Homeಕರ್ನಾಟಕನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

- Advertisement -
- Advertisement -

”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಏ. 7ರ ರಾತ್ರಿ, ತಮ್ಮ ಆಪ್ತರೊಡನೆ ಎಚ್.ಡಿ. ರೇವಣ್ಣನವರು ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದಾರೆ” ಎಂದು ಹೇಳಲಾಗುತ್ತಿದೆ.

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದಾರೆ ಎನ್ನಲಾಗುತ್ತಿದೆ.

ಯಶವಂತಪುರದಲ್ಲಿ ಶನಿವಾರ ನಡೆದ ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ”ಯಾರು ಏನೇ ಹೇಳಿದರೂ ಹಾಸನದಲ್ಲಿ ಕಾರ್ಯಕರ್ತರ ಆಶಯದಂತೆ ಜೆಡಿಎಸ್ ಯುವ ನಾಯಕ ಸ್ವರೂಪ್ ಪ್ರಕಾಶ್ ಅವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

”ಪಂಚರತ್ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಸ್ವರೂಪ್ ಅವರಿಗೇ ಮನವಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ಮನವಿಯನ್ನು ಸ್ವೀಕರಿಸಿದ ಕುಮಾರಸ್ವಾಮಿ, ನೀವು ಹೇಳಿದವರಿಗೇ ಟಿಕೆಟ್ ನೀಡಲಾಗುತ್ತದೆ” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ”ಬ್ಲಾಕ್ ಮೇಲ್ ಮಾಡುವುದು ದೇವೇಗೌಡರ ಹತ್ತಿರ ನಡೆಯಬಹುದು. ಆದರೆ, ನನ್ನ ಹತ್ರ ನಡೆಯಲ್ಲ. ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ” ಎಂದಿದ್ದಾರೆ.

ಸಂಧಾನ ಸಭೆಯಲ್ಲೂ ಷರತ್ತು ಹಾಕಿದ್ದ ರೇವಣ್ಣ

ಈ ಹಿಂದೆ ಹಾಸನ ಟಿಕೆಟ್ ವಿಚಾರವಾಗಿ, ದೇವೇಗೌಡರ ಮನೆಯಲ್ಲೇ ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಸಂಧಾನ ಸಭೆ ನಡೆಸಲಾಗಿತ್ತು. ಆ ಸಮಯದಲ್ಲಿ, ರೇವಣ್ಣನವರು ಭವಾನಿಯವರಿಗೇ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದರು. ಅತ್ತ, ಕುಮಾರಸ್ವಾಮಿಯವರು ಸ್ವರೂಪ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ದೇವೇಗೌಡರು ನಡೆಸಿದ ಸಂಧಾನ ಸಭೆ ವಿಫಲಾವಾಗಿತ್ತು.

ಇದೀಗ ಹೊಸ ಅಸ್ತ್ರ ಪ್ರಯೋಗಿಸಿರುವ ರೇವಣ್ಣ, ”ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...