Homeಕರ್ನಾಟಕ2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

- Advertisement -
- Advertisement -

2007ರಲ್ಲಿ ಆಂಧ್ರಪ್ರದೇಶದ ಪೊಲೀಸ್ ಸಿಬ್ಬಂದಿಗಳ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ್ದರು ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರು, ಪೊಲೀಸರು ಇನ್ನೊಬ್ಬ ಪೋಲೀಸರ ಅಪರಾಧವನ್ನು ಎಂದಿಗೂ ತನಿಖೆ ಮಾಡುವುದಿಲ್ಲ ಎಂದು ಭಾನುವಾರ ಆರೋಪಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ 2007ರ ಆಗಸ್ಟ್ 20ರಂದು 11 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ ಎಲ್ಲ 13 ಪೊಲೀಸರನ್ನು ವಿಶಾಖಪಟ್ಟಣಂನ ಜಿಲ್ಲಾ ನ್ಯಾಯಾಲಯವು ಏಪ್ರಿಲ್ 6ರಂದು ಖುಲಾಸೆಗೊಳಿಸಿದೆ. ಈ ಪ್ರಕರಣದ ತನಿಖಾಧಿಕಾರಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ವಿಫಲರಾಗಿದ್ದರು ಎಂದು ದಿ ನ್ಯೂಸ್ ಮಿನಿಟ್ ಹೇಳಿದೆ.

ವಿಶೇಷ ನ್ಯಾಯಾಧೀಶ ಎಲ್.ಶ್ರೀಧರ್ ಅವರು, ತನಿಖಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ ಮತ್ತು ಮಹಿಳೆಯರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

”ನಮಗೆ ಪರಿಹಾರವನ್ನು ಒದಗಿಸಲು ನ್ಯಾಯಾಲಯದ ಆದೇಶ ನೀಡಿರುವುದು ಬೆಳ್ಳಿ ರೇಖೆ ಎಳೆದಂತಾಗಿದೆ ಅಂದರೆ ನಾವು ಬಲಿಪಶುಗಳು ಎಂದು ನ್ಯಾಯಾಲಯ ನಂಬುತ್ತದೆ” ಎಂದು ಬುಡಕಟ್ಟು ಮಹಿಳೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಇದನ್ನೂ ಓದಿ: ಜಾರ್ಖಂಡ್: 4 ದಿನದ ಹಸುಗೂಸನ್ನು ತುಳಿದ ಕೊಂದ ಆರೋಪ: ಆರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಾಮೂಹಿಕ ಅತ್ಯಾಚಾರ ಪ್ರಕರಣ

ಆಗಸ್ಟ್ 2007ರಲ್ಲಿ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ವಾಕಪಲ್ಲಿ ಗ್ರಾಮದಲ್ಲಿ ವಿಶೇಷ ಮಾವೋವಾದಿ ವಿರೋಧಿ ತಂಡವು ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಪೊಲೀಸರು ತಮ್ಮ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಕೊಂಡ್ ಬುಡಕಟ್ಟು ಜನಾಂಗದ ಹನ್ನೊಂದು ಮಹಿಳೆಯರು ಆರೋಪಿಸಿದ್ದಾರೆ.

ಎಫ್‌ಐಆರ್‌ ತಡವಾಗಿ ದಾಖಲಿಸಿಕೊಳ್ಳಲಾಗಿದೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲೂ ವಿಳಂಬ ಮಾಡಲಾಗಿದೆ. ಈ ಪ್ರಕರಣದ ತನಿಖೆ ಕೂಡ ನಿಧಾನಗತಿಯಲ್ಲಿ ನಡೆಸಿ ಲೋಪ ಎಸಗಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) (ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ಬಳಿಕ ಸರಿಸುಮಾರು 11 ವರ್ಷಗಳ ನಂತರ ಆಪಾದಿತ ಸಾಮೂಹಿಕ ಅತ್ಯಾಚಾರದ ಪ್ರಕರಣದ ವಿಚಾರಣೆಯು ಆಗಸ್ಟ್ 2018ರಲ್ಲಿ ಪ್ರಾರಂಭವಾಯಿತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ವಿಚಾರಣೆ ಪ್ರಾರಂಭವಾಗುವ ವೇಳೆಗೆ 11 ಮಹಿಳೆಯರಲ್ಲಿ ಇಬ್ಬರು ಸಾವನ್ನಪ್ಪಿದ್ದರು.

ತನಿಖೆಯಲ್ಲಿ ಲೋಪ

ಮಹಿಳೆಯರು ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಿದ ಆರು ದಿನಗಳ ನಂತರ 2007ರ ಆಗಸ್ಟ್ 26ರಂದು ಪೊಲೀಸರು ಈ ಪ್ರಕರಣದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವಿಶಾಕಪಟ್ಟಣಂ ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುಂಕರ ರಾಜೇಂದ್ರ ಪ್ರಸಾದ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈ ಆರೋಪಗ ತನಿಖೆಗಾಗಿ ಆಗಸ್ಟ್ 27, 2007ರಂದು ವಿಶಾಖಪಟ್ಟಣಂ ಗ್ರಾಮಾಂತರದ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ ಆನಂದ ರಾವ್ ಅವರನ್ನು ನೇಮಿಸಿತು. ಆದರೆ, ಸೆಪ್ಟೆಂಬರ್ 8ರವರೆಗೆ ರಾವ್ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಪರಾಧದ ಸ್ಥಳವನ್ನು ಸುರಕ್ಷಿತವಾಗಿರಿಸಲಾಗಿಲ್ಲ, ಪುರಾವೆಗಳನ್ನು ಸಂಗ್ರಹಿಸಲಾಗಿಲ್ಲ ಮತ್ತು ಆರೋಪಿಗಳ ಸಾಮೂಹಿಕ ಅತ್ಯಾಚಾರದ ನಂತರ 17 ದಿನಗಳವರೆಗೆ ದೂರುದಾರರ ಹೇಳಿಕೆಗಳನ್ನು ದಾಖಲಿಸಲಾಗಿಲ್ಲ.

ಎಫ್‌ಐಆರ್ ದಾಖಲಿಸಲು ಆರು ದಿನಗಳ ವಿಳಂಬದ ನಂತರ, ಪೊಲೀಸರು ಮಹಿಳೆಯರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲು ಮತ್ತೆರೆಡು ದಿನ ವಿಳಂಬ ಮಾಡಿದ್ದರು. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲು ಅಸಮರ್ಪಕ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಗೆ ಆ ಮಹಿಳೆಯರನ್ನು ಕಳುಹಿಸಲು ಪೊಲೀಸರು ಪ್ರಯತ್ನಿಸಿದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2018ರಲ್ಲಿ ವಿಚಾರಣೆ ಪ್ರಾರಂಭವಾಗುವವರೆಗೂ ಆರೋಪಿಗಳನ್ನು ಪರೀಕ್ಷೆಯನ್ನು ಮಾಡಲಾಗಿಲ್ಲ. ಈ ಘಟನೆಯ ನಂತರ ಅವರನ್ನು ತಮ್ಮ ಗ್ರಾಮದಲ್ಲಿ ಬಹಿಷ್ಕರಿಸಲಾಗಿದೆ ಎಂದು ದೂರುದಾರರಲ್ಲಿ ಒಬ್ಬ ಮಹಿಳೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ನಮ್ಮ ಗಂಡಂದಿರು ಮತ್ತು ಗ್ರಾಮದ ಹಿರಿಯರಿಂದ ನಾವು ಕ್ರೂರ ಮತ್ತು ಅಮಾನವೀಯ ಚಿಕಿತ್ಸೆಗೆ ಒಳಗಾಗಿದ್ದೇವೆ” ಎಂದು ಅವರು ಹೇಳಿದರು. ”..ನಮ್ಮ ಮಕ್ಕಳೊಂದಿಗೆ ಸಂವಹನ ನಡೆಸಲು ನಮಗೆ ಅವಕಾಶವಿರಲಿಲ್ಲ. ಹಲವಾರು ದಿನಗಳ ನಂತರ ನಮ್ಮನ್ನು ನಮ್ಮ ಮನೆಗಳಿಗೆ ಮರಳಿ ಅನುಮತಿಸಲಾಯಿತು ಮತ್ತು ಶುದ್ಧೀಕರಣ ಸ್ನಾನವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಮಹಿಳೆ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...