Homeಮುಖಪುಟಮಹಾರಾಷ್ಟ್ರ: ಶಿವಸೇನೆ- ಬಿಜೆಪಿ ಸರ್ಕಾರ ಉರುಳಿದರೆ ಅಜಿತ್‌ ಪವಾರ್‌ ಎನ್‌ಸಿಪಿ ಒಡೆಯುವರೇ?

ಮಹಾರಾಷ್ಟ್ರ: ಶಿವಸೇನೆ- ಬಿಜೆಪಿ ಸರ್ಕಾರ ಉರುಳಿದರೆ ಅಜಿತ್‌ ಪವಾರ್‌ ಎನ್‌ಸಿಪಿ ಒಡೆಯುವರೇ?

- Advertisement -
- Advertisement -

ಕಳೆದ ವರ್ಷ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆಯನ್ನು ಇಬ್ಬಾಗವಾಗಿಸಿ ಬೇರೊಂದು ಸರ್ಕಾರ (ಶಿಂಧೆ ಬಣದ ಶಿವಸೇನೆ-ಬಿಜೆಪಿ) ರಚನೆಗೆ ಕಾರಣವಾಗಿದ್ದ ಶಿವಸೇನೆ ಶಾಸಕರನ್ನು ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದಲ್ಲಿ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್‌ ಯೋಚಿಸಿದ್ದಾರೆಂಬ ಗುಮಾನಿಗಳು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ.

ಎನ್‌ಸಿಪಿ ನಾಯಕ ಅಜಿತ್ ಪವಾರ್ ಪಕ್ಷದಿಂದ ಹೊರನಡೆದು ಬಿಜೆಪಿಯೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. 2019ರಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಮುಂಜಾನೆ ಪ್ರಮಾಣ ವಚನ ಸ್ವೀಕರಿಸಿ ಎಲ್ಲರನ್ನೂ ಅಚ್ಚರಿಗೆ ದೂಡಿದ್ದ ಅಜಿತ್ ಪವಾರ್ ಮತ್ತೊಮ್ಮೆ ಅದೇ ರೀತಿಯ ಪ್ಲಾನ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಕನಾಥ್ ಶಿಂಧೆ ಮಾದರಿಯಲ್ಲಿಯೇ ಬಂಡಾಯವೆದ್ದು, ರಾಜಕೀಯ ವಲಯದಲ್ಲಿ ಬೇರೆ ರೀತಿಯ ಪರಿಣಾಮಗಳನ್ನು ಉಂಟು ಮಾಡುವುದಕ್ಕಾಗಿ ಎನ್‌ಸಿಪಿ ಶಾಸಕರೊಂದಿಗೆ ಅಜಿತ್‌ ಸಂಪರ್ಕದಲ್ಲಿದ್ದಾರೆಂದು ವರದಿಯಾಗಿದೆ.

“ಅಂತಹ ಯಾವುದೇ ಯೋಜನೆಯನ್ನು ಹೊಂದಿಲ್ಲ” ಎಂದು ಅಜಿತ್ ಪವಾರ್ ನಿರಾಕರಿಸಿದ್ದರೂ, ಎನ್‌ಸಿಪಿ ಶಾಸಕರು ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಶಿವಸೇನೆಯನ್ನು ವಿಭಜಿಸಿದ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಸರ್ವೋಚ್ಚ ನ್ಯಾಯಾಲಯ ಅವಲೋಕಿಸುತ್ತಿರುವ ಅನೇಕ ಸಂಗತಿಗಳು ಮಹಾರಾಷ್ಟ್ರದಲ್ಲಿನ ಆಡಳಿತರೂಢ ಮೈತ್ರಿಕೂಟದಲ್ಲಿ ಆತಂಕ ತಂದಿವೆ ಎನ್ನಲಾಗುತ್ತಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದ ನ್ಯಾಯಮೂರ್ತಿ ಎಂ ಆರ್ ಷಾ ಅವರು ಮೇ 15ರಂದು ನಿವೃತ್ತಿಯಾಗಲಿದ್ದಾರೆ. ಅದಕ್ಕೂ ಮೊದಲು ಪ್ರಕರಣದ ಅಂತಿಮ ತೀರ್ಪು ನ್ಯಾಯಾಲಯದಿಂದ ಹೊರಬೀಳುವ ಸಾಧ್ಯತೆಯಿದೆ.

ಆಡಳಿತಾರೂಢ ಮೈತ್ರಿಕೂಟಕ್ಕೆ ತೀರ್ಪು ಪ್ರತಿಕೂಲವಾಗಿಯಾದರೂ ಇರಬಹುದು ಅಥವಾ ಅನುಕೂಲವಾದರೂ ಆಗಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ಅಜಿತ್ ಪವಾರ್ ಅವರ ದಂಗೆ ಯತ್ನ ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಡೆಸಿರುವ ಪ್ಲಾನ್ ಬಿ ಎನ್ನಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಶಾಸಕರನ್ನು ಹೊಂದಿರುವ ಬಿಜೆಪಿಯು ಅಜಿತ್ ಪವಾರ್ ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಶರದ್ ಪವಾರ್ ಅವರು ತಮ್ಮ ಸೋದರಳಿಯನ ಯೋಜನೆಗಳ ಬಗ್ಗೆ ತಿಳಿದಿದ್ದಾರೆ ಹಾಗೂ ಒಗ್ಗಟ್ಟು ಕಾಪಾಡಿಕೊಳ್ಳಲು ಯೋಚಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಅಜಿತ್ ಪವಾರ್ ಅವರ ಇತ್ತೀಚಿನ ನಡೆಗೂ ಮತ್ತು ಅದಾನಿ ಗ್ರೂಪ್‌ ವಿರುದ್ಧ ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಶರದ್ ಪವಾರ್ ವಿರೋಧಿಸಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಇದನ್ನೂ ಓದಿರಿ: ಹಿಂಡೆನ್‌ಬರ್ಗ್ ವರದಿಯು ಅದಾನಿ ಗ್ರೂಪ್‌ ಮೇಲಿನ ಉದ್ದೇಶಿತ ದಾಳಿಯಾಗಿದೆ: ಶರದ್ ಪವಾರ್‌

ಅಜಿತ್ ಅವರ ಕ್ರಮಗಳ ಹಿಂದೆ ವರಿಷ್ಠರ ಆಶೀರ್ವಾದ ಇರಬಹುದು ಎಂಬ ವರದಿಗಳನ್ನು ಮೂಲಗಳು ತಳ್ಳಿಹಾಕಿವೆ. ಶರದ್ ಪವಾರ್ ಅವರು ಬಿಜೆಪಿಯೊಂದಿಗೆ ತೀವ್ರ ವಿರೋಧವನ್ನು ಹೊಂದಿದ್ದಾರೆ ಎಂದು ಹೇಳುತ್ತಿವೆ.

ಜಂಟಿ ಸಂಸದೀಯ ಸಮಿತಿಯ ಕುರಿತು ಶರದ್ ಪವಾರ್ ಅವರು ಹೇಳಿಕೆ ನೀಡಿದ ನಂತರ ಅಜಿತ್ ಪವಾರ್ ಅಜ್ಞಾತವಾಗಿ ವ್ಯವಹರಿಸುತ್ತಿರುವುದು ಒಂದು ರೀತಿಯ ರಾಜಕೀಯ ವದಂತಿಗಳಿಗೆ ಅವಕಾಶ ನೀಡಿದೆ. ಪಕ್ಷದಲ್ಲಿ ಒಡಕು ಮೂಡುವುದನ್ನು ತಪ್ಪಿಸುವ ಸಲುವಾಗಿ ವಿಧಾನಸಭೆಯ ಒಳಗೆ ಮತ್ತು ಹೊರಗೆ ಎನ್‌ಸಿಪಿ ಪಕ್ಷದಲ್ಲಿ ಕೆಲವು ಬದಲಾವಣೆಗಳನ್ನು ಶೀಘ್ರದಲ್ಲೇ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...