Homeಕರ್ನಾಟಕಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ''100% ಬದ್ಧತೆ''ಯ ಸರ್ಕಾರ ಬೇಕು: ಶಶಿ ತರೂರ್

ಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ”100% ಬದ್ಧತೆ”ಯ ಸರ್ಕಾರ ಬೇಕು: ಶಶಿ ತರೂರ್

- Advertisement -
- Advertisement -

ಕರ್ನಾಟಕದ ಜನರು 40% ಕಮಿಷನ್‌ನಿಂದ ಬೇಸತ್ತಿದ್ದಾರೆ ಮತ್ತು ”ಶೇ 100 ರಷ್ಟು ಬದ್ಧತೆ”ಯನ್ನು ನೀಡುವ ಕಾಂಗ್ರೆಸ್ ಪಕ್ಷವನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರ ಮಟ್ಟದ ಆಡಳಿತದಲ್ಲಿನ ”ಗಂಭೀರ ಸಮಸ್ಯಗಳನ್ನು” ನಿಭಾಯಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ತಿರುವನಂತಪುರಂ ಸಂಸದ ತರೂರ್ಅವರು, ”ಈ ರಾಜ್ಯದ ಜನರು ಶೇಕಡಾ 40 ರಷ್ಟು ಕಮಿಷನ್‌ನಿಂದ ಬೇಸತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಬೇಕಾಗಿರುವುದು 100 ಪ್ರತಿಶತ ಬದ್ಧತೆ ಮತ್ತು ಅದನ್ನೇ ನಾವು ನೀಡುತ್ತೇವೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗ ಮತ್ತೆ ರಾಜ್ಯ ಬಿಜೆಪಿ ಸರ್ಕಾರದ 40% ಕಮೀಷನ್ ಆರೋಪವನ್ನು ಪುನರುಚ್ಚಿಸಿರುವ ತರೂರ್, ”ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಗುತ್ತಿಗೆದಾರರು, ಅನುದಾನರಹಿತ ಖಾಸಗಿ ಶಾಲೆಗಳು ಮತ್ತು ಕೆಲವು ಧಾರ್ಮಿಕ ಸಂಸ್ಥೆಗಳಿಂದ ಪಡೆದ ಅನುದಾನದಲ್ಲಿ ಶೇಕಡಾ 40 ರಷ್ಟು ಕಮಿಷನ್ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ದುರಾಡಳಿ ನಡೆಯುತ್ತಿದ್ದು, ಮೂಲಸೌಕರ್ಯಗಳ ವಿಚಾರದಲ್ಲಿ ಬೆಂಗಳೂರು ನಗರ ಮುಜುಗರಕ್ಕಿಡಾಗುತ್ತಿದೆ ಎಂದು ತರೂರ್ ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

”ನಮ್ಮ ಸಂದೇಶವು ತುಂಬಾ ಸರಳವಾಗಿದೆ. ದುರದೃಷ್ಟವಶಾತ್, ನಾಲ್ಕು ವರ್ಷಗಳಿಂದ ನಾವು ಅತ್ಯಂತ ಕೆಟ್ಟ ಆಡಳಿತವನ್ನು ನೋಡಿದ್ದೇವೆ. ಈ ಕೆಟ್ಟ ಆಡಳಿತದಿಂದ ಬೇಸತ್ತಿರುವ ಜನರು ಅನಿವಾರ್ಯವಾಗಿ ಬೇರೆ ಸರ್ಕಾರ ಬೇಕು ಎಂದು ಬಯಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

ಈ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗಿಲ್ಲ ಹಾಗಾಗಿ ಆ ಅಗತ್ಯಗಳನ್ನು ಪೂರೈಸಲು ಕಾಂಗ್ರೆಸ್ ಪಕ್ಷವು ಈಗಾಗಲೇ ಹಲವಾರು ”ಗ್ಯಾರೆಂಟಿ ಭರವಸೆಗಳನ್ನು” ಹೊರತಂದಿದೆ ಎಂದು ಹೇಳಿದರು.

ರಾಜ್ಯದಲ್ಲಿನ ನಿರುದ್ಯೋಗಿ ಪದವೀಧರರು ಮತ್ತು ನಿರುದ್ಯೋಗಿ ಡಿಪ್ಲೊಮಾ-ಹೋಲ್ಡರ್‌ಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ಬೆಂಬಲ ನೀಡಲು ಕಾಂಗ್ರೆಸ್ ಯುವನಿಧಿ ಎನ್ನುವ ಯೋಜನೆಯನ್ನು ತರುತ್ತಿದೆ ಎಂದು ಅವರು ಹೇಳಿದರು. ಇದರಿಂದಾಗಿ ಅವರು ಹುಡುಕುತ್ತಿರುವ ಸಂದರ್ಭದಲ್ಲಿ ಸ್ವಾಭಿಮಾನದಿಂದ ಬದುಕಬಹುದು. ಇನ್ನು ಮನೆಯ ಹೆಣ್ಣುಮಕ್ಕಳನ್ನು ಗೌರವಿಸಲು ಗೃಹಲಕ್ಷ್ಮೀ ಯೋಜನೆ ತರಲಾಗುತ್ತಿದೆ. ಇದರಿಂದ ವೇತನವಿಲ್ಲದೇ ಮನೆಯಲ್ಲಿ ದುಡಿಯುತ್ತಿರುವ ಗೃಹಿಣಿಯರು ಸ್ವಲ್ಪ ಪರಿಹಾರವನ್ನು ಪಡೆಯಬಹುದು ಎಂದು ಅವರು ಹೇಳಿದರು.

ಕೆಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ, ”ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಶಾಸಕರು ಮತ್ತು ಎಂಎಲ್‌ಸಿಗಳು ಸಹ ಇತರ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರಿದ್ದಾರೆ” ಎಂದು ತಿಳಿಸಿದರು.

”ಕರ್ನಾಟಕದ ಪರಿಸ್ಥಿತಿಯನ್ನು ಗಮನಿಸಿದರೆ, ಕಳೆದ ಕೆಲವು ತಿಂಗಳುಗಳಲ್ಲಿ ಐವರು ಶಾಸಕರು, ಇಬ್ಬರು ಎಂಎಲ್‌ಸಿಗಳು, 11 ಮಾಜಿ ಶಾಸಕರು, ನಾಲ್ವರು ಮಾಜಿ ಎಂಎಲ್‌ಸಿಗಳು ಮತ್ತು ಒಬ್ಬ ಮಾಜಿ ಸಂಸದರು ಕಾಂಗ್ರೆಸ್‌ಗೆ ಸೇರಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಇತರ ಪಕ್ಷದವರಿಗು ತಿಳಿದಿದೆ ಎಂದು ಅವರು ಹೇಳಿದರು.

ಆದರೆ, ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಸದಸ್ಯರ ಬಗ್ಗೆ ನನಗೆ ನಿರಾಸೆಯಾಗಿದೆ. ಅವರು ಕಾಂಗ್ರೆಸ್ ಬಿಡುವಾಗ ಅದೇ ಮೌಲ್ಯಗಳನ್ನು ಹೊಂದಿರುವ ಬೇರೆ ಯಾವ ಪಕ್ಷಕ್ಕಾದರೂ ಸೇರಬಹುದಿತ್ತು. ಆದರೆ ಕೋಮುವಾದಿ ಬಿಜೆಪಿ ಪಕ್ಷ ಸೇರಿದ್ದಾರೆ. ವಿರುದ್ಧವಾದ ಮೌಲ್ಯಗಳು ಮತ್ತು ತತ್ವಗಳನ್ನು ಹೊಂದಿರುವ ಪಕ್ಷಕ್ಕೆ ಅವರು ಹೇಗೆ ಹೋಗುತ್ತಾರೆ ಎಂದು ಅವರು ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...