Homeಕರ್ನಾಟಕಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

- Advertisement -
- Advertisement -

ಕರ್ನಾಟಕದಲ್ಲಿ ಅಮುಲ್‌ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆಗಳ ನಡುವೆ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಜಯನ್ ಮೆಹ್ತಾ ಅವರು ಪ್ರತಿಕ್ರಿಯಿಸಿದ್ದಾರೆ.

“ಕರ್ನಾಟಕ ರಾಜ್ಯದ ಡೇರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸಿರುವುದು ನಂದಿನಿಯೊಂದಿಗೆ ಸ್ಪರ್ಧಿಸಲು ಅಲ್ಲ, ನಂದಿನಿ ಜೊತೆಜೊತೆಯಲ್ಲಿ ನಡೆಯಲು ಅಮುಲ್ ಪ್ರವೇಶಿಸಿದೆ” ಎಂದಿದ್ದಾರೆ.

ಅಮುಲ್ ಉತ್ಪನ್ನಗಳನ್ನು ಬಹಿಷ್ಕರಿಸಿ ಕರ್ನಾಟಕದ ಹೈನುಗಾರರನ್ನು ಪ್ರೋತ್ಸಾಹಿಸಲು ‘ರಾಜ್ಯದ ಹೆಮ್ಮೆ’ಯ ನಂದಿನಿ ಬ್ರಾಂಡ್ ಬಳಸುವಂತೆ ಆಗ್ರಹಗಳು ಹೆಚ್ಚಾಗಿವೆ.

ಬಹಿಷ್ಕಾರ ಹೆಚ್ಚಾದಂತೆ ರಾಜಕೀಯ ಗದ್ದಲವೂ ತೀವ್ರಗೊಂಡಿದೆ. ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, “ರಾಜ್ಯ ಸರ್ಕಾರವು ನಮ್ಮ ಹೆಮ್ಮೆಯ ನಂದಿನಿ ಬ್ರಾಂಡ್ ಅನ್ನು ನಾಶಪಡಿಸುತ್ತಿದೆ” ಎಂದು ಆರೋಪಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ನಡೆಸಿರುವ ವಿಶೇಷ ಸಂವಾದದ ವೇಳೆ ಪ್ರತಿಕ್ರಿಯೆ ನೀಡಿರುವ ವ್ಯವಸ್ಥಾಪಕ ನಿರ್ದೇಶಕ ಜಯನ್ ಮೆಹ್ತಾ, “ಇದು ಅಮುಲ್ ವರ್ಸಸ್ ನಂದಿನಿ ಎಂಬ ವಿಚಾರ ಅಲ್ಲ. ಅಮುಲ್ ಮತ್ತು ನಂದಿನಿ ಒಟ್ಟಿಗೆ ಇರುವ ವಿಷಯವಾಗಿದೆ. ಇವೆರಡೂ ಒಂದೇ ರೀತಿಯ ಹಿತಾಸಕ್ತಿಗಳ ಮೇಲೆ ಕೆಲಸ ಮಾಡುವ ರೈತ ಒಡೆತನದ ಸಹಕಾರಿ ಸಂಸ್ಥೆಗಳಾಗಿವೆ. ನಾವಿಲ್ಲಿ ನಂದಿನಿಯೊಂದಿಗೆ ಸ್ಪರ್ಧಿಸಲು ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

‘ಅಮುಲ್ ಬಹಿಷ್ಕರಿಸಿ’, ‘ಗೋಬ್ಯಾಕ್ ಅಮುಲ್’ನಂತಹ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೆಹ್ತಾ, “ನಮ್ಮ ದಾರಿಯಲ್ಲಿ ಬರುವ ಪ್ರತಿಕ್ರಿಯೆಗಳನ್ನು ನಾವು ಟೀಕಿಸಲು ಸಾಧ್ಯವಿಲ್ಲ. ನಮ್ಮನ್ನು ವಿರೋಧಿಸುವವರು ಕೂಡ ನಮ್ಮ ಗ್ರಾಹಕರು. ಅವರು ತಮ್ಮ ಮನಸ್ಸಿನಲ್ಲಿ ಇದ್ದದ್ದನ್ನು ಹೇಳಲು ಸ್ವತಂತ್ರರು. ಆದರೆ ನಂದಿನಿ ಮತ್ತು ಅಮುಲ್ ನಡುವಿನ ಉತ್ತಮ ಸಂಬಂಧ ಬದಲಾಗುವುದಿಲ್ಲ” ಎಂದಿದ್ದಾರೆ.

“ನಾವು ನಂದಿನಿಯೊಂದಿಗೆ ಹಲವಾರು ರೀತಿಯಲ್ಲಿ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಕಳೆದ ಒಂದು ದಶಕದಿಂದ ಬೆಂಗಳೂರಿನ ಮದರ್ ಡೈರಿ ಪ್ಲಾಂಟ್‌ನಲ್ಲಿ ನಂದಿನಿ ಹಾಲನ್ನು ಬಳಸಿ ಅಮುಲ್ ಐಸ್ ಕ್ರೀಂ ಪ್ಯಾಕ್ ತಯಾರಿಸುತ್ತಿದ್ದೇವೆ. ನಮಗೆ ಚೀಸ್‌ನ ಕೊರತೆ ಇದ್ದಾಗಲೂ, ಅವರಲ್ಲಿ ಹೆಚ್ಚುವರಿಯಾಗಿದ್ದಾಗ ನಾವು ನಂದಿನಿಯಿಂದ ಚೆಡ್ಡಾರ್ ಚೀಸ್ ಖರೀದಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿಯೂ ಅಮುಲ್‌ನ ಹಾಲು ಮತ್ತು ಮೊಸರು ಪೂರೈಕೆ ಮಾಡಲಾಗುತ್ತಿದೆ ಎಂಬ ಆತಂಕಗಳನ್ನು ಮೆಹ್ತಾ ತಳ್ಳಿ ಹಾಕಿದ್ದಾರೆ. “ಅಮುಲ್ ಕಂಪನಿಯು ಬೆಂಗಳೂರಿನಲ್ಲಿ ಇ-ಕಾಮರ್ಸ್ ಮತ್ತು ತ್ವರಿತ ವಾಣಿಜ್ಯ ವೇದಿಕೆಗಳ ಮೂಲಕ ಮಾರಾಟ ಮಾಡಲು ಯೋಜಿಸುತ್ತಿದೆ” ಎಂದು ಹೇಳಿದ್ದಾರೆ.

ಅಮುಲ್‌ನ ಪೌಚ್ಡ್ ಹಾಲು ಮತ್ತು ಮೊಸರು ಈ ವಾರ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ಬರಲಿವೆ ಎಂದು ಮೆಹ್ತಾ ತಿಳಿಸಿದ್ದಾರೆ. “ಅಮುಲ್ ಕಂಪನಿಯು ಈಗಾಗಲೇ ಕರ್ನಾಟಕದ ಮಾರುಕಟ್ಟೆಯಲ್ಲಿ ಈ ಉತ್ಪನ್ನಗಳನ್ನು ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದೆ. ನಾವು ಈಗಾಗಲೇ ನಮ್ಮ ಪೌಚ್ಡ್ ಹಾಲು ಮತ್ತು ಮೊಸರನ್ನು ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಏಳು-ಎಂಟು ವರ್ಷಗಳಿಂದ ಮಾರುತ್ತಿದ್ದೇವೆ. ಹೊಸದಾಗಿ ಅಮುಲ್‌ ಮಾರುಕಟ್ಟೆ ಪ್ರವೇಶಿಸುತ್ತಿಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿರಿ: ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

“ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಮೊದಲ ಸ್ಥಾನದಲ್ಲಿಯೇ ಉಳಿದಿದೆ. ಅಮುಲ್ ಸ್ಥಳೀಯ ಬ್ರ್ಯಾಂಡ್‌ಗೆ ಹೋಲಿಸಿದರೆ ಮೂರನೇ ಮತ್ತು ಕೆಲವೊಮ್ಮೆ ನಾಲ್ಕನೇ ಸ್ಥಾನದಲ್ಲಿದೆ. ಅಮುಲ್ ಈ ಎರಡು ನಗರಗಳಲ್ಲಿ ದಿನಕ್ಕೆ 6000-8000 ಲೀಟರ್ ಹಾಲು ಮಾರಾಟ ಮಾಡುತ್ತಿದೆ, ನಂದಿನಿ ದಿನಕ್ಕೆ 1.25-1.3 ಲಕ್ಷ ಲೀಟರ್ ಮಾರಾಟ ಮಾಡುತ್ತಿದೆ. ಪ್ರತಿ ಲೀಟರ್‌ ನಂದಿನಿ ಹಾಲಿಗೆ 40 ರೂ., ಅಮುಲ್ ಹಾಲಿನ ದರ ಲೀಟರ್‌ಗೆ 54 ರೂ. ಆಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅಮುಲ್ ಪೌಚ್ ಮೊಸರು ಕೆಜಿಗೆ 66 ರೂ., ನಂದಿನಿ 1 ಕೆಜಿಗೆ 40 ರೂ. ಇದಲ್ಲದೆ, 500 ಎಂಎಲ್‌ಗೆ 32 ರೂ ಬೆಲೆಯಲ್ಲಿ ‘ಅಮುಲ್ ಗೋಲ್ಡ್ ಸ್ಪೆಷಲ್ ಮಿಲ್ಕಿ ಮಿಲ್ಕ್’ ಅನ್ನು ಮಾರಾಟ ಮಾಡಲು ಅಮುಲ್ ಯೋಜಿಸುತ್ತಿದೆ.

“ಇ-ಕಾಮರ್ಸ್‌ನಲ್ಲಿ ಅಮುಲ್ ಹಾಲು ಮತ್ತು ಮೊಸರಿಗೆ ಸಾಕಷ್ಟು ಹುಡುಕಾಟ ನಡೆಯುವುದನ್ನು ಬೆಂಗಳೂರು ಮತ್ತು ದಕ್ಷಿಣ ಭಾರತದ ಇತರ ನಗರಗಳಲ್ಲಿ ನಾವು ನೋಡಿದ್ದೇವೆ. ಬೆಂಗಳೂರಿನಲ್ಲಿ ನಮಗೆ ಪ್ಲಾಂಟ್ ಇಲ್ಲ, ಹಾಗಾಗಿ ಬೆಂಗಳೂರಿನಿಂದ 100 ಕಿ.ಮೀ ದೂರದಲ್ಲಿರುವ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ನಮ್ಮ ಹತ್ತಿರದ ಪ್ಲಾಂಟ್‌ನಿಂದ ಹಾಲನ್ನು ಕಳುಹಿಸುತ್ತಿದ್ದೇವೆ” ಎಂದು ಮೆಹ್ತಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...