Homeಕರ್ನಾಟಕಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಅಲೀಮುಲ್ಲಾ ಬೇಗ್ ಎಂಬವರಿಗೆ ಚಿತ್ರಹಿಂಸೆ ನೀಡಿರುವ ವಿಡಿಯೊ ವೈರಲ್ ಆಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

- Advertisement -
- Advertisement -

ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡು ಈಗ ಪೊಲೀಸ್‌ ಬಂಧನದಲ್ಲಿರುವ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ವ್ಯಕ್ತಿಯೊಬ್ಬರ ಮೇಲೆ ಸ್ಟನ್‌ಗನ್‌ನಿಂದ ಹಲ್ಲೆ ನಡೆಸಿರುವ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ಇತ್ತೀಚೆಗೆ ಸ್ಟನ್‌ಗನ್‌ನಿಂದ ಹಲ್ಲೆ ಮಾಡಿದ್ದು, ಫೇಸ್‌ಬುಕ್‌ ಲೈವ್‌ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಅದರ ಅನ್ವಯ ಬೆಂಗಳೂರು ಪೊಲೀಸರು ಕ್ರಮ ಜರುಗಿಸಿದ್ದಾರೆ.

ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಜಾನುವಾರು ಸಾಗಾಟಗಾರ ಇದ್ರೀಸ್ ಪಾಷಾ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ, ಇಂತಹದ್ದೇ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇತ್ತೀಚೆಗೆ ಮಾರಣಾಂತಿಕವಾಗಿ ಸ್ಟನ್‌ಗನ್‌ನಿಂದ ಪುನೀತ್‌ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 20 ರಂದು ಹೊಸೂರು ರಸ್ತೆಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಅಲೀಮುಲ್ಲಾ ಬೇಗ್ ಎಂಬ 30 ವರ್ಷದ ಯುವಕನ ಮೇಲೆ ಪುನೀತ್ ಕೆರೆಹಳ್ಳಿ ಮತ್ತು ಇತರ ಮೂವರು ಸಹಚರರು ಸ್ಟನ್ ಗನ್ ನಿಂದ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದರು.

ಅಲೀಮುಲ್ಲಾ ಅವರ ದೂರಿನ ಆಧಾರದ ಮೇಲೆ, ಏಪ್ರಿಲ್ 6 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಹಲ್ಲೆ, ಅಕ್ರಮ ತಡೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಏನಿದು ಘಟನೆ?

ತಮಿಳುನಾಡಿನ ಕೃಷ್ಣಗಿರಿಗೆ ದನಗಳನ್ನು ಸಾಗಿಸುವ ಕೆಲಸಕ್ಕೆ ಅಲೀಮುಲ್ಲಾ ಅವರನ್ನು ನಿಯೋಜಿಸಲಾಗಿತ್ತು. ಅವರನ್ನು ಪುನೀತ್ ಕೆರೆಹಳ್ಳಿ ಮತ್ತು ಆತನ ಮೂವರು ಸಹಚರರಾದ ಸಂತೋಷ್, ಚೇತನ್ ಮತ್ತು ದೀಪಕ್ ಅವರು ನೈಸ್ ರಸ್ತೆಯಲ್ಲಿ ಅಡ್ಡ ಹಾಕಿದ್ದರು.

ಪುನೀತ್ ಮತ್ತು ಆತನ ಸಹಚರರು ವಾಹನದ ಚಾಲಕ ರಫೀಕ್ ಅವರ ಮೇಲೆ ಮೊದಲು ಹಲ್ಲೆ ನಡೆಸಿದ್ದರು. ದನಗಳನ್ನು ಸಾಗಿಸುತ್ತಿದ್ದ ಕಾರಣ ಅವರನ್ನು ನಿಂದಿಸಿ ಥಳಿಸಿದ್ದರು. ಬಳಿಕ ವಿದ್ಯುತ್ ಶಾಕ್ ನೀಡಲು ಸ್ಟನ್ ಗನ್ ಅನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಹಾಯಕ್ಕಾಗಿ ಅಲೀಮುಲ್ಲಾ ಬೇಗ್ ಕೂಗಿ ಕೊಂಡರೂ, ಸುಮಾರು ಒಂದು ಗಂಟೆಗಳ ಕಾಲ ಅವರಿಗೆ ಚಿತ್ರಹಿಂಸೆ ನೀಡಲಾಯಿತು ಎಂಬುದು ತಿಳಿದುಬಂದಿದೆ. ಬಳಿಕ ಪುನೀತ್ ಕೆರೆಹಳ್ಳಿ ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮದ ಮೂಲಕ ಲೈವ್ ವೀಡಿಯೊ ಮಾಡಿದ್ದನು. ಟ್ರಕ್‌ನೊಳಗೆ ಉಯ್ಯಾಲೆಯಲ್ಲಿ ಮಲಗಿದ್ದ ಅಲೀಮುಲ್ಲಾಗೆ ನೋವನ್ನುಂಟು ಮಾಡಲು ಪುನೀತ್ ಕೆರೆಹಳ್ಳಿ, ಸ್ಟನ್ ಗನ್ ಅನ್ನು ಬಳಸುತ್ತಿರುವ ವೀಡಿಯೊ ವೈರಲ್ ಆಗಿದೆ.

“ನಾನು ನಿರಪರಾಧಿ ಎಂದು ಮನವಿ ಮಾಡಿದರೂ ಹಣಕಾಸಿನ ತೊಂದರೆಯಿಂದಾಗಿ ಜಾನುವಾರು ಸಾಗಾಟದ ಕೆಲಸವನ್ನು ಮಾಡಿಕೊಂಡಿದ್ದೇನೆ ಎಂದು ತಿಳಿಸಿದರೂ ಬಿಡದೆ ಪುನೀತ್‌ ಕೆರೆಹಳ್ಳಿ ಟೀಮ್ ಅಮಾನುಷವಾಗಿ ಹಲ್ಲೆ ನಡೆಸಿದನು. ಬಾಯಿಗೆ ಬಂದಂತೆ ಬೈದನು” ಎಂದು ಸಂತ್ರಸ್ತ ಅಲೀಮುಲ್ಲಾ ತಿಳಿಸಿದ್ದಾರೆ. ಘಟನೆಯ ನಂತರ ಪುನೀತ್ ಕೆರೆಹಳ್ಳಿ, ಕರ್ನಾಟಕ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ರ ಅಡಿಯಲ್ಲಿ ದೂರು ನೀಡಿದ್ದನು.

ಪುನೀತ್ ಕೆರೆಹಳ್ಳಿ ಸದ್ಯ ಸಾತನೂರು ಪೊಲೀಸರ ವಶದಲ್ಲಿದ್ದಾರೆ. ಜಾನುವಾರು ಸಾಗಣೆ ಮಾಡುತ್ತಿದ್ದ ಇದ್ರೀಸ್ ಪಾಷಾ ಎಂಬವರನ್ನು ಪುನೀತ್ ಮತ್ತು ಆತನ ಸಹಚರರು ಕೊಂದಿರುವುದಾಗಿ ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದ್ರೀಸ್ ಪಾಷಾ ಅವರ ದೇಹದ ಮೇಲೂ ಸುಟ್ಟ ಗಾಯದ ಗುರುತುಗಳಿದ್ದು, ಸ್ಟನ್ ಗನ್ ಬಳಸಿರುವ ಶಂಕೆ ವ್ಯಕ್ತವಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿತ್ತು.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಏಳು ದಿನ ನ್ಯಾಯಾಂಗ ಬಂಧನ

ಇದ್ರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಇಂದು ಸಾತನೂರು ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದೆ. ಪ್ರಧಾನ ಸಿವಿಲ್ ನ್ಯಾ.ಅಪ್ಪಣ್ಣ ಸವದಿ ಅವರು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿ ಆದೇಶ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...