Homeಕರ್ನಾಟಕಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

ಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

- Advertisement -
- Advertisement -

ಹಾಸನ ಟಿಕೆಟ್ ವಿಚಾರದಲ್ಲಿ ಜೆಡಿಎಸ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ಕಡೆ ಎಚ್‌ಡಿ ರೇವಣ್ಣ ಅವರು ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಟಿಕೆಟ್ ಬೇಡ ಎಂದು ಹೇಳುತ್ತಿದ್ದರೆ, ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಮಾನ್ಯ ಕಾರ್ಯಕರ್ತನಿಗೆ ಜೆಡಿಎಸ್ ಟಿಕೆಟ್ ನೀಡಲಾಗುತ್ತದೆ ಎಂಬ ಹೇಳಿಕೆಯನ್ನು ಪುನರುಚ್ಚಾರಿಸಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ”ಮನೆ ಹಾಳು ಮಾಡುವ ಶಕುನಿಗಳು ಹಾಸನದಲ್ಲಿ ಇದ್ದಾರೆ‌‌. ಕುರುಕ್ಷೇತ್ರದ ಯುದ್ದ ಶಕುನಿಯಿಂದಲೇ ಆಗಿದೆ, ಇಲ್ಲಿಯೂ ಶಕುನಿಗಳು ತಲೆ ಕೆಡಿಸುತ್ತಿದ್ದಾರೆ. ಶಕುನಿಗಳು ನನ್ನ ಕುಟುಂಬದಲ್ಲಿ ಇಲ್ಲ, ಹಾಸನದಲ್ಲಿ ಇದ್ದಾರೆ” ಎಂದು ಗರಂ ಆದರು.

ಹಾಸನ ಟಿಕೆಟ್ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ”ಶಕುನಿಗಳು ಬೆಳಗಿನಿಂದ ಸಂಜೆಯವರೆಗೆ ಮೈಂಡ್ ವಾಶ್ ಮಾಡುತ್ತಿದ್ದಾರೆ. ಬೇರೆ ಪಕ್ಷದವರು, ಬುದ್ಧಿ ಜೀವಿಗಳು ಮತ್ತು ಹಿತಶತ್ರುಗಳು ತಲೆ ಕೆಡೆಸಿದ್ದಾರೆ. ಹಾಸನದಲ್ಲಿ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂದು ಹೇಳಿದ್ದೇನೆ, ಇದರಲ್ಲಿ ರಾಜಿ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿದಿದ್ದಾರೆ.

”ದೇವೇಗೌಡರಿಗೂ ಸಹ ರೇವಣ್ಣ ಅವರನ್ನು ಮನವೊಲಿಸುವ ಶಕ್ತಿ‌ ಇಲ್ಲ. ಕಳೆದ 15 ವರ್ಷದಿಂದ ಹಲವು‌ ವಿಷಯ ನುಂಗಿಕೊಂಡಿದ್ದೇನೆ, ಕೆಲವು ವಿಷಯಗಳನ್ನು ಹೇಳಿಕೊಳ್ಳಲು ಆಗೋದಿಲ್ಲ. ನನಗೆ ಆಗುತ್ತಿರುವ ಅನಾಹುತ ಗೊತ್ತಿದ್ದರೂ ಸಹ, ತಪ್ಪುಗಳು ಮಾಡದಿದ್ದರೂ ತಲೆ ಮೇಲೆ ಹೊತ್ತು ಕೊಳ್ಳಬೇಕಾಯಿತು. ಈಗಲೂ ಅದೇ ರೀತಿ ವಾತಾವರಣ ಸೃಷ್ಟಯಾಗಿದೆ” ಎಂದು ಕುಮಾರಸ್ವಾಮಿ ಭಾವುಕರಾದರು.

ಈ ವೇಳೆ, ‘ನಾನು ಜೆಡಿಎಸ್​ ಅಧ್ಯಕ್ಷನಾಗಿದ್ದ ವೇಳೆ 59 ಸೀಟ್ ಬಂದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಕೊಟ್ಟ ಎಚ್​ಡಿಕೆ, ”59 ಸೀಟ್ ಪಡೆಯಲು ಯಾರ ಕೊಡುಗೆ ಎಷ್ಟು ಎಂಬುದು ಗೊತ್ತು. ಈ ಬಾರಿ ಚುನಾವಣೆಯಲ್ಲಿ 59 ಸೀಟ್ ಕ್ರಾಸ್ ಮಾಡುತ್ತೇನೆ. ಒಬ್ಬನೇ ಹೋರಾಟ ಮಾಡಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕಿಂತ ಹೆಚ್ಚು ಗೆಲ್ಲುತ್ತೇನೆ” ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಪತ್ನಿ ಭವಾನಿಗೆ ಹಾಸನ ಟಿಕೆಟ್ ನೀಡಬೇಕು- ರೇವಣ್ಣ ಪಟ್ಟು

ಇತ್ತೀಚೆಗೆ ಎಚ್.ಡಿ. ರೇವಣ್ಣ ಅವರು ತಮ್ಮ ಆಪ್ತರೊಡನೆ ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದರು.”

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದರು.

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದರು ಎಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...