Homeಕರ್ನಾಟಕಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕದಲ್ಲಿ ಅಮುಲ್‌ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆಗಳ ನಡುವೆ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಜಯನ್ ಮೆಹ್ತಾ ಅವರು ಪ್ರತಿಕ್ರಿಯಿಸಿದ್ದಾರೆ.

“ಕರ್ನಾಟಕ ರಾಜ್ಯದ ಡೇರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸಿರುವುದು ನಂದಿನಿಯೊಂದಿಗೆ ಸ್ಪರ್ಧಿಸಲು ಅಲ್ಲ, ನಂದಿನಿ ಜೊತೆಜೊತೆಯಲ್ಲಿ ನಡೆಯಲು ಅಮುಲ್ ಪ್ರವೇಶಿಸಿದೆ” ಎಂದಿದ್ದಾರೆ.

ಅಮುಲ್ ಉತ್ಪನ್ನಗಳನ್ನು ಬಹಿಷ್ಕರಿಸಿ ಕರ್ನಾಟಕದ ಹೈನುಗಾರರನ್ನು ಪ್ರೋತ್ಸಾಹಿಸಲು ‘ರಾಜ್ಯದ ಹೆಮ್ಮೆ’ಯ ನಂದಿನಿ ಬ್ರಾಂಡ್ ಬಳಸುವಂತೆ ಆಗ್ರಹಗಳು ಹೆಚ್ಚಾಗಿವೆ.

ಬಹಿಷ್ಕಾರ ಹೆಚ್ಚಾದಂತೆ ರಾಜಕೀಯ ಗದ್ದಲವೂ ತೀವ್ರಗೊಂಡಿದೆ. ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, “ರಾಜ್ಯ ಸರ್ಕಾರವು ನಮ್ಮ ಹೆಮ್ಮೆಯ ನಂದಿನಿ ಬ್ರಾಂಡ್ ಅನ್ನು ನಾಶಪಡಿಸುತ್ತಿದೆ” ಎಂದು ಆರೋಪಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ನಡೆಸಿರುವ ವಿಶೇಷ ಸಂವಾದದ ವೇಳೆ ಪ್ರತಿಕ್ರಿಯೆ ನೀಡಿರುವ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ, “ಇದು ಅಮುಲ್ ವರ್ಸಸ್ ನಂದಿನಿ ಎಂಬ ವಿಚಾರ ಅಲ್ಲ. ಅಮುಲ್ ಮತ್ತು ನಂದಿನಿ ಒಟ್ಟಿಗೆ ಇರುವ ವಿಷಯವಾಗಿದೆ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುವ ರೈತ ಒಡೆತನದ ಸಹಕಾರಿ ಸಂಸ್ಥೆಗಳಾಗಿವೆ. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ಅಮುಲ್ ಬಹಿಷ್ಕರಿಸಿ’, ‘ಗೋಬ್ಯಾಕ್ ಅಮುಲ್’ನಂತಹ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೆಹ್ತಾ, “ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಸಾಧ್ಯವಿಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರು. ಅವರು ತಮ್ಮ ಮನಸ್ಸಿನಲ್ಲಿ ಇದ್ದದ್ದನ್ನು ಹೇಳಲು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಸಂಬಂಧ ಬದಲಾಗುವುದಿಲ್ಲ” ಎಂದಿದ್ದಾರೆ.

“ನಾವು ನಂದಿನಿಯೊಂದಿಗೆ ಹಲವಾರು ರೀತಿಯಲ್ಲಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿ ಅಮುಲ್ ಐಸ್ ಕ್ರೀಂ ಪ್ಯಾಕ್ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗಲೂ, ಅವರಲ್ಲಿ ಹೆಚ್ಚುವರಿಯಾಗಿದ್ದಾಗ ನಾವು ನಂದಿನಿಯಿಂದ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿಯೂ ಅಮುಲ್‌ನ ಹಾಲು ಮತ್ತು ಮೊಸರು ಪೂರೈಕೆ ಮಾಡಲಾಗುತ್ತಿದೆ ಎಂಬ ಆತಂಕಗಳನ್ನು ಮೆಹ್ತಾ ತಳ್ಳಿ ಹಾಕಿದ್ದಾರೆ. “ಅಮುಲ್ ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ತ್ವರಿತ ವಾಣಿಜ್ಯ ವೇದಿಕೆಗಳ ಮೂಲಕ ಮಾರಾಟ ಮಾಡಲು ಯೋಜಿಸುತ್ತಿದೆ” ಎಂದು ಹೇಳಿದ್ದಾರೆ.

ಅಮುಲ್‌ನ ಪೌಚ್ಡ್ ಹಾಲು ಮತ್ತು ಮೊಸರು ಈ ವಾರ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಬರಲಿವೆ ಎಂದು ಮೆಹ್ತಾ ತಿಳಿಸಿದ್ದಾರೆ. “ಅಮುಲ್ ಕಂಪನಿಯು ಈಗಾಗಲೇ ಕರ್ನಾಟಕದ ಮಾರುಕಟ್ಟೆಯಲ್ಲಿ ಈ ಉತ್ಪನ್ನಗಳನ್ನು ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದೆ. ನಾವು ಈಗಾಗಲೇ ನಮ್ಮ ಪೌಚ್ಡ್ ಹಾಲು ಮತ್ತು ಮೊಸರನ್ನು ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಏಳು-ಎಂಟು ವರ್ಷಗಳಿಂದ ಮಾರುತ್ತಿದ್ದೇವೆ. ಹೊಸದಾಗಿ ಅಮುಲ್‌ ಮಾರುಕಟ್ಟೆ ಪ್ರವೇಶಿಸುತ್ತಿಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

“ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿದಿದೆ. ಅಮುಲ್ ಸ್ಥಳೀಯ ಬ್ರ್ಯಾಂಡ್‌ಗೆ ಹೋಲಿಸಿದರೆ ಮೂರನೇ ಮತ್ತು ಕೆಲವೊಮ್ಮೆ ನಾಲ್ಕನೇ ಸ್ಥಾನದಲ್ಲಿದೆ. ಅಮುಲ್ ಈ ಎರಡು ನಗರಗಳಲ್ಲಿ ದಿನಕ್ಕೆ 6000-8000 ಲೀಟರ್ ಹಾಲು ಮಾರಾಟ ಮಾಡುತ್ತಿದೆ, ನಂದಿನಿ ದಿನಕ್ಕೆ 1.25-1.3 ಲಕ್ಷ ಲೀಟರ್ ಮಾರಾಟ ಮಾಡುತ್ತಿದೆ. ಪ್ರತಿ ಲೀಟರ್‌ ನಂದಿನಿ ಹಾಲಿಗೆ 40 ರೂ., ಅಮುಲ್ ಹಾಲಿನ ದರ ಲೀಟರ್‌ಗೆ 54 ರೂ. ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅಮುಲ್ ಪೌಚ್ ಮೊಸರು ಕೆಜಿಗೆ 66 ರೂ., ನಂದಿನಿ 1 ಕೆಜಿಗೆ 40 ರೂ. ಇದಲ್ಲದೆ, 500 ಎಂಎಲ್‌ಗೆ 32 ರೂ ಬೆಲೆಯಲ್ಲಿ ‘ಅಮುಲ್ ಗೋಲ್ಡ್ ಸ್ಪೆಷಲ್ ಮಿಲ್ಕಿ ಮಿಲ್ಕ್’ ಅನ್ನು ಮಾರಾಟ ಮಾಡಲು ಅಮುಲ್ ಯೋಜಿಸುತ್ತಿದೆ.

“ಇ-ಕಾಮರ್ಸ್‌ನಲ್ಲಿ ಅಮುಲ್ ಹಾಲು ಮತ್ತು ಮೊಸರಿಗೆ ಸಾಕಷ್ಟು ಹುಡುಕಾಟ ನಡೆಯುವುದನ್ನು ಬೆಂಗಳೂರು ಮತ್ತು ದಕ್ಷಿಣ ಭಾರತದ ಇತರ ನಗರಗಳಲ್ಲಿ ನಾವು ನೋಡಿದ್ದೇವೆ. ಬೆಂಗಳೂರಿನಲ್ಲಿ ನಮಗೆ ಪ್ಲಾಂಟ್ ಇಲ್ಲ, ಹಾಗಾಗಿ ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ನಮ್ಮ ಹತ್ತಿರದ ಪ್ಲಾಂಟ್‌ನಿಂದ ಹಾಲನ್ನು ಕಳುಹಿಸುತ್ತಿದ್ದೇವೆ” ಎಂದು ಮೆಹ್ತಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...