Homeಕರ್ನಾಟಕಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕದಲ್ಲಿ ಅಮುಲ್‌ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆಗಳ ನಡುವೆ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಜಯನ್ ಮೆಹ್ತಾ ಅವರು ಪ್ರತಿಕ್ರಿಯಿಸಿದ್ದಾರೆ.

“ಕರ್ನಾಟಕ ರಾಜ್ಯದ ಡೇರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸಿರುವುದು ನಂದಿನಿಯೊಂದಿಗೆ ಸ್ಪರ್ಧಿಸಲು ಅಲ್ಲ, ನಂದಿನಿ ಜೊತೆಜೊತೆಯಲ್ಲಿ ನಡೆಯಲು ಅಮುಲ್ ಪ್ರವೇಶಿಸಿದೆ” ಎಂದಿದ್ದಾರೆ.

ಅಮುಲ್ ಉತ್ಪನ್ನಗಳನ್ನು ಬಹಿಷ್ಕರಿಸಿ ಕರ್ನಾಟಕದ ಹೈನುಗಾರರನ್ನು ಪ್ರೋತ್ಸಾಹಿಸಲು ‘ರಾಜ್ಯದ ಹೆಮ್ಮೆ’ಯ ನಂದಿನಿ ಬ್ರಾಂಡ್ ಬಳಸುವಂತೆ ಆಗ್ರಹಗಳು ಹೆಚ್ಚಾಗಿವೆ.

ಬಹಿಷ್ಕಾರ ಹೆಚ್ಚಾದಂತೆ ರಾಜಕೀಯ ಗದ್ದಲವೂ ತೀವ್ರಗೊಂಡಿದೆ. ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, “ರಾಜ್ಯ ಸರ್ಕಾರವು ನಮ್ಮ ಹೆಮ್ಮೆಯ ನಂದಿನಿ ಬ್ರಾಂಡ್ ಅನ್ನು ನಾಶಪಡಿಸುತ್ತಿದೆ” ಎಂದು ಆರೋಪಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ನಡೆಸಿರುವ ವಿಶೇಷ ಸಂವಾದದ ವೇಳೆ ಪ್ರತಿಕ್ರಿಯೆ ನೀಡಿರುವ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ, “ಇದು ಅಮುಲ್ ವರ್ಸಸ್ ನಂದಿನಿ ಎಂಬ ವಿಚಾರ ಅಲ್ಲ. ಅಮುಲ್ ಮತ್ತು ನಂದಿನಿ ಒಟ್ಟಿಗೆ ಇರುವ ವಿಷಯವಾಗಿದೆ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುವ ರೈತ ಒಡೆತನದ ಸಹಕಾರಿ ಸಂಸ್ಥೆಗಳಾಗಿವೆ. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ಅಮುಲ್ ಬಹಿಷ್ಕರಿಸಿ’, ‘ಗೋಬ್ಯಾಕ್ ಅಮುಲ್’ನಂತಹ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೆಹ್ತಾ, “ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಸಾಧ್ಯವಿಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರು. ಅವರು ತಮ್ಮ ಮನಸ್ಸಿನಲ್ಲಿ ಇದ್ದದ್ದನ್ನು ಹೇಳಲು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಸಂಬಂಧ ಬದಲಾಗುವುದಿಲ್ಲ” ಎಂದಿದ್ದಾರೆ.

“ನಾವು ನಂದಿನಿಯೊಂದಿಗೆ ಹಲವಾರು ರೀತಿಯಲ್ಲಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿ ಅಮುಲ್ ಐಸ್ ಕ್ರೀಂ ಪ್ಯಾಕ್ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗಲೂ, ಅವರಲ್ಲಿ ಹೆಚ್ಚುವರಿಯಾಗಿದ್ದಾಗ ನಾವು ನಂದಿನಿಯಿಂದ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿಯೂ ಅಮುಲ್‌ನ ಹಾಲು ಮತ್ತು ಮೊಸರು ಪೂರೈಕೆ ಮಾಡಲಾಗುತ್ತಿದೆ ಎಂಬ ಆತಂಕಗಳನ್ನು ಮೆಹ್ತಾ ತಳ್ಳಿ ಹಾಕಿದ್ದಾರೆ. “ಅಮುಲ್ ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ತ್ವರಿತ ವಾಣಿಜ್ಯ ವೇದಿಕೆಗಳ ಮೂಲಕ ಮಾರಾಟ ಮಾಡಲು ಯೋಜಿಸುತ್ತಿದೆ” ಎಂದು ಹೇಳಿದ್ದಾರೆ.

ಅಮುಲ್‌ನ ಪೌಚ್ಡ್ ಹಾಲು ಮತ್ತು ಮೊಸರು ಈ ವಾರ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಬರಲಿವೆ ಎಂದು ಮೆಹ್ತಾ ತಿಳಿಸಿದ್ದಾರೆ. “ಅಮುಲ್ ಕಂಪನಿಯು ಈಗಾಗಲೇ ಕರ್ನಾಟಕದ ಮಾರುಕಟ್ಟೆಯಲ್ಲಿ ಈ ಉತ್ಪನ್ನಗಳನ್ನು ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದೆ. ನಾವು ಈಗಾಗಲೇ ನಮ್ಮ ಪೌಚ್ಡ್ ಹಾಲು ಮತ್ತು ಮೊಸರನ್ನು ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಏಳು-ಎಂಟು ವರ್ಷಗಳಿಂದ ಮಾರುತ್ತಿದ್ದೇವೆ. ಹೊಸದಾಗಿ ಅಮುಲ್‌ ಮಾರುಕಟ್ಟೆ ಪ್ರವೇಶಿಸುತ್ತಿಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

“ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿದಿದೆ. ಅಮುಲ್ ಸ್ಥಳೀಯ ಬ್ರ್ಯಾಂಡ್‌ಗೆ ಹೋಲಿಸಿದರೆ ಮೂರನೇ ಮತ್ತು ಕೆಲವೊಮ್ಮೆ ನಾಲ್ಕನೇ ಸ್ಥಾನದಲ್ಲಿದೆ. ಅಮುಲ್ ಈ ಎರಡು ನಗರಗಳಲ್ಲಿ ದಿನಕ್ಕೆ 6000-8000 ಲೀಟರ್ ಹಾಲು ಮಾರಾಟ ಮಾಡುತ್ತಿದೆ, ನಂದಿನಿ ದಿನಕ್ಕೆ 1.25-1.3 ಲಕ್ಷ ಲೀಟರ್ ಮಾರಾಟ ಮಾಡುತ್ತಿದೆ. ಪ್ರತಿ ಲೀಟರ್‌ ನಂದಿನಿ ಹಾಲಿಗೆ 40 ರೂ., ಅಮುಲ್ ಹಾಲಿನ ದರ ಲೀಟರ್‌ಗೆ 54 ರೂ. ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅಮುಲ್ ಪೌಚ್ ಮೊಸರು ಕೆಜಿಗೆ 66 ರೂ., ನಂದಿನಿ 1 ಕೆಜಿಗೆ 40 ರೂ. ಇದಲ್ಲದೆ, 500 ಎಂಎಲ್‌ಗೆ 32 ರೂ ಬೆಲೆಯಲ್ಲಿ ‘ಅಮುಲ್ ಗೋಲ್ಡ್ ಸ್ಪೆಷಲ್ ಮಿಲ್ಕಿ ಮಿಲ್ಕ್’ ಅನ್ನು ಮಾರಾಟ ಮಾಡಲು ಅಮುಲ್ ಯೋಜಿಸುತ್ತಿದೆ.

“ಇ-ಕಾಮರ್ಸ್‌ನಲ್ಲಿ ಅಮುಲ್ ಹಾಲು ಮತ್ತು ಮೊಸರಿಗೆ ಸಾಕಷ್ಟು ಹುಡುಕಾಟ ನಡೆಯುವುದನ್ನು ಬೆಂಗಳೂರು ಮತ್ತು ದಕ್ಷಿಣ ಭಾರತದ ಇತರ ನಗರಗಳಲ್ಲಿ ನಾವು ನೋಡಿದ್ದೇವೆ. ಬೆಂಗಳೂರಿನಲ್ಲಿ ನಮಗೆ ಪ್ಲಾಂಟ್ ಇಲ್ಲ, ಹಾಗಾಗಿ ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ನಮ್ಮ ಹತ್ತಿರದ ಪ್ಲಾಂಟ್‌ನಿಂದ ಹಾಲನ್ನು ಕಳುಹಿಸುತ್ತಿದ್ದೇವೆ” ಎಂದು ಮೆಹ್ತಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...