Homeಕರ್ನಾಟಕತುಮಕೂರು: ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ತುಮಕೂರು: ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ದೇಶಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳು ಕಳೆದರು ದಲಿತರಿಗೆ ಇನ್ನೂ ಕೆಲವು ವಿಚಾರಗಳಲ್ಲಿ ಸ್ವಾತಂತ್ರ ಸಿಕ್ಕಿಲ್ಲ. ಇಂದಿಗೂ ಅವರು ಕೆಲವು ಕಡೆ ದೇವಸ್ಥಾನ ಪ್ರವೇಶ ಮಾಡುವಂತಿಲ್ಲ, ಇಂತಹ ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇದನ್ನು ಹೋಗಲಾಡಿಸಲು ಕಾನೂನು ಇದ್ದರೂ ಕೂಡ, ಸವರ್ಣೀಯರು ಈ ಅಮಾನವೀಯ ಆಚರಣೆಯನ್ನು ಮುಂದುವರೆಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮಾಡುವ ದಲಿತ ಅರ್ಚಕನ ಮೇಲೆ ಜಾತ್ರೆಯಂದು ಸವರ್ಣೀಯರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಜಾತ್ರೆಯ ಸಮಯದಲ್ಲಿ ದಲಿತ ಅರ್ಚಕನ ಮೇಲೆ ಸವರ್ಣೀಯರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬಿದರೆಗುಡಿ ಗ್ರಾಮದಲ್ಲಿರುವ ಮುಜಾರಾಯಿ ಇಲಾಖೆಗೆ ಸೇರಿದ ಬಿದರೆಗುಡಿಯ ಬಿದಿರಾಂಬಿಕ ಹಾಗೂ ಚಿಕ್ಕಮ್ಮ ದೇವಿಯ ದೇವಸ್ಥಾನದ ಅರ್ಚಕ ಲಿಂಗರಾಜು ಮೇಲೆ ಸವರ್ಣೀಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ಹೊನ್ನವಳ್ಳಿ, ತಿಪಟೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿದಿರಾಂಬಿಕ ಹಾಗೂ ಚಿಕ್ಕಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ದೇವಿಯ ಬ್ರಹ್ಮ ರಥೋತ್ಸವ ನಡೆದಿದೆ. ಈ ರಥೋತ್ಸವದ ವೇಳೆ ಅರ್ಚಕ ಲಿಂಗರಾಜು ಅವರನ್ನು ದೇವಸ್ಥಾನಕ್ಕೆ ಕರೆಸಿ ಅನ್ಯ ಜನಾಂಗದ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹಲ್ಲೆಗೆ ಒಳಗಾದ ಅರ್ಚಕನಿಗೆ ಚಿಕಿತ್ಸೆ ಪಡೆಯಲು ಬಿಟ್ಟಿಲ್ಲ ಅಷ್ಟು ಮಾತ್ರವಲ್ಲದೆ, ಅಲ್ಲಿ ಪೂಜೆಗೆ ಬಂದಿದ್ದ ಇತರೆ ದಲಿತರ ಮೇಲೂ ಹಲ್ಲೆಗೆ ಯತ್ನ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ-36; ದಲಿತ್ ಫೈಲ್ಸ್ : ದಲಿತರು ಹಿಂದೂಗಳಲ್ಲ, ದೇಗುಲಕ್ಕೆ ಪ್ರವೇಶವಿಲ್ಲ

ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಕಳೆದ ತಿಂಗಳು ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ ದೂರು ನೀಡಿದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಸವರ್ಣೀಯರು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ನಡೆದಿತ್ತು.

ಇದಕ್ಕೂ ಮುನ್ನ ಜನವರಿ ತಿಂಗಳಲ್ಲಿ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ಸವರ್ಣಿಯರು ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ್ದ ಘಟನೆ ನಡೆದಿತ್ತು. ದೇವಸ್ಥಾನ, ಕಿರಾಣಿ ಶಾಪ್, ಹೊಟೇಲ್​ಗಳಿಗೆ ದಲಿತರು ಹೋದರೆ ಅಂಗಡಿ ಮಾಲೀಕರು ಯಾವ ವಸ್ತುಗಳನ್ನೂ ನೀಡುತ್ತಿಲ್ಲ. ಯಾಕೆ ಕೊಡಲ್ಲ ಎಂದು ಪ್ರಶ್ನೆ ಮಾಡಿದ್ದಕ್ಕೆ ವಾಗ್ವಾದ ನಡೆದಿದೆ. ನಿಮಗೆ ಏನಾದ್ರೂ ಕೊಟ್ಟರೆ ದಂಡ ಹಾಕುತ್ತಾರೆ ಎಂದು ಅಂಗಡಿಕಾರರು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಪರಿಸ್ಥಿತಿ ಹೀಗಿದ್ದರೂ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಗ್ರಾಮಕ್ಕೆ ಭೇಟಿ ನೀಡಿರಲಿಲ್ಲ. ಇನ್ನು ಗ್ರಾಮದಲ್ಲಿ ನಡೆಯುವ ಕೆಟ್ಟ ಆಚರಣೆಯ ಬಗ್ಗೆ ಯುವಕರು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...