Homeಕರ್ನಾಟಕ'ಕೈ' ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ವೈ.ಎಸ್.ವಿ. ದತ್ತ ತೀರ್ಮಾನ

‘ಕೈ’ ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ವೈ.ಎಸ್.ವಿ. ದತ್ತ ತೀರ್ಮಾನ

- Advertisement -
- Advertisement -

ಜೆಡಿಎಸ್ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಇದೀಗ ಕಾಂಗ್ರೆಸ್‌ನೊಂದಿಗೂ ಮುನಿಸಿಕೊಂಡಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದಾಗ ಕಡೂರು ಕ್ಷೇತ್ರದಿಂದ ದತ್ತ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ವಿ ದತ್ತ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್‌ ಸೇರಿ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎನ್ನುವ ಆಸೆಯಲ್ಲಿದ್ದರು. ಹಾಗಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಬಿ ಫಾರ್ಮ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಕಾಂಗ್ರೆಸ್‌ನ 2ನೇ ಪಟ್ಟಿಯಲ್ಲಿ ಆನಂದ್‌ ಕೆ.ಎಸ್. ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ತೀವ್ರ ನಿರಾಸೆಗೊಂಡು ಅವರು ರವಿವಾರ ತಮ್ಮ ಅಭಿಮಾನಿಗಳ ಸಭೆಯನ್ನು ಕರೆಯಲಾಗಿದ್ದರು. ಅವರು ಹೇಳಿದಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ. ಅಭಿಮಾನಿಗಳ ಒತ್ತಡ ಬಂದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದರು. ಅದರಂತೆ ರವಿವಾರ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ದತ್ತ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ರವಿವಾರ ಏರ್ಪಡಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ”ಈಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿದೆ. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ. ಅದಕ್ಕೆ ಪೂರಕವಾಗಿ ನಾನು 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅಭಿಮಾನಿಗಳು ಅದನ್ನು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿದ್ದಾರೆ. ಹೀಗಾಗಿ, ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದರು.

ಇದನ್ನೂ ಓದಿ: ವೈಎಸ್‌ವಿ ದತ್ತಾ, ನಾಗೇಶ್ ‘ಕೈ’ ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

”ಜನರ ಬಳಿ ತೆರಳಿ ಧನಸಹಾಯ ಜೊತೆಗೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನು ಅಭಿಮಾನಿಗಳು ತೋರಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂದರು.

”ಈಗ ಅಭ್ಯರ್ಥಿ ಆಯ್ಕೆಗೆ ಮಾನದಂಡ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ನನಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ತಿಳಿದು ಕೆಲವರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದರು.

”ನನ್ನ ಬಳಿ ಹಣ ಇಲ್ಲ, ಜಾತಿ ಇಲ್ಲ ನಾನೊಬ್ಬ ಸಾಲಗಾರ. ಆದರೆ ನನ್ನ ಬಳಿ ಜನ ಬೆಂಬಲ ಇದೆ, ನಾನು ಹೇಳಿದರೆ 10 ಸಾವಿರ ಜನ ಬರುತ್ತಾರೆ. ನನ್ನ ಬಳಿ ಆಸ್ತಿ, ಇಲ್ಲದಿದ್ದರೆ ಪ್ರೀತಿ ಇಲ್ಲವೇ. ಜಾತಿ ರಾಜಕಾರಣಿ ಬೇಡ, ಪ್ರೀತಿ ರಾಜಕಾರಣ ಮಾಡೋಣ” ಎಂದು ಕರೆ ಕೊಟ್ಟರು.

”ಕಳೆದ ಬಾರಿ ಚುನಾವಣೆಯಲ್ಲಿ‌ ನಾನು ಮತ ಚಲಾಯಿಸಿ ಹೊರಬಂದಾಗ, ನನ್ನ ಪತ್ನಿ ನಿಧನರಾಗಿದ್ದಾರೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದರು. ನನ್ನನ್ನು ಸಾಕಿ ಬೆಳೆಸಿದ್ದ ಸಹೋದರಿ ನಾನು ಕ್ಷೇತ್ರದಲ್ಲಿ ಪಾದಯಾತ್ರೆ ಮಾಡುವ ಸಮಯದಲ್ಲಿ ನಿಧನರಾದರು. ಕುಟುಂಬದವರ ಯೋಗಕ್ಷೇಮ ವಿಚಾರಿಸಲೂ ಸಮಯವಾಗುತ್ತಿರಲ್ಲಿಲ್ಲ. ಅಷ್ಟರಮಟ್ಟಿಗೆ ಕೇತ್ರದಲ್ಲಿ ತೊಡಗಿಸಿಕೊಂಡಿದ್ದೆ. ಅಭಿಮಾನಿಗಳೇ ನನ್ನ ಕುಟುಂಬ” ಎಂದು ದತ್ತ ಭಾವುಕರಾದರು.

ಈ ವೇಳೆ ಅವರು ಹೆಗಲ ಮೇಲೆ ಟವೆಲ್ ಹಾಕಿಕೊಂಡು ಧನಸಹಾಯ ಜೊತೆಗೆ ಮತ ಭಿಕ್ಷೆ ಬೇಡಿದರು. ಚುನಾವಣಾ ಖರ್ಚಿಗಾಗಿ ಅಭಿಮಾನಿಗಳು ಸಭೆಯಲ್ಲಿ 50 ಸಾವಿರ ರೂಪಾಯಿ, 2 ಲಕ್ಷದ ಚೆಕ್ ಗಳನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...