Homeಕರ್ನಾಟಕಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು; ಅಮೂಲ್ ವಿರುದ್ಧ ಸಿದ್ದರಾಮಯ್ಯ ಗರಂ

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು; ಅಮೂಲ್ ವಿರುದ್ಧ ಸಿದ್ದರಾಮಯ್ಯ ಗರಂ

“ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?”

- Advertisement -
- Advertisement -

‘ನಂದಿನಿ ಉಳಿಸಿ’, ‘ಅಮೂಲ್‌ ವಾಪಸ್ ಕಳಿಸಿ’ ಅಭಿಯಾನ ಬಿರುಸು ಪಡೆದ ಬೆನ್ನಲ್ಲೇ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು” ಎಂದು  ಎಚ್ಚರಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್‌ನದ್ದು, ಬಂದರು, ಏರ್ ಪೋರ್ಟ್ ನುಂಗಿದ್ದ ಅದಾನಿ ಗುಜರಾತ್‌‌ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್‌ನದ್ದು. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ, ಪರಿಣಾಮ ನೆಟ್ಟಗಾಗದು” ಎಂದು ಮುನ್ನೆಚ್ಚರಿಕೆ ನೀಡಿದ್ದಾರೆ.

“ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ, ಏನಿದು ನಿಮ್ಮ ಕರಾಮತ್ತು?” ಎಂದು ಕೇಳಿದ್ದಾರೆ.

“ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ. ಗುಜರಾತ್‌ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ?” ಎಂದು ಟೀಕಿಸಿದ್ದಾರೆ.

“ಭರವಸೆ ನೀಡಿದಂತೆ ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು. ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ?” ಎಂದು ಹರಿಹಾಯ್ದಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕ್ಷೀರಧಾರೆ ಮತ್ತು ಕ್ಷೀರಭಾಗ್ಯ ಯೋಜನೆಗಳು ಅನ್ನಭಾಗ್ಯ ಯೋಜನೆಯ ರೀತಿಯಲ್ಲಿಯೇ ನನಗೆ ಸಂತೃಪ್ತಿ ತಂದ ಯೋಜನೆಗಳು. ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ ಮೋದಿ ಜೀ?” ಎಂದು ಕುಟುಕಿದ್ದಾರೆ.

“ಹಾಲಿನ ಸಬ್ಸಿಡಿಯನ್ನು ಲೀಟರಿಗೆ 5 ರೂ. ಹೆಚ್ಚಿಸಿ ನಾನು ಕ್ಷೀರಧಾರೆ ಯೋಜನೆ ಜಾರಿಗೊಳಿಸಿದ್ದೆ. ಇದರಿಂದಾಗಿ 20-12-2013 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು. ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ ಸಂಪತ್ತು ಮತ್ತು ಮಕ್ಕಳ ಸಂಪತ್ತು ಬೆಳೆಸಿದ ನಮ್ಮ ಆಡಳಿತಶೈಲಿ. ನಿಮ್ಮದೇನು?” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. 99 ಲಕ್ಷ ಲೀಟರ್ ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಇದು ನೀವು ಮತ್ತು ಅಮಿತ್ ಶಾ ಕೂಡಿ ಕೆಎಂಎಫ್ ವಿರುದ್ಧ ಮಾಡಿರುವ ಷಡ್ಯಂತ್ರವೇ?” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಕೆಎಂಎಫ್ ಹಾಲು ಖರೀದಿಸುತ್ತಿಲ್ಲ ಎಂದು ಹಳ್ಳಿಗಳಲ್ಲಿ ಪಶುಪಾಲಕರು ಗೋಳಾಡುತ್ತಿದ್ದಾರೆ. ಹಾಲು ಸಂಗ್ರಹದ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ಪ್ರತಿದಿನ ಸುಮಾರು 11 ಕೋಟಿ ರೂಪಾಯಿ ಹಣ ರೈತರ ಕೈತಪ್ಪಿ ಹೋಗುತ್ತಿದೆ. ಇದೇನಾ ನಿಮ್ಮ ರೈತರ ಆದಾಯ ದುಪ್ಟಟ್ಟುಗೊಳಿಸುವ ಯೋಜನೆ?” ಎಂದಿದ್ದಾರೆ.

“ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ?” ಎಂದು ಗುಡುಗಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಬರ್ವಾಲ್‌ಗಳು, ಬಿಂದ್ರಾಗಳು, ಜೈನ್‌ಗಳು, ಶರ್ಮಾಗಳ ಬೀಫ್ ರಫ್ತು ಪ್ರಮಾಣ ಸಾವಿರಾರು ಕೋಟಿಗಳಿಗೆ ಏರಿಕೆಯಾಗಿರುವುದಾಗಿ ವರದಿಗಳಿವೆ. ಇವರ ಮೇಲಿರುವ ಕೃಪಕಟಾಕ್ಷ ಯಾರದ್ದು?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

“ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1,186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1,200 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಿ ಅನ್ಯಾಯ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಳೆದ 5 ವರ್ಷಗಳಲ್ಲಿ ಪಶು ಆಹಾರದ ಬೆಲೆಗಳು ಮೂರು ಪಟ್ಟು ಹೆಚ್ಚಾಗಿವೆ. 2017-18ರಲ್ಲಿ 49 ಕೆ.ಜಿ ಬೂಸಾದ ಬೆಲೆ 450 ರೂ. ಇದ್ದದ್ದು ಈಗ 1,350 ರೂ.ಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ.ಗಳಿಂದ 1,500 ಕ್ಕೇ ಏರಿದೆ” ಎಂದು ವಿಷಾದಿಸಿದ್ದಾರೆ.

“ರಾಜ್ಯದ ಬಿಜೆಪಿ ಸರ್ಕಾರ ಸರ್ಕಾರಿ ಕಾವಲು ಜಮೀನುಗಳನ್ನು, ಡಿನೋಟಿಫೈ ಮಾಡಿ ಉಳ್ಳವರಿಗೆ, ಆರ್‌ಎಸ್‌ಎಸ್ ನವರಿಗೆ, ಬಂಡವಾಳಿಗರಿಗೆ ಹಂಚಲು ಪ್ರಾರಂಭಿಸಿದೆ. ಟಿಪ್ಪುಸುಲ್ತಾನನ ದೂರದೃಷ್ಟಿಯ ಫಲವಾದ ಲಕ್ಷಾಂತರ ಎಕರೆ ವಿಸ್ತೀರ್ಣದ ಅಮೃತ್ ಮಹಲ್ ಕಾವಲು ಪ್ರದೇಶ ಮಾಯವಾಗುತ್ತಿರುವುದು ಯಾರಿಂದ? ಆರ್‌ಎಸ್‌ಎಸ್‌ಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡಲಾಗುತ್ತಿದೆ. ನಮ್ಮ ರೈತರ ಜಾನುವಾರುಗಳಿಗೆ ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...