Homeಕರ್ನಾಟಕಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

- Advertisement -
- Advertisement -

ಕೆಲವು ದಿನಗಳಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರುವ ತವಕದಲ್ಲಿದ್ದರು. ಅದರಂತೆ ಭಾನುವಾರ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಅರಸೀಕೆರೆಯ ಜೇನುಕಲ್‌ ಕ್ರೀಡಾಂಗಣದಲ್ಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆ.ಎಂ. ಶಿವಲಿಂಗೇಗೌಡರಿಗೆ ಕಾಂಗ್ರೆಸ್‌ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ”ಶಿವಲಿಂಗೇಗೌಡರನ್ನು ಸುಮಾರು 10 ವರ್ಷಗಳಿಂದ ಕಾಂಗ್ರೆಸ್‌ಗೆ ಕರೆತರಲು ಪ್ರಯತ್ನಿಸಿದ್ದರೂ ಆಗಿರಲಿಲ್ಲ. ನನ್ನ ಮತ್ತು ಸಿದ್ದರಾಮಯ್ಯನವರ ಮಾತಿಗೂ ಅವರು ಒಪ್ಟಿರಲಿಲ್ಲ. ಅಂತಿಮವಾಗಿ ಕ್ಷೇತ್ರದ ಜನರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ ಸೇರುತ್ತಿರುವುದು ಸಂತಸದ ವಿಷಯ” ಎಂದರು.

”ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆ ಸಮಾವೇಶ ಎಂದರೆ ಇತಿಹಾಸ ಸೃಷ್ಟಿಯಾಗುತ್ತಿದೆ. ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗೆ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದರು.

”ಹೋರಾಟ ಮಾಡುವವರು ಗೆದ್ದೇ ಗೆಲ್ಲುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ದೇವರು ಕೊಟ್ಟ ಅವಕಾಶವನ್ನು ಉಪಯೋಗಿಸಿಕೊಳ್ಳುವುದು ಸಾಧನೆ. ನಂಬಿಕೆ ಮೇಲೆ ಎಲ್ಲರೂ ಬದುಕುತ್ತಿದ್ದೇವೆ. ದೇಶದ ಶಕ್ತಿ ಕಾಂಗ್ರೆಸ್. ಸಾಮಾಜಿಕ ಬದ್ದತೆ, ಬಡವರು ಮತ್ತು ರೈತರನ್ನು ಸಬಲರನ್ನಾಗಿಸುವುದು ಕಾಂಗ್ರೆಸ್ ಉದ್ದೇಶ. ರಾಜ್ಯದ ಹಿತಕ್ಕಾಗಿ ಸ್ವಾಭಿಮಾನ ಬದಿಗೊತ್ತಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಡುತ್ತಿದ್ದೇವೆ” ಎಂದು ಹೇಳಿದರು.

”ಮೇ 10 ಕೇವಲ ಮತದಾನ ಮಾಡುವ ದಿನವಲ್ಲ, ಅದು ಕಾಂಗ್ರೆಸ್ ಅಧಿಕಾರಕ್ಕೆ ತರುವ ದಿನವಾಗಿದೆ, ಎಲ್ಲರೂ ತೀರ್ಮಾನಿಸುವ ದಿನ. ಕಮಲ ಕೆರೆಯಲ್ಲಿದ್ದರೆ ಚೆನ್ನ, ಜೆಡಿಎಸ್ ಹೊಲದಲ್ಲಿದ್ದರೆ ಚೆನ್ನ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆನ್ನ. ಈ ನಿಟ್ಟಿನಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ

”ಯಾರೂ ಹಸಿದುಕೊಂಡು ಇರಬಾರದು ಎಂದು ಕಾಂಗ್ರೆಸ್ 10 ಕೆ.ಜಿ. ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ₹2 ಸಾವಿರ ನೀಡಲು ನಿರ್ಧರಿಸಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ದರಾಗಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ”ಎತ್ತಿನಹೊಳೆ ನೀರಾವರಿ ಯೋಜನೆ ತಾಲ್ಲೂಕಿಗೆ ಕೊಟ್ಟಿದ್ದು ಕಾಂಗ್ರೆಸ್, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ. ಎತ್ತಿನಹೊಳೆ ನೀರಾವರಿ ಯೋಜನೆ ಹಣ ಲೂಟಿ ಮಾಡುವ ಯೋಜನೆಯಾಗಿದೆ. ಇದರ ಉದ್ಘಾಟನೆ ಸಮಾರಂಭಕ್ಕೆ ಹೋಗಬೇಡ ಎಂದು ನನ್ನ ಮೇಲೆ ಒತ್ತಡ ಹಾಕಿದ್ದರು. ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಜೆಡಿಎಸ್ ಶಾಸಕನಾಗಿ ನಾನೊಬ್ಬನೇ ಅಂದು ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನಾ ಸಮಾರಂಭಕ್ಕೆ ಹೋಗಿದ್ದೆ. ಸದನದಲ್ಲಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಜೆಡಿಎಸ್‌ನವರು ನನ್ನನ್ನು ವಿರೋಧಿಸಲು ಆರಂಭಿಸಿದರು” ಎಂದು ತಿಳಿಸಿದರು.

”ಬಿಜೆಪಿ ಭ್ರಷ್ಟಾಚಾರದ ಪಕ್ಷವಾಗಿದೆ. ಬಿಜೆಪಿಯಂಥ ನೀತಿಗೆಟ್ಟ ಸರ್ಕಾರ ಯಾವುದೂ ಇಲ್ಲ. ಬಿಜೆಪಿ ಅಭ್ಯರ್ಥಿ ಎಂದು ಬಂದಿರುವ ವ್ಯಕ್ತಿ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಿಲಿಂಡರ್ ಬೆಲೆ ಹಾಗೂ ಗೊಬ್ಬರದ ಬೆಲೆ ಏರಿಕೆ ಮಾಡುತ್ತಿದೆ. ರೈತರು ಹಾಗೂ ಸಾಮಾನ್ಯ ಜನರು, ಬಡವರನ್ನು ಸುಲಿಗೆ ಮಾಡುತ್ತಿರುವುದೇ ಬಿಜೆಪಿ ಸರ್ಕಾರದ ಸಾಧನೆ. ಕೊಬ್ಬರಿ ಬೆಂಬಲ ಬೆಲೆ ನಿಗದಿಯಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿದೆ. ಆದಾನಿ, ಅಂಬಾನಿ ಸೇರಿದಂತೆ ದೊಡ್ಡ ಕಾರ್ಪೋರೇಟ್ ಕಂಪೆನಿಗಳನ್ನು ಬೆಳೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಿನೇ ದಿನೇ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ”ಕಾಂಗ್ರೆಸ್‌ ಪಕ್ಷ ನಮ್ಮೂರಿಗೆ ಬಂದು ನನ್ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಅದೇ ರೀತಿ ನಿಮ್ಮೂರಿಗೆ ಬಂದು ಶಿವಲಿಂಗೇಗೌಡರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತಿದ್ದೇವೆ. ನಿನಗೆ ನೀರಿಗೆ ಹಾಕಲ್ಲ, ಹಾಲಿಗೆ ಹಾಕೇ ಹಾಕುತ್ತೇವೆ. ನಿನ್ನ ಮತ್ತು ನಿನ್ನ ಕ್ಷೇತ್ರವನ್ನೂ ಕ್ಷೇಮವಾಗಿ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.

”ಜೆಡಿಎಸ್‌ನಲ್ಲಿ ಎಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿಕೊಂಡು ಇರಬೇಕು. ಪ್ರಶ್ನೆ ಮಾಡಿದವರನ್ನು ಜೆಡಿಎಸ್‌ನಿಂದ ಹೊರಗೆ ಹಾಕುತ್ತಾರೆ. ಶಿವಲಿಂಗೇಗೌಡರಿಗೂ ಅದನ್ನೇ ಮಾಡಿದ್ದು” ಎಂದರು..

”ಶಿವಲಿಂಗೇಗೌಡರು ಜೆಡಿಎಸ್ ಶಾಸಕರಾಗಿದ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳ ಜೊತೆ ಉತ್ತಮ ಒಡನಾಟ ಇಟ್ಟುಕೊಂಡು ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು.

”ಎತ್ತಿನಹೊಳೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿಸಿಕೊಂಡು ಜನರ ಸೇವೆ ಮಾಡಿದ್ದಾರೆ ಕ್ಷೇತ್ರದ ಜನತೆಗೆ ಕುಡಿಯುವ ನೀರನ್ನು ಕೊಟ್ಟಿದ್ದು ಶಿವಲಿಂಗೇಗೌಡ. ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭಕ್ಕೆ ಶಿವಲಿಂಗೇಗೌಡ ಹೊರತಪಡಿಸಿ, ಉಳಿದ ಜೆಡಿಎಸ್ ಶಾಸಕರು ಸಮಾರಂಭಕ್ಕೆ ಬರಲಿಲ್ಲ. ಎಚ್.ಡಿ. ಕುಮಾರಸ್ವಾಮಿ ಎತ್ತಿನಹೊಳೆ ನೀರಾವರಿ ಯೋಜನೆ ವಿರೋಧಿಸಿದ್ದರು. ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದ ನಂತರ ಬಂದ ಬೇರೆ ಪಕ್ಷಗಳ ಸರ್ಕಾರಗಳು ಎತ್ತಿನಹೊಳೆ ಯೋಜನೆಗೆ ಹಣ ಮಂಜೂರು ಮಾಡುತ್ತಿಲ್ಲ” ಎಂದು ಸಿದ್ದರಾಮಯ್ಯ ದೂರಿದರು.

ಈ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಜಮೀರ್ ಅಹ್ಮದ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷ ಶಿವಶಂಕರಸ್ವಾಮಿ, ಪಟೇಲ್ ಶಿವಪ್ಪ, ಸಿ.ಎಸ್ ಪುಟ್ಟೇಗೌಡ, ಗೋಪಾಲಸ್ವಾಮಿ, ಬಾಗೂರು ಮಂಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್, ಮೆಟ್ರೊ ಬಾಬು, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ತಾರಾ ಚಂದನ್, ಜಿಲ್ಲಾ ಹಾಗೂ ತಾಲ್ಲೂಕು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...