಂಭವಾಯಿತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿಚಾರಣೆ ಪ್ರಾರಂಭವಾಗುವ ವೇಳೆಗೆ 11 ಮಹಿಳೆಯರಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ತನಿಖೆಯಲ್ಲಿ ಲೋಪ

ಮಹಿಳೆಯರು ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಿದ ಆರು ದಿನಗಳ ನಂತರ 2007ರ ಆಗಸ್ಟ್ 26ರಂದು ಪೊಲೀಸರು ಈ ಪ್ರಕರಣದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿಶಾಕಪಟ್ಟಣಂ ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುಂಕರ ರಾಜೇಂದ್ರ ಪ್ರಸಾದ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈ ಆರೋಪಗ ತನಿಖೆಗಾಗಿ ಆಗಸ್ಟ್ 27, 2007ರಂದು ವಿಶಾಖಪಟ್ಟಣಂ ಗ್ರಾಮಾಂತರದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ಆನಂದ ರಾವ್ ಅವರನ್ನು ನೇಮಿಸಿತು. ಆದರೆ, ಸೆಪ್ಟೆಂಬರ್ 8ರವರೆಗೆ ರಾವ್ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಪರಾಧದ ಸ್ಥಳವನ್ನು ಸುರಕ್ಷಿತವಾಗಿರಿಸಲಾಗಿಲ್ಲ, ಪುರಾವೆಗಳನ್ನು ಸಂಗ್ರಹಿಸಲಾಗಿಲ್ಲ ಮತ್ತು ಆರೋಪಿಗಳ ಸಾಮೂಹಿಕ ಅತ್ಯಾಚಾರದ ನಂತರ 17 ದಿನಗಳವರೆಗೆ ದೂರುದಾರರ ಹೇಳಿಕೆಗಳನ್ನು ದಾಖಲಿಸಲಾಗಿಲ್ಲ.

ಎಫ್‌ಐಆರ್ ದಾಖಲಿಸಲು ಆರು ದಿನಗಳ ವಿಳಂಬದ ನಂತರ, ಪೊಲೀಸರು ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಮತ್ತೆರೆಡು ದಿನ ವಿಳಂಬ ಮಾಡಿದ್ದರು. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ಅಸಮರ್ಪಕ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಗೆ ಆ ಮಹಿಳೆಯರನ್ನು ಕಳುಹಿಸಲು ಪೊಲೀಸರು ಪ್ರಯತ್ನಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2018ರಲ್ಲಿ ವಿಚಾರಣೆ ಪ್ರಾರಂಭವಾಗುವವರೆಗೂ ಆರೋಪಿಗಳನ್ನು ಪರೀಕ್ಷೆಯನ್ನು ಮಾಡಲಾಗಿಲ್ಲ. ಈ ಘಟನೆಯ ನಂತರ ಅವರನ್ನು ತಮ್ಮ ಗ್ರಾಮದಲ್ಲಿ ಬಹಿಷ್ಕರಿಸಲಾಗಿದೆ ಎಂದು ದೂರುದಾರರಲ್ಲಿ ಒಬ್ಬ ಮಹಿಳೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ನಮ್ಮ ಗಂಡಂದಿರು ಮತ್ತು ಗ್ರಾಮದ ಹಿರಿಯರಿಂದ ನಾವು ಕ್ರೂರ ಮತ್ತು ಅಮಾನವೀಯ ಚಿಕಿತ್ಸೆಗೆ ಒಳಗಾಗಿದ್ದೇವೆ” ಎಂದು ಅವರು ಹೇಳಿದರು. ”..ನಮ್ಮ ಮಕ್ಕಳೊಂದಿಗೆ ಸಂವಹನ ನಡೆಸಲು ನಮಗೆ ಅವಕಾಶವಿರಲಿಲ್ಲ. ಹಲವಾರು ದಿನಗಳ ನಂತರ ನಮ್ಮನ್ನು ನಮ್ಮ ಮನೆಗಳಿಗೆ ಮರಳಿ ಅನುಮತಿಸಲಾಯಿತು ಮತ್ತು ಶುದ್ಧೀಕರಣ ಸ್ನಾನವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಮಹಿಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...