Homeಕರ್ನಾಟಕ'ಕೈ' ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ವೈ.ಎಸ್.ವಿ. ದತ್ತ ತೀರ್ಮಾನ

‘ಕೈ’ ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ವೈ.ಎಸ್.ವಿ. ದತ್ತ ತೀರ್ಮಾನ

- Advertisement -
- Advertisement -

ಜೆಡಿಎಸ್ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಇದೀಗ ಕಾಂಗ್ರೆಸ್‌ನೊಂದಿಗೂ ಮುನಿಸಿಕೊಂಡಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದಾಗ ಕಡೂರು ಕ್ಷೇತ್ರದಿಂದ ದತ್ತ ಅವರಿಗೆ ಟಿಕೆಟ್ ನೀಡಲಾಗಿಲ್ಲ. ಈ ಹಿನ್ನೆಲೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ವೈಎಸ್‌ವಿ ದತ್ತ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್‌ ಸೇರಿ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎನ್ನುವ ಆಸೆಯಲ್ಲಿದ್ದರು. ಹಾಗಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಕಡೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಬಿ ಫಾರ್ಮ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಕಾಂಗ್ರೆಸ್‌ನ 2ನೇ ಪಟ್ಟಿಯಲ್ಲಿ ಆನಂದ್‌ ಕೆ.ಎಸ್. ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ತೀವ್ರ ನಿರಾಸೆಗೊಂಡು ಅವರು ರವಿವಾರ ತಮ್ಮ ಅಭಿಮಾನಿಗಳ ಸಭೆಯನ್ನು ಕರೆಯಲಾಗಿದ್ದರು. ಅವರು ಹೇಳಿದಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇನೆ. ಅಭಿಮಾನಿಗಳ ಒತ್ತಡ ಬಂದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದರು. ಅದರಂತೆ ರವಿವಾರ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ದತ್ತ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂದಿರದಲ್ಲಿ ರವಿವಾರ ಏರ್ಪಡಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ”ಈಬಾರಿ ಕ್ಷೇತ್ರದಲ್ಲಿ ವಿಶೇಷ ಪರಿಸ್ಥಿತಿ ತಲೆದೋರಿದೆ. ಐತಿಹಾಸಿಕ ಬದಲಾವಣೆಗೆ ಕ್ಷೇತ್ರ ಸನ್ನದ್ಧವಾಗಿದೆ. ಅದಕ್ಕೆ ಪೂರಕವಾಗಿ ನಾನು 50 ವರ್ಷಗಳ ಜೆಡಿಎಸ್‌ ನಂಟು ಬಿಟ್ಟು ಕಾಂಗ್ರೆಸ್‌ ಸೇರಿದೆ. ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವನ್ನು ಪಕ್ಷ ಹುಸಿ ಮಾಡಿದೆ. ಅಭಿಮಾನಿಗಳು ಅದನ್ನು ಸ್ವಾಭಿಮಾನಕ್ಕೆ ಬಿದ್ದ ಪೆಟ್ಟು ಎಂದೇ ಭಾವಿಸಿದ್ದಾರೆ. ಹೀಗಾಗಿ, ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದೇನೆ” ಎಂದರು.

ಇದನ್ನೂ ಓದಿ: ವೈಎಸ್‌ವಿ ದತ್ತಾ, ನಾಗೇಶ್ ‘ಕೈ’ ಸೇರ್ಪಡೆ; ಇದು ಕಾಂಗ್ರೆಸ್ ಪರ್ವ ಎಂದ ಡಿಕೆಶಿ

”ಜನರ ಬಳಿ ತೆರಳಿ ಧನಸಹಾಯ ಜೊತೆಗೆ ಮತ ಭಿಕ್ಷೆ ಬೇಡುತ್ತೇನೆ‌. ಸ್ವಾಭಿಮಾನ ಎಂದರೆ ಏನು ಎಂಬುದನ್ನು ಅಭಿಮಾನಿಗಳು ತೋರಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಇತ್ಯಾದಿ ಕುರಿತು ಅಭಿಮಾನಿಗಳೊಂದಿಗೆ ಇದೇ 13ರಂದು ಚರ್ಚಿಸಿ ನಿರ್ಧರಿಸುತ್ತೇನೆ” ಎಂದರು.

”ಈಗ ಅಭ್ಯರ್ಥಿ ಆಯ್ಕೆಗೆ ಮಾನದಂಡ ಶುರುವಾಗುವುದೇ ಮೊದಲು ಜಾತಿ, ನಂತರ ಹಣಬಲದಿಂದ. ಆದರೆ, ನನಗೆ ಜಾತಿ, ಹಣ ಬಲ ಎರಡೂ ಇಲ್ಲ. ಇರುವುದು ಜನರ ಪ್ರೀತಿ ಮಾತ್ರ. ನನಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ಎಂದು ತಿಳಿದು ಕೆಲವರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದು ಪ್ರಸ್ತುತ ರಾಜಕಾರಣದ ರೀತಿ” ಎಂದು ಬೇಸರ ವ್ಯಕ್ತಪಡಿಸಿದರು.

”ನನ್ನ ಬಳಿ ಹಣ ಇಲ್ಲ, ಜಾತಿ ಇಲ್ಲ ನಾನೊಬ್ಬ ಸಾಲಗಾರ. ಆದರೆ ನನ್ನ ಬಳಿ ಜನ ಬೆಂಬಲ ಇದೆ, ನಾನು ಹೇಳಿದರೆ 10 ಸಾವಿರ ಜನ ಬರುತ್ತಾರೆ. ನನ್ನ ಬಳಿ ಆಸ್ತಿ, ಇಲ್ಲದಿದ್ದರೆ ಪ್ರೀತಿ ಇಲ್ಲವೇ. ಜಾತಿ ರಾಜಕಾರಣಿ ಬೇಡ, ಪ್ರೀತಿ ರಾಜಕಾರಣ ಮಾಡೋಣ” ಎಂದು ಕರೆ ಕೊಟ್ಟರು.

”ಕಳೆದ ಬಾರಿ ಚುನಾವಣೆಯಲ್ಲಿ‌ ನಾನು ಮತ ಚಲಾಯಿಸಿ ಹೊರಬಂದಾಗ, ನನ್ನ ಪತ್ನಿ ನಿಧನರಾಗಿದ್ದಾರೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದರು. ನನ್ನನ್ನು ಸಾಕಿ ಬೆಳೆಸಿದ್ದ ಸಹೋದರಿ ನಾನು ಕ್ಷೇತ್ರದಲ್ಲಿ ಪಾದಯಾತ್ರೆ ಮಾಡುವ ಸಮಯದಲ್ಲಿ ನಿಧನರಾದರು. ಕುಟುಂಬದವರ ಯೋಗಕ್ಷೇಮ ವಿಚಾರಿಸಲೂ ಸಮಯವಾಗುತ್ತಿರಲ್ಲಿಲ್ಲ. ಅಷ್ಟರಮಟ್ಟಿಗೆ ಕೇತ್ರದಲ್ಲಿ ತೊಡಗಿಸಿಕೊಂಡಿದ್ದೆ. ಅಭಿಮಾನಿಗಳೇ ನನ್ನ ಕುಟುಂಬ” ಎಂದು ದತ್ತ ಭಾವುಕರಾದರು.

ಈ ವೇಳೆ ಅವರು ಹೆಗಲ ಮೇಲೆ ಟವೆಲ್ ಹಾಕಿಕೊಂಡು ಧನಸಹಾಯ ಜೊತೆಗೆ ಮತ ಭಿಕ್ಷೆ ಬೇಡಿದರು. ಚುನಾವಣಾ ಖರ್ಚಿಗಾಗಿ ಅಭಿಮಾನಿಗಳು ಸಭೆಯಲ್ಲಿ 50 ಸಾವಿರ ರೂಪಾಯಿ, 2 ಲಕ್ಷದ ಚೆಕ್ ಗಳನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...