Homeಕರ್ನಾಟಕ‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

‘ಸ್ವಾಭಿಮಾನಕ್ಕೆ ಕಾಂಗ್ರೆಸ್ ಪೆಟ್ಟು ನೀಡಿದೆ’: ಪಕ್ಷೇತರವಾಗಿ ಸ್ಪರ್ಧಿಸಲು ವೈಎಸ್‌ವಿ ದತ್ತ ನಿರ್ಧಾರ

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ಸೇರಿ, ಟಿಕೆಟ್‌ ಸಿಗದೆ ಬೇಸರಗೊಂಡಿರುವ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

“ಕಾಂಗ್ರೆಸ್‌ ಟಿಕೆಟ್‌ ನೀಡದೆ ಸ್ವಾಭಿಮಾನಕ್ಕೆ ಪೆಟ್ಟು ನೀಡಿದೆ, ಈ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಡೂರು ಕ್ಷೇತ್ರದ ಸ್ವಾಭಿಮಾನವನ್ನು ರಾಜ್ಯಕ್ಕೆ ತೋರಿಸುವ ಛಲ ತೊಟ್ಟಿದ್ದೇನೆ” ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಕಡೂರು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ಭಾನುವಾರ ನಡೆದ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, “ಈ ಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿತ್ತು. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ ಎಂಬುದಕ್ಕೆ ಪೂರಕವಾಗಿ 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅದನ್ನು, ನನ್ನ ಅಭಿಮಾನಿಗಳು ಮತ್ತು ಪ್ರೀತಿಸುವ ಸಮುದಾಯಗಳು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿವೆ. ಆ ಸ್ವಾಭಿಮಾನ ಉಳಿಸಿಕೊಳ್ಳಲು ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ..

“ಪ್ರೀತಿಯಿಂದಲೇ ಜನರ ಬಳಿ ತೆರಳಿ ಹಣ ಸಹಾಯದ ಜೊತೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನ ನನ್ನ ಅಭಿಮಾನಿಗಳು ಇಡೀ ರಾಜ್ಯಕ್ಕೆ ತೋರಿಸುತ್ತಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂಬ ಮಾಹಿತಿ ನೀಡಿದ್ದಾರೆ.

“ಈಗ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಮಾನದಂಡದ ಅವಲೋಕನ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ, ಅದನ್ನು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೈತಪ್ಪಿದ ಬಳಿಕ ಅಭಿಮಾನಿಗಳಿಗೆ ಪತ್ರ ಬರೆದಿದ್ದ ದತ್ತ ಅವರು, “ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ, ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ‘ದತ್ತಣ್ಣ ನಮ್ಮ ದತ್ತಣ್ಣ’ ಎಮದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ‘ನಿಮ್ಮ ಜೊತೆಗೇ ನಾನಿರಬೇಕು, ನನ್ನ ಜೊತೆಗೇ ನೀವಿರಬೇಕು’ ಎಂಬುದು ಅನಿವಾರ್ಯವಾಗಿದೆ” ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದರು.

“ಈ ಕಾರಣದಿಂದ ಇದು ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವಕ್ಕೆ, ಸ್ವಾಭಿಮಾನಕ್ಕೆ ಆದ ಅವಮಾನವಾಗಿದೆ. ಈ ಕ್ಷೇತ್ರದ ಮತದಾರರ ಸ್ವಾಭಿಮಾನಕ್ಕಾಗಿ, ನಾನು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಕಡೂರು ಪಟ್ಟಣದಲ್ಲಿ 9ರಂದು ಬೆಳಿಗ್ಗೆ 11ಕ್ಕೆ ನನ್ನ ಅಭಿಮಾನಿಗಳ ಸಭೆ ಕರೆದಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹರಸಿ ಆಶೀರ್ವದಿಸಬೇಕು” ಎಂದು ಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿರಿ: ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

ಹೆಚ್ಚಿನ ಸಂಖ್ಯೆಯಲ್ಲಿ ವೈಎಸ್‌ವಿ ದತ್ತ ಅವರ ಅಭಿಮಾನಿಗಳು ಸಭೆಯಲ್ಲಿ ಹಾಜರಿದ್ದರು. ಅದಕ್ಕೂ ಮುಂಚಿತವಾಗಿ ದತ್ತ ಅವರಿಗೆ ಬೆಂಬಲ ಸೂಚಿಸಿ, ಮೆರವಣಿಗೆ ನಡೆಸಿದ್ದರು.

ಜೆಡಿಎಸ್ ತೊರೆದ ವೈಎಸ್‌ವಿ ದತ್ತಾಗೆ ಮರಳಿ ಜೆಡಿಎಸ್ ಕಡೆ ಸೆಳೆದುಕೊಳ್ಳಲು ಮಾಜಿ‌ ಸಚಿವ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ. ಟಿಕೆಟ್ ‌ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ.

ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಸಿದ್ದರಾಮಯ್ಯ ಸಲಹೆಯಂತೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಕಡೂರು ಕ್ಷೇತ್ರಕ್ಕೆ ಸಹಜವಾಗಿ ಅವರು ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...