Homeಕರ್ನಾಟಕ'ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!': ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

‘ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!’: ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

- Advertisement -
- Advertisement -

”ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷವಾದ ಬಿಜೆಪಿಯ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು, ಇದು ಬಿಜೆಪಿಯ (ಭರ)ವರಸೆ” ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಬಂಡೀಪುರದಲ್ಲಿ ಪ್ರಧಾನಿ ಮೋದಿ ನಡೆಸಿದ ಸಫಾರಿ ಹಾಗೂ ನಂದಿನಿ ಹಾಲಿನ ವಿಚಾರವಾಗಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ”ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ!” ಎಂದು ಟೀಕಿಸಿದ್ದಾರೆ.

”ಪ್ರಧಾನಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎಂದು ಸಚಿವ ಶ್ರೀ ಅಶ್ವತ್ಥ್ ನಾರಾಯಣ್ ಅವರ ಕುಹಕದ ಮಾತುಗಳನ್ನಾಡುತ್ತಾರೆ” ಎಂದು ಮೋದಿ ಅವರ ಕ್ಷಣಕ್ಕೊಮ್ಮೆ ಬದಲಾಯಿಸುವ ಅವರ ಬಟ್ಟೆಯ ಬಗ್ಗೆ ಹೆಚ್‌ಡಿಕೆ ಟೀಕಿಸಿದ್ದಾರೆ.

”ಇನ್ನೊಬ್ಬರು, ಸಿಟಿ ರವಿ ಎನ್ನುವ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ.ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ. ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತು ನಾವು ಮಾಡುತ್ತಿಲ್ಲ” ಎಂದು ಸಿಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.

”ಅಸಲಿ ವಿಷಯ ಅದಲ್ಲ! ಈಗಲ್ಲ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು!! ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು” ಎಂದು ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

”ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು” ಎಂದು ಕಿಡಿಕಾರಿದ್ದಾರೆ.

”ಅಂದು ಅಮುಲ್‌ ಘಟಕದ ಬಗ್ಗೆ ಜೆಡಿಎಸ್ ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್ʼನ ಅಂದಿನ ಅಧ್ಯಕ್ಷರಾಗಿದ್ದ ಎಚ್‌ಡಿ ರೇವಣ್ಣ ಅವರು, “ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ” ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು” ಎಂಬುದಾಗಿ ತಿಳಿಸಿದ್ದಾರೆ.

”ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು. ಈಗ ಪಾತ್ರಗಳು ಬದಲಾಗಿವೆ. ಸಿಟಿ ರವಿ, ಡಾ.ಸುಧಾಕರ್, ಡಾ. ಅಶ್ವತ್ಥ್ ನಾರಾಯಣ ಇತರರು ರಂಗದ ಮೇಲಿದ್ದಾರಷ್ಟೇ” ಎಂದು ಹೇಳಿದ್ದಾರೆ.

”ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ” ಎಂದು ಹೇಳಿದ್ದಾರೆ.

”ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ಎನ್ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ… ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಕೇಂದ್ರ ಬಿಜೆಪಿ ಹೊಂಚು ಹಾಕಿರುವುದು ಸ್ಪಷ್ಟ” ಎಂದು ಟೀಕಿಸಿದ್ದಾರೆ.

”ಕೈಗಾರಿಕೆ, ಐಟಿಬಿಟಿ, ವಿಜ್ಞಾನ, ಆವಿಷ್ಕಾರ, ಉದ್ಯೋಗ ಸೃಷ್ಟಿ ಸೇರಿ ಜಿಎಸ್ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ  ಬಿಜೆಪಿಯ ಕುಟಿಲನೀತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಬಿಜೆಪಿಯ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ.
ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!!” ಎಂದು ಎಚ್ಚರಿಸಿದ್ದಾರೆ.

ಕುಮಾರಸ್ವಾಮಿ ಅವರು ಮುಂದುವರೆದು, ಸಿಆರ್‌ಪಿಎಫ್‌ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ಮಾತ್ರ ಅವಕಾಶ ನೀಡಿರುವ ಬಗ್ಗೆಯೂ ಕಿಡಿಕಾರಿರುವ ಎಚ್‌ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

”9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ” ಎಂದು ಕಿಡಿಕಾರಿದ್ದಾರೆ.

”ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ” ಎಂದಿದ್ದಾರೆ.

”ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಲೇಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು” ಎಂದು ಆಕ್ರೋಶ ಹೊರಹಾಕಿದ್ದಾರೆ.

”ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ” ಎಂದು ಹೇಳಿದ್ದಾರೆ.

”ಮುಲಾಜಿಲ್ಲದೆ ಸಿಆರ್‌ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು” ಎಂದು ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...