Homeಕರ್ನಾಟಕಅಮುಲ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ಕರವೇ ಕಾರ್ಯಕರ್ತರ ಬಂಧನ

ಅಮುಲ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ಕರವೇ ಕಾರ್ಯಕರ್ತರ ಬಂಧನ

- Advertisement -
- Advertisement -

ರಾಜ್ಯದಲ್ಲಿ ಅಮುಲ್ ಹಾಲು ಮತ್ತು ಮೊಸರು ಮಾರಾಟವನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಬೆಂಗಳೂರು, ಚಾಮರಾಜನಗರ ಮತ್ತು ಸಿಂಧನೂರಿನಲ್ಲಿ ಪ್ರತಿಭಟನೆ ದಾಖಲಾಗಿದೆ.

ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ಇಂದು ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಹಾಲು, ಮೊಸರು, ತುಪ್ಪ, ಬೆಣ್ಣೆ, ಚೀಜ್ ಇತ್ಯಾದಿ ಅಮೂಲ್ ಉತ್ಪನ್ನಗಳಾದ ಬೀದಿಗೆಸೆದು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಯಾವುದೇ ಕಾರಣಕ್ಕೂ ಅಮೂಲ್ ಹಾಲು-ಮೊಸರು ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಅಮೂಲ್ ಭೂತದಹನ ಮಾಡಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಅಡ್ಡಿಪಡಿಸಿದರು. ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ವಿರೋಧದ ನಡುವೆಯೂ ಭೂತದಹನಕ್ಕೆ ಮುಂದಾದ ಕರವೇ ಕಾರ್ಯಕರ್ತರನ್ನು ಬಂಧಿಸಲಾಯಿತು.

ಕೆಎಂಎಫ್‌ನ ನಂದಿನಿಯೊಂದಿಗೆ ಅಮುಲ್‌ ವಿಲೀನಗೊಳಿಸಬಾರದು ಎಂದು ಒತ್ತಾಯಿಸಿ ಚಾಮರಾಜನಗರದಲ್ಲಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

“ನಂದಿನಿಯನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡಿದರೆ ಲಕ್ಷಾಂತರ ಜನರು ಬೀದಿಪಾಲಾಗುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ವಿಲೀನ ಮಾಡಬಾರದು. ಒಂದು ವೇಳೆ ಮಾಡಿದರೆ ರಾಜ್ಯದಾದ್ಯಂತ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಸಿಂಧನೂರಿನಲ್ಲಿ ಸಿಪಿಐ (ಎಂಎಲ್) ಲಿಬರೇಶನ್ ತಾಲೂಕು ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, “ಕೆಎಂಎಫ್‌ ಅನ್ನು ಅಮೂಲ್‌ನಲ್ಲಿ ವಿಲೀನಗೊಳಿಸಿ ತದನಂತರ ಕಾರ್ಪೊರೇಟ್ ಉದ್ಯಮಪತಿಗಳ ಕೈಗಿಡುವ ಇಂಗಿತವನ್ನು ಈಗಾಗಲೇ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೃಹ ಸಚಿವ ಅಮಿತ್ ಶಾ ಮುನ್ಸೂಚನೆ ನೀಡಿದ್ದು, ಇದನ್ನು ಸಾರಾಸಗಟಾಗಿ ಪ್ರತಿರೋಧಿಸುತ್ತೇವೆ. ಕೂಡಲೇ ಸರ್ಕಾರ ಕೆಎಂಎಫ್‌ನೊಂದಿಗೆ ಅಮೂಲ್ ವಿಲೀನದ ಪ್ರಸ್ತಾಪವನ್ನು ಕೈಬಿಡಬೇಕು” ಎಂದು ಒತ್ತಾಯಿಸಲಾಯಿತು.

ಸಿಂಧನೂರಿನಲ್ಲಿ ಪ್ರತಿಭಟನೆ

ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕಾರ್ಯಕ್ರಮ ನಿಮಿತ್ತ ಹಾಸನಕ್ಕೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್‌ ಹಾಸನದ ಹೇಮಾವತಿ ಪ್ರತಿಮೆ ಬಳಿ ಇದ್ದ ನಂದಿನಿ ಹಾಲಿನ ಕೇಂದ್ರದ ಬಳಿ ‘ಫ್ಲೇವರ್ಡ್ ಮಿಲ್ಕ್’ ಕುಡಿಯುತ್ತಾ ಸಾರ್ವಜನಿಕರೊಂದಿಗೆ ಚರ್ಚಿಸಿದರು. ನಂತರ, ನಂದಿನಿ ಕೇಂದ್ರದಲ್ಲಿದ್ದ ಹಾಲು, ತುಪ್ಪ, ಮಜ್ಜಿಗೆ, ಮೈಸೂರ್ ಪಾಕ್ ಸೇರಿದಂತೆ ಹಲವಾರು ಉತ್ಪನ್ನಗಳನ್ನು ಖರೀದಿಸಿ, ಸ್ಥಳದಲ್ಲಿದ್ದ ಸಾರ್ವಜನಿಕರಿಗೆ, ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಹಂಚಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...