Homeಕರ್ನಾಟಕಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕದಲ್ಲಿ ಅಮುಲ್‌ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆಗಳ ನಡುವೆ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಜಯನ್ ಮೆಹ್ತಾ ಅವರು ಪ್ರತಿಕ್ರಿಯಿಸಿದ್ದಾರೆ.

“ಕರ್ನಾಟಕ ರಾಜ್ಯದ ಡೇರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸಿರುವುದು ನಂದಿನಿಯೊಂದಿಗೆ ಸ್ಪರ್ಧಿಸಲು ಅಲ್ಲ, ನಂದಿನಿ ಜೊತೆಜೊತೆಯಲ್ಲಿ ನಡೆಯಲು ಅಮುಲ್ ಪ್ರವೇಶಿಸಿದೆ” ಎಂದಿದ್ದಾರೆ.

ಅಮುಲ್ ಉತ್ಪನ್ನಗಳನ್ನು ಬಹಿಷ್ಕರಿಸಿ ಕರ್ನಾಟಕದ ಹೈನುಗಾರರನ್ನು ಪ್ರೋತ್ಸಾಹಿಸಲು ‘ರಾಜ್ಯದ ಹೆಮ್ಮೆ’ಯ ನಂದಿನಿ ಬ್ರಾಂಡ್ ಬಳಸುವಂತೆ ಆಗ್ರಹಗಳು ಹೆಚ್ಚಾಗಿವೆ.

ಬಹಿಷ್ಕಾರ ಹೆಚ್ಚಾದಂತೆ ರಾಜಕೀಯ ಗದ್ದಲವೂ ತೀವ್ರಗೊಂಡಿದೆ. ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, “ರಾಜ್ಯ ಸರ್ಕಾರವು ನಮ್ಮ ಹೆಮ್ಮೆಯ ನಂದಿನಿ ಬ್ರಾಂಡ್ ಅನ್ನು ನಾಶಪಡಿಸುತ್ತಿದೆ” ಎಂದು ಆರೋಪಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ನಡೆಸಿರುವ ವಿಶೇಷ ಸಂವಾದದ ವೇಳೆ ಪ್ರತಿಕ್ರಿಯೆ ನೀಡಿರುವ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ, “ಇದು ಅಮುಲ್ ವರ್ಸಸ್ ನಂದಿನಿ ಎಂಬ ವಿಚಾರ ಅಲ್ಲ. ಅಮುಲ್ ಮತ್ತು ನಂದಿನಿ ಒಟ್ಟಿಗೆ ಇರುವ ವಿಷಯವಾಗಿದೆ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುವ ರೈತ ಒಡೆತನದ ಸಹಕಾರಿ ಸಂಸ್ಥೆಗಳಾಗಿವೆ. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ಅಮುಲ್ ಬಹಿಷ್ಕರಿಸಿ’, ‘ಗೋಬ್ಯಾಕ್ ಅಮುಲ್’ನಂತಹ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೆಹ್ತಾ, “ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಸಾಧ್ಯವಿಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರು. ಅವರು ತಮ್ಮ ಮನಸ್ಸಿನಲ್ಲಿ ಇದ್ದದ್ದನ್ನು ಹೇಳಲು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಸಂಬಂಧ ಬದಲಾಗುವುದಿಲ್ಲ” ಎಂದಿದ್ದಾರೆ.

“ನಾವು ನಂದಿನಿಯೊಂದಿಗೆ ಹಲವಾರು ರೀತಿಯಲ್ಲಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿ ಅಮುಲ್ ಐಸ್ ಕ್ರೀಂ ಪ್ಯಾಕ್ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗಲೂ, ಅವರಲ್ಲಿ ಹೆಚ್ಚುವರಿಯಾಗಿದ್ದಾಗ ನಾವು ನಂದಿನಿಯಿಂದ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿಯೂ ಅಮುಲ್‌ನ ಹಾಲು ಮತ್ತು ಮೊಸರು ಪೂರೈಕೆ ಮಾಡಲಾಗುತ್ತಿದೆ ಎಂಬ ಆತಂಕಗಳನ್ನು ಮೆಹ್ತಾ ತಳ್ಳಿ ಹಾಕಿದ್ದಾರೆ. “ಅಮುಲ್ ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ತ್ವರಿತ ವಾಣಿಜ್ಯ ವೇದಿಕೆಗಳ ಮೂಲಕ ಮಾರಾಟ ಮಾಡಲು ಯೋಜಿಸುತ್ತಿದೆ” ಎಂದು ಹೇಳಿದ್ದಾರೆ.

ಅಮುಲ್‌ನ ಪೌಚ್ಡ್ ಹಾಲು ಮತ್ತು ಮೊಸರು ಈ ವಾರ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಬರಲಿವೆ ಎಂದು ಮೆಹ್ತಾ ತಿಳಿಸಿದ್ದಾರೆ. “ಅಮುಲ್ ಕಂಪನಿಯು ಈಗಾಗಲೇ ಕರ್ನಾಟಕದ ಮಾರುಕಟ್ಟೆಯಲ್ಲಿ ಈ ಉತ್ಪನ್ನಗಳನ್ನು ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದೆ. ನಾವು ಈಗಾಗಲೇ ನಮ್ಮ ಪೌಚ್ಡ್ ಹಾಲು ಮತ್ತು ಮೊಸರನ್ನು ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಏಳು-ಎಂಟು ವರ್ಷಗಳಿಂದ ಮಾರುತ್ತಿದ್ದೇವೆ. ಹೊಸದಾಗಿ ಅಮುಲ್‌ ಮಾರುಕಟ್ಟೆ ಪ್ರವೇಶಿಸುತ್ತಿಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

“ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿದಿದೆ. ಅಮುಲ್ ಸ್ಥಳೀಯ ಬ್ರ್ಯಾಂಡ್‌ಗೆ ಹೋಲಿಸಿದರೆ ಮೂರನೇ ಮತ್ತು ಕೆಲವೊಮ್ಮೆ ನಾಲ್ಕನೇ ಸ್ಥಾನದಲ್ಲಿದೆ. ಅಮುಲ್ ಈ ಎರಡು ನಗರಗಳಲ್ಲಿ ದಿನಕ್ಕೆ 6000-8000 ಲೀಟರ್ ಹಾಲು ಮಾರಾಟ ಮಾಡುತ್ತಿದೆ, ನಂದಿನಿ ದಿನಕ್ಕೆ 1.25-1.3 ಲಕ್ಷ ಲೀಟರ್ ಮಾರಾಟ ಮಾಡುತ್ತಿದೆ. ಪ್ರತಿ ಲೀಟರ್‌ ನಂದಿನಿ ಹಾಲಿಗೆ 40 ರೂ., ಅಮುಲ್ ಹಾಲಿನ ದರ ಲೀಟರ್‌ಗೆ 54 ರೂ. ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅಮುಲ್ ಪೌಚ್ ಮೊಸರು ಕೆಜಿಗೆ 66 ರೂ., ನಂದಿನಿ 1 ಕೆಜಿಗೆ 40 ರೂ. ಇದಲ್ಲದೆ, 500 ಎಂಎಲ್‌ಗೆ 32 ರೂ ಬೆಲೆಯಲ್ಲಿ ‘ಅಮುಲ್ ಗೋಲ್ಡ್ ಸ್ಪೆಷಲ್ ಮಿಲ್ಕಿ ಮಿಲ್ಕ್’ ಅನ್ನು ಮಾರಾಟ ಮಾಡಲು ಅಮುಲ್ ಯೋಜಿಸುತ್ತಿದೆ.

“ಇ-ಕಾಮರ್ಸ್‌ನಲ್ಲಿ ಅಮುಲ್ ಹಾಲು ಮತ್ತು ಮೊಸರಿಗೆ ಸಾಕಷ್ಟು ಹುಡುಕಾಟ ನಡೆಯುವುದನ್ನು ಬೆಂಗಳೂರು ಮತ್ತು ದಕ್ಷಿಣ ಭಾರತದ ಇತರ ನಗರಗಳಲ್ಲಿ ನಾವು ನೋಡಿದ್ದೇವೆ. ಬೆಂಗಳೂರಿನಲ್ಲಿ ನಮಗೆ ಪ್ಲಾಂಟ್ ಇಲ್ಲ, ಹಾಗಾಗಿ ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ನಮ್ಮ ಹತ್ತಿರದ ಪ್ಲಾಂಟ್‌ನಿಂದ ಹಾಲನ್ನು ಕಳುಹಿಸುತ್ತಿದ್ದೇವೆ” ಎಂದು ಮೆಹ್ತಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...