Homeಮುಖಪುಟನ್ಯಾಯಾಂಗ ನಿಂದನೆ ಪ್ರಕರಣ; ಬೇಷರತ್‌ ಕ್ಷಮೆಯಾಚಿಸಿದ ಅಗ್ನಿಹೋತ್ರಿ

ನ್ಯಾಯಾಂಗ ನಿಂದನೆ ಪ್ರಕರಣ; ಬೇಷರತ್‌ ಕ್ಷಮೆಯಾಚಿಸಿದ ಅಗ್ನಿಹೋತ್ರಿ

- Advertisement -
- Advertisement -

ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಮುರಳೀಧರ್ ವಿರುದ್ಧ ಪಕ್ಷಪಾತದ ಆರೋಪ ಮಾಡಿ ಪೋಸ್ಟ್ ಅನ್ನು ಮರುಟ್ವೀಟ್ ಮಾಡಿದ್ದ ಚಲನಚಿತ್ರ ನಿರ್ದೇಶಕ ಅಗ್ನಿಹೋತ್ರಿ ಇಂದು ಬೇಷರತ್ ಕ್ಷಮೆಯಾಚಿಸಿದ್ದಾರೆ.

ತಮ್ಮ ಆರೋಪಗಳ ಕುರಿತು ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚಿಸಿದ ನಂತರ ದೆಹಲಿ ಹೈಕೋರ್ಟ್ ಸೋಮವಾರ ಸ್ವಯಂ ಪ್ರೇರಿತ ಕ್ರಿಮಿನಲ್ ನಿಂದನೆ ಪ್ರಕ್ರಿಯೆಯಿಂದ ಅಗ್ನಿಹೋತ್ರಿಗೆ ವಿನಾಯಿತಿ ನೀಡಿದೆ.

ಅಕ್ಟೋಬರ್ 2018 ರಲ್ಲಿ ನಡೆದ ಘಟನೆ. ಆಗ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ ಎಸ್ ಮುರಳೀಧರ್ ನೇತೃತ್ವದ ವಿಭಾಗೀಯ ಪೀಠವು, ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿದ್ದ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಿಂದ ಮುಕ್ತಗೊಳಿಸಿತು. ಜಸ್ಟೀಸ್‌ ಮುರಳೀಧರ್ ಅವರ ಮೇಲೆ ಪಕ್ಷಪಾತವನ್ನು ಆರೋಪಿಸಿ ಅಕ್ಟೋಬರ್ 5, 2018ರಂದು ಅಗ್ನಿಹೋತ್ರಿಯವರು ಟ್ವೀಟ್ ಅನ್ನು ಮತ್ತೆ ಪೋಸ್ಟ್ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ಮತ್ತು ನ್ಯಾಯಮೂರ್ತಿ ವಿಕಾಸ್ ಮಹಾಜನ್ ಅವರ ವಿಭಾಗೀಯ ಪೀಠವು ಈ ಪ್ರಕರಣವನ್ನು ಅವಲೋಕಿಸಿತು. ನ್ಯಾಯಾಲಯಕ್ಕೆ ಹಾಜರಾಗಿದ್ದ ಅಗ್ನಿಹೋತ್ರಿಯವರು ಮಾಡಿದ ಬೇಷರತ್ ಕ್ಷಮೆಯಾಚನೆಯನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಂಡಿತು.

“ಪ್ರತಿವಾದಿ ನಂ. 4 ಎಂದು ಆರೋಪಿಸಲ್ಪಟ್ಟಿರುವ ಆರೋಪಿ ವಿವೇಕ್ ಅಗ್ನಿಹೋತ್ರಿ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿದ್ದಾರೆ. ಟ್ವಿಟ್ಟರ್‌ನಲ್ಲಿ ಅವರು ಮಾಡಿದ ಆಕ್ಷೇಪಾರ್ಹ ಹೇಳಿಕೆಗಾಗಿ ಪಶ್ಚಾತ್ತಾಪ ವ್ಯಕ್ತಪಡಿಸಿ, ಬೇಷರತ್ತಾದ ಕ್ಷಮೆಯಾಚಿಸಿದ್ದಾರೆ” ಎಂದು ಪೀಠವು ತಿಳಿಸಿದೆ.

ಕ್ಷಮಾಪಣೆಯನ್ನು ಸಲ್ಲಿಸಿದ ಅವರ ಅಫಿಡವಿಟ್ ಅನ್ನು ಓದಿದ ಹೈಕೋರ್ಟ್, “ಈ ಮೇಲಿನ ಮತ್ತು ನಿರ್ದಿಷ್ಟ ಸನ್ನಿವೇಶದ ದೃಷ್ಟಿಯಿಂದ  ವಿವೇಕ್ ಅಗ್ನಿಹೋತ್ರಿ ಅವರು ನ್ಯಾಯಾಂಗ ಸಂಸ್ಥೆಯ ಬಗ್ಗೆ ಅತ್ಯಂತ ಗೌರವವನ್ನು ಹೊಂದಿದ್ದಾರೆ. ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಘನತೆಗೆ ಧಕ್ಕೆ ತರುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ವಿವೇಕ್ ಅಗ್ನಿಹೋತ್ರಿ ಡಿಸ್ಚಾರ್ಜ್ ಆಗಿದ್ದಾರೆ” ಎಂದಿದೆ.

ಮುಂದೆ ಜಾಗರೂಕರಾಗಿರಿ ಎಂದು ನ್ಯಾಯಾಲಯ ಅಗ್ನಿಹೋತ್ರಿಗೆ ಎಚ್ಚರಿಕೆ ನೀಡಿದೆ.

ಆರೆಸ್ಸೆಸ್ ವಿಚಾರವಾದಿ ಎಸ್ ಗುರುಮೂರ್ತಿ ಸೇರಿದಂತೆ ಕೆಲವು ವ್ಯಕ್ತಿಗಳ ವಿರುದ್ಧ ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ಸಲ್ಲಿಸಿದ ಮತ್ತೊಂದು ಕ್ರಿಮಿನಲ್ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುರುಮೂರ್ತಿ ಅವರು ನ್ಯಾಯಾಲಯಕ್ಕೆ ಹಾಜರಾಗಿ ಕ್ಷಮೆಯಾಚಿಸಿದ್ದರು. ಇದನ್ನು ಗಮನಿಸಿದ ನಂತರ “ವಿಷಯವನ್ನು ಮುಂದುವರಿಸಲು” ಸಾಧ್ಯವಿಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ.

“ಜಾಗರೂಕರಾಗಿರಬೇಕು ಎಂದು ಪ್ರತಿಯೊಬ್ಬ ನಾಗರಿಕರು ತಿಳಿದಿರಬೇಕು. ನಾವು ನ್ಯಾಯಯುತ ಮತ್ತು ನ್ಯಾಯಯುತ ಟೀಕೆಗಳನ್ನು ಆಹ್ವಾನಿಸುತ್ತೇವೆ. ಸತ್ಯವೆಂದರೆ ಪ್ರತಿಯೊಂದು ವಿಚಾರಣೆ ತನ್ನದೇ ಆದ ರೀತಿಯಲ್ಲಿ ನಡೆಯುತ್ತದೆ. ಅವರು ಈಗಾಗಲೇ ಅಫಿಡವಿಟ್ ಸಲ್ಲಿಸಿದ್ದಾರೆ, ಈ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ” ಎಂದು ಪೀಠ ಹೇಳಿದೆ.

ನ್ಯಾಯಮೂರ್ತಿ ಮೃದುಲ್ ಅವರು, “ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ನಿರ್ಧಾರವನ್ನು ನೀಡಿದ್ದಾರೆ. ನಮ್ಮ ಘನತೆಯನ್ನು ಭದ್ರಪಡಿಸಿಕೊಳ್ಳಲು ನ್ಯಾಯಾಲಯಗಳು ನಿಂದನೆಗೆ ಶಿಕ್ಷೆ ನೀಡುವುದಿಲ್ಲ ಎಂದು ಅದು ಹೇಳುತ್ತದೆ. ಖಂಡಿತವಾಗಿಯೂ ನಮ್ಮ ಘನತೆಯು ಬಲವಾದ ಅಡಿಪಾಯದ ಮೇಲೆ ಸ್ಥಾಪಿಸಲ್ಪಟ್ಟಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...