Homeಕರ್ನಾಟಕ2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

- Advertisement -
- Advertisement -

2007ರಲ್ಲಿ ಆಂಧ್ರಪ್ರದೇಶದ ಪೊಲೀಸ್ ಸಿಬ್ಬಂದಿಗಳ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ್ದರು ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರು, ಪೊಲೀಸರು ಇನ್ನೊಬ್ಬ ಪೋಲೀಸರ ಅಪರಾಧವನ್ನು ಎಂದಿಗೂ ತನಿಖೆ ಮಾಡುವುದಿಲ್ಲ ಎಂದು ಭಾನುವಾರ ಆರೋಪಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ 2007ರ ಆಗಸ್ಟ್ 20ರಂದು 11 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ ಎಲ್ಲ 13 ಪೊಲೀಸರನ್ನು ವಿಶಾಖಪಟ್ಟಣಂನ ಜಿಲ್ಲಾ ನ್ಯಾಯಾಲಯವು ಏಪ್ರಿಲ್ 6ರಂದು ಖುಲಾಸೆಗೊಳಿಸಿದೆ. ಈ ಪ್ರಕರಣದ ತನಿಖಾಧಿಕಾರಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ವಿಫಲರಾಗಿದ್ದರು ಎಂದು ದಿ ನ್ಯೂಸ್ ಮಿನಿಟ್ ಹೇಳಿದೆ.

ವಿಶೇಷ ನ್ಯಾಯಾಧೀಶ ಎಲ್.ಶ್ರೀಧರ್ ಅವರು, ತನಿಖಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ ಮತ್ತು ಮಹಿಳೆಯರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

”ನಮಗೆ ಪರಿಹಾರವನ್ನು ಒದಗಿಸಲು ನ್ಯಾಯಾಲಯದ ಆದೇಶ ನೀಡಿರುವುದು ಬೆಳ್ಳಿ ರೇಖೆ ಎಳೆದಂತಾಗಿದೆ ಅಂದರೆ ನಾವು ಬಲಿಪಶುಗಳು ಎಂದು ನ್ಯಾಯಾಲಯ ನಂಬುತ್ತದೆ” ಎಂದು ಬುಡಕಟ್ಟು ಮಹಿಳೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಇದನ್ನೂ ಓದಿ: ಜಾರ್ಖಂಡ್: 4 ದಿನದ ಹಸುಗೂಸನ್ನು ತುಳಿದ ಕೊಂದ ಆರೋಪ: ಆರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಾಮೂಹಿಕ ಅತ್ಯಾಚಾರ ಪ್ರಕರಣ

ಆಗಸ್ಟ್ 2007ರಲ್ಲಿ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ವಾಕಪಲ್ಲಿ ಗ್ರಾಮದಲ್ಲಿ ವಿಶೇಷ ಮಾವೋವಾದಿ ವಿರೋಧಿ ತಂಡವು ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಪೊಲೀಸರು ತಮ್ಮ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಕೊಂಡ್ ಬುಡಕಟ್ಟು ಜನಾಂಗದ ಹನ್ನೊಂದು ಮಹಿಳೆಯರು ಆರೋಪಿಸಿದ್ದಾರೆ.

ಎಫ್‌ಐಆರ್‌ ತಡವಾಗಿ ದಾಖಲಿಸಿಕೊಳ್ಳಲಾಗಿದೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲೂ ವಿಳಂಬ ಮಾಡಲಾಗಿದೆ. ಈ ಪ್ರಕರಣದ ತನಿಖೆ ಕೂಡ ನಿಧಾನಗತಿಯಲ್ಲಿ ನಡೆಸಿ ಲೋಪ ಎಸಗಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) (ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ಬಳಿಕ ಸರಿಸುಮಾರು 11 ವರ್ಷಗಳ ನಂತರ ಆಪಾದಿತ ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರಣೆಯು ಆಗಸ್ಟ್ 2018ರಲ್ಲಿ ಪ್ರಾರಂಭವಾಯಿತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿಚಾರಣೆ ಪ್ರಾರಂಭವಾಗುವ ವೇಳೆಗೆ 11 ಮಹಿಳೆಯರಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ತನಿಖೆಯಲ್ಲಿ ಲೋಪ

ಮಹಿಳೆಯರು ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಿದ ಆರು ದಿನಗಳ ನಂತರ 2007ರ ಆಗಸ್ಟ್ 26ರಂದು ಪೊಲೀಸರು ಈ ಪ್ರಕರಣದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿಶಾಕಪಟ್ಟಣಂ ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುಂಕರ ರಾಜೇಂದ್ರ ಪ್ರಸಾದ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈ ಆರೋಪಗ ತನಿಖೆಗಾಗಿ ಆಗಸ್ಟ್ 27, 2007ರಂದು ವಿಶಾಖಪಟ್ಟಣಂ ಗ್ರಾಮಾಂತರದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ಆನಂದ ರಾವ್ ಅವರನ್ನು ನೇಮಿಸಿತು. ಆದರೆ, ಸೆಪ್ಟೆಂಬರ್ 8ರವರೆಗೆ ರಾವ್ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಪರಾಧದ ಸ್ಥಳವನ್ನು ಸುರಕ್ಷಿತವಾಗಿರಿಸಲಾಗಿಲ್ಲ, ಪುರಾವೆಗಳನ್ನು ಸಂಗ್ರಹಿಸಲಾಗಿಲ್ಲ ಮತ್ತು ಆರೋಪಿಗಳ ಸಾಮೂಹಿಕ ಅತ್ಯಾಚಾರದ ನಂತರ 17 ದಿನಗಳವರೆಗೆ ದೂರುದಾರರ ಹೇಳಿಕೆಗಳನ್ನು ದಾಖಲಿಸಲಾಗಿಲ್ಲ.

ಎಫ್‌ಐಆರ್ ದಾಖಲಿಸಲು ಆರು ದಿನಗಳ ವಿಳಂಬದ ನಂತರ, ಪೊಲೀಸರು ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಮತ್ತೆರೆಡು ದಿನ ವಿಳಂಬ ಮಾಡಿದ್ದರು. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ಅಸಮರ್ಪಕ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಗೆ ಆ ಮಹಿಳೆಯರನ್ನು ಕಳುಹಿಸಲು ಪೊಲೀಸರು ಪ್ರಯತ್ನಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2018ರಲ್ಲಿ ವಿಚಾರಣೆ ಪ್ರಾರಂಭವಾಗುವವರೆಗೂ ಆರೋಪಿಗಳನ್ನು ಪರೀಕ್ಷೆಯನ್ನು ಮಾಡಲಾಗಿಲ್ಲ. ಈ ಘಟನೆಯ ನಂತರ ಅವರನ್ನು ತಮ್ಮ ಗ್ರಾಮದಲ್ಲಿ ಬಹಿಷ್ಕರಿಸಲಾಗಿದೆ ಎಂದು ದೂರುದಾರರಲ್ಲಿ ಒಬ್ಬ ಮಹಿಳೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ನಮ್ಮ ಗಂಡಂದಿರು ಮತ್ತು ಗ್ರಾಮದ ಹಿರಿಯರಿಂದ ನಾವು ಕ್ರೂರ ಮತ್ತು ಅಮಾನವೀಯ ಚಿಕಿತ್ಸೆಗೆ ಒಳಗಾಗಿದ್ದೇವೆ” ಎಂದು ಅವರು ಹೇಳಿದರು. ”..ನಮ್ಮ ಮಕ್ಕಳೊಂದಿಗೆ ಸಂವಹನ ನಡೆಸಲು ನಮಗೆ ಅವಕಾಶವಿರಲಿಲ್ಲ. ಹಲವಾರು ದಿನಗಳ ನಂತರ ನಮ್ಮನ್ನು ನಮ್ಮ ಮನೆಗಳಿಗೆ ಮರಳಿ ಅನುಮತಿಸಲಾಯಿತು ಮತ್ತು ಶುದ್ಧೀಕರಣ ಸ್ನಾನವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಮಹಿಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...