Homeಮುಖಪುಟಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

- Advertisement -
- Advertisement -

ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಹಪಾಠಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 19 ವರ್ಷದ ಅರ್ಮಾನ್ ಖತ್ರಿಯನ್ನು ಬಂಧಿಸಲಾಗಿದೆ.

ಐಐಟಿ ಬಾಂಬೆಯಲ್ಲಿ ದರ್ಶನ್‌ ಸೋಲಂಕಿ ಬ್ಯಾಚುಲರ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು. ಇಲ್ಲಿ ದರ್ಶನ್‌ ಜಾತಿ ತಾರತಮ್ಯ ಎದುರಿಸಿದ್ದರು ಎಂದು ಅವರ ಕುಟುಂಬದವರು ಹೇಳಿಕೊಂಡಿದ್ದರು. ಆದಾಗ್ಯೂ, ಐಐಟಿ-ಬಾಂಬೆ ರಚಿಸಿದ ತನಿಖಾ ಸಮಿತಿಯು ಇದನ್ನು ನಿರಾಕರಿಸಿತ್ತು. ಸೋಲಂಕಿ ಅವರ ಸಾವಿಗೆ ಕಾರಣ ‘ಶೈಕ್ಷಣಿಕ ಹಿಂದುಳಿದಿರುವಿಕೆ’ ಎಂದು ಹೇಳಿಕೊಂಡಿತ್ತು.

ಸೋಲಂಕಿ ಅವರ ಕೊಠಡಿಯಲ್ಲಿ ಪತ್ತೆಯಾಗಿದ್ದ ಸೂಸೈಡ್ ನೋಟ್‌ನಲ್ಲಿ ‘ಅರ್ಮಾನ್‌ ಖತ್ರಿ’ ಹೆಸರು ಉಲ್ಲೇಖಗೊಂಡಿದೆ. ಈ ಟಿಪ್ಪಣಿಯನ್ನು ಸೋಲಂಕಿ ಅವರೇ ಬರೆದಿದ್ದಾರೆ ಎಂಬುದು ಕೈಬರಹದ ವಿಶ್ಲೇಷಣೆಯಿಂದ ದೃಢಪಟ್ಟ ನಂತರ ಖತ್ರಿಯನ್ನು ಬಂಧಿಸಲಾಗಿದೆ.

“ಕೋಮುವಾದಿ ಆಯಾಮದ ಕೆಲವು ಟೀಕೆಗಳನ್ನು ದರ್ಶನ್‌ ಮಾಡಿದ ನಂತರ ಖತ್ರಿ, ಆತನಿಗೆ ಕಟರ್‌ನಿಂದ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅಂದಿನಿಂದ, ಸೋಲಂಕಿ ಭಯಭೀತರಾಗಿದ್ದರು, ಒಂದೆರಡು ಸಂದರ್ಭಗಳಲ್ಲಿ ಖತ್ರಿಯಲ್ಲಿ ಕ್ಷಮೆಯಾಚಿಸಿದ್ದನು ಮತ್ತು ಇಬ್ಬರೂ ತಬ್ಬಿಕೊಂಡಿದ್ದರು. ಆದಾಗ್ಯೂ, ಸೋಲಂಕಿ ಹೆದರುತ್ತಲೇ ಇದ್ದಂತೆ ತೋರುತ್ತಿದೆ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಖತ್ರಿ ಮತ್ತು ಸೋಲಂಕಿ ನಡುವಿನ ಜಗಳಕ್ಕೆ ಕಾರಣವೇನು ಎಂದು ಕೇಳಿದಾಗ ಖತ್ರಿ ಸಹಕರಿಸುತ್ತಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. “ನಾವು ಅವನನ್ನು ಬಂಧಿಸಿದ್ದೇವೆ. ಆದ್ದರಿಂದ ನಾವು ಆತನನ್ನು ಪ್ರಶ್ನಿಸಬಹುದು ಮತ್ತು ಘಟನೆಗಳ ನಿಖರವಾದ ವಿವರಗಳನ್ನು ಪಡೆಯಬಹುದು” ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಜಾತಿ ತಾರತಮ್ಯದ ಬಗ್ಗೆ ತನಿಖಾಧಿಕಾರಿಗಳಿಗೆ ಇದುವರೆಗೆ ಪುರಾವೆಗಳು ಸಿಕ್ಕಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

ಮೃತ ವಿದ್ಯಾರ್ಥಿಯ ತಂದೆ ರಮೇಶಭಾಯ್ ಸೋಲಂಕಿ ಪ್ರತಿಕ್ರಿಯಿಸಿ, “ಕುಟುಂಬವು ನ್ಯಾಯಯುತವಾದ ವಿಚಾರಣೆಯನ್ನು ಮಾತ್ರ ಬಯಸುತ್ತಿದೆ” ಎಂದು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

“ಅರ್ಮಾನ್ ನನ್ನನ್ನು ಕೊಂದಿದ್ದಾನೆ” ಎಂದು ಪಶ್ನೆ ಪತ್ರಿಕೆಯೊಂದರ ಹಿಂಭಾಗದಲ್ಲಿ ಬರೆದಿರುವುದನ್ನು ಪೊಲೀಸರು ನಮಗೆ ತೋರಿಸಿದ್ದಾರೆ ಎಂದು ಸೋಲಂಕಿ ತಂದೆ ತಿಳಿಸಿದ್ದಾರೆ. “ನಾವು ಕೈಬರಹವನ್ನು ಇಟ್ಟುಕೊಳ್ಳಲು ಸಾಧ್ಯವಾಗಲಿಲ್ಲ. ಈಗ ವಿಧಿವಿಜ್ಞಾನ ತಜ್ಞರು ಅದನ್ನು ದೃಢಪಡಿಸಿದ್ದಾರೆ” ಎಂದಿದ್ದಾರೆ.

“ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಇತ್ತೀಚೆಗೆ ಆರೋಪಿಸಿತ್ತು.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದರು. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದರು.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದರು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದರು. “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...