Homeಕರ್ನಾಟಕಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

ಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

- Advertisement -
- Advertisement -

ಹಾಸನ ಟಿಕೆಟ್ ವಿಚಾರದಲ್ಲಿ ಜೆಡಿಎಸ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ಕಡೆ ಎಚ್‌ಡಿ ರೇವಣ್ಣ ಅವರು ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಟಿಕೆಟ್ ಬೇಡ ಎಂದು ಹೇಳುತ್ತಿದ್ದರೆ, ಇತ್ತ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಮಾನ್ಯ ಕಾರ್ಯಕರ್ತನಿಗೆ ಜೆಡಿಎಸ್ ಟಿಕೆಟ್ ನೀಡಲಾಗುತ್ತದೆ ಎಂಬ ಹೇಳಿಕೆಯನ್ನು ಪುನರುಚ್ಚಾರಿಸಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ”ಮನೆ ಹಾಳು ಮಾಡುವ ಶಕುನಿಗಳು ಹಾಸನದಲ್ಲಿ ಇದ್ದಾರೆ‌‌. ಕುರುಕ್ಷೇತ್ರದ ಯುದ್ದ ಶಕುನಿಯಿಂದಲೇ ಆಗಿದೆ, ಇಲ್ಲಿಯೂ ಶಕುನಿಗಳು ತಲೆ ಕೆಡಿಸುತ್ತಿದ್ದಾರೆ. ಶಕುನಿಗಳು ನನ್ನ ಕುಟುಂಬದಲ್ಲಿ ಇಲ್ಲ, ಹಾಸನದಲ್ಲಿ ಇದ್ದಾರೆ” ಎಂದು ಗರಂ ಆದರು.

ಹಾಸನ ಟಿಕೆಟ್ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ”ಶಕುನಿಗಳು ಬೆಳಗಿನಿಂದ ಸಂಜೆಯವರೆಗೆ ಮೈಂಡ್ ವಾಶ್ ಮಾಡುತ್ತಿದ್ದಾರೆ. ಬೇರೆ ಪಕ್ಷದವರು, ಬುದ್ಧಿ ಜೀವಿಗಳು ಮತ್ತು ಹಿತಶತ್ರುಗಳು ತಲೆ ಕೆಡೆಸಿದ್ದಾರೆ. ಹಾಸನದಲ್ಲಿ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂದು ಹೇಳಿದ್ದೇನೆ, ಇದರಲ್ಲಿ ರಾಜಿ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿದಿದ್ದಾರೆ.

”ದೇವೇಗೌಡರಿಗೂ ಸಹ ರೇವಣ್ಣ ಅವರನ್ನು ಮನವೊಲಿಸುವ ಶಕ್ತಿ‌ ಇಲ್ಲ. ಕಳೆದ 15 ವರ್ಷದಿಂದ ಹಲವು‌ ವಿಷಯ ನುಂಗಿಕೊಂಡಿದ್ದೇನೆ, ಕೆಲವು ವಿಷಯಗಳನ್ನು ಹೇಳಿಕೊಳ್ಳಲು ಆಗೋದಿಲ್ಲ. ನನಗೆ ಆಗುತ್ತಿರುವ ಅನಾಹುತ ಗೊತ್ತಿದ್ದರೂ ಸಹ, ತಪ್ಪುಗಳು ಮಾಡದಿದ್ದರೂ ತಲೆ ಮೇಲೆ ಹೊತ್ತು ಕೊಳ್ಳಬೇಕಾಯಿತು. ಈಗಲೂ ಅದೇ ರೀತಿ ವಾತಾವರಣ ಸೃಷ್ಟಯಾಗಿದೆ” ಎಂದು ಕುಮಾರಸ್ವಾಮಿ ಭಾವುಕರಾದರು.

ಈ ವೇಳೆ, ‘ನಾನು ಜೆಡಿಎಸ್​ ಅಧ್ಯಕ್ಷನಾಗಿದ್ದ ವೇಳೆ 59 ಸೀಟ್ ಬಂದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಕೊಟ್ಟ ಎಚ್​ಡಿಕೆ, ”59 ಸೀಟ್ ಪಡೆಯಲು ಯಾರ ಕೊಡುಗೆ ಎಷ್ಟು ಎಂಬುದು ಗೊತ್ತು. ಈ ಬಾರಿ ಚುನಾವಣೆಯಲ್ಲಿ 59 ಸೀಟ್ ಕ್ರಾಸ್ ಮಾಡುತ್ತೇನೆ. ಒಬ್ಬನೇ ಹೋರಾಟ ಮಾಡಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕಿಂತ ಹೆಚ್ಚು ಗೆಲ್ಲುತ್ತೇನೆ” ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಕೆಎಂಎಫ್‌ ಮುಳುಗಿಸುವ ಹುನ್ನಾರ: ಅಮುಲ್ ಆಗಮನಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ

ಪತ್ನಿ ಭವಾನಿಗೆ ಹಾಸನ ಟಿಕೆಟ್ ನೀಡಬೇಕು- ರೇವಣ್ಣ ಪಟ್ಟು

ಇತ್ತೀಚೆಗೆ ಎಚ್.ಡಿ. ರೇವಣ್ಣ ಅವರು ತಮ್ಮ ಆಪ್ತರೊಡನೆ ಸಮಾಲೋಚನೆ ಮಾಡುವ ವೇಳೆ, ಹಾಸನ ಟಿಕೆಟ್ ಗೊಂದಲ ಕಗ್ಗಂಟಾಗಿರುವ ಬಗ್ಗೆ ತೀವ್ರ ಬೇಸರ ಪಟ್ಟುಕೊಂಡಿದ್ದಾರೆ. ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ಕೊಡಬೇಕು ಎಂದು ನಾನು ಪಟ್ಟು ಹಿಡಿದು ಕೇಳುವಂಥ ಪರಿಸ್ಥಿತಿ ಬಂದೊಂದಗಿದೆ. ಒಂದು ವೇಳೆ, ಹಾಸನದಲ್ಲಿ ಭವಾನಿಯವರಿಗೆ ಟಿಕೆಟ್ ನೀಡದೇ ಹೋದರೆ, ನನಗೂ ಟಿಕೆಟ್ ಬೇಡ. ನಾನೂ ಸಹ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

”ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು” ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.

”ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಹೊಳೆನರಸೀಪುರದಲ್ಲಿ ಗೆದ್ದು ಏನು ಮಾಡುವುದು? ನನಗೂ ಅಲ್ಲಿನ ಟಿಕೆಟ್ ಬೇಡ. ಈ ಬಗ್ಗೆ ದೇವೇಗೌಡರಿಗೆ ಸಂದೇಶ ರವಾನಿಸುವೆ”  ಎಂದು ಮುಖಂಡರಿಗೆ ರೇವಣ್ಣ ತಿಳಿಸಿದ್ದಾರೆ.

”ಹಿರಿಯ ಸಹೋದರ ಬಾಲಕೃಷ್ಣೇ ಗೌಡ ಸೇರಿದಂತೆ ದೇವೇಗೌಡರ ಆಪ್ತರ ಮೂಲಕ ಈ ಸಂದೇಶವನ್ನು ದೇವೇಗೌಡರಿಗೆ ರವಾನಿಸಿದ್ದರು.”

ಈ ಕುರಿತು ದೇವೇಗೌಡರೂ ರೇವಣ್ಣ ಜೊತೆಗೆ ಚರ್ಚಿಸಿದ್ದು, ಗೊಂದಲಕ್ಕೆ ಅವಕಾಶ ವಿಲ್ಲದಂತೆ ಚರ್ಚಿಸಿ ತೀರ್ಮಾನಿಸಲಾಗುವುದು. ಆತುರದ ನಿರ್ಧಾರ ಕೈಗೊಳ್ಳ ಬಾರದೆಂದು ತಾಕೀತು ಮಾಡಿದ್ದರು.

ಭವಾನಿ ಅವರು ಪಟ್ಟು ಸಡಿಲಿಸುತ್ತಿಲ್ಲ. ಪುತ್ರರು ಕೂಡ ತಾಯಿಯನ್ನು ಹಾಸನದಿಂದ ಕಣಕ್ಕಿಳಿಸಲೇಬೇಕೆಂದು ಹಟ ತೊಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೊನೆಯ ಅಸ್ತ್ರವಾಗಿ ”ನನಗೆ ಹೊಳೆನರಸೀಪುರ ಟಿಕೆಟ್‌ ಬೇಡ” ಎಂಬ ದಾಳವನ್ನು ರೇವಣ್ಣ ಉರುಳಿಸಿದ್ದರು ಎಂದು ಹೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...