Homeಮುಖಪುಟಜಗದೀಶ್ ಶೆಟ್ಟರ್ ಸಹಿತ ಹಲವು ಹಾಲಿ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ಹಲವರ ಕ್ಷೇತ್ರ ಬದಲಾವಣೆ

ಜಗದೀಶ್ ಶೆಟ್ಟರ್ ಸಹಿತ ಹಲವು ಹಾಲಿ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ಹಲವರ ಕ್ಷೇತ್ರ ಬದಲಾವಣೆ

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಸನ್ನಿಹಿತವಾಗಿದ್ದರೂ ಆಡಳಿತರೂಢ ಬಿಜೆಪಿ ಪಕ್ಷವು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಹಿಂದೇಟು ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಕೆ.ಎಸ್ ಈಶ್ವರಪ್ಪನರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಹಿ ಕನಿಷ್ಟ ಇಪ್ಪತ್ತು ಹಾಲಿ ಶಾಸಕರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳು ಪ್ರಕಟವಾಗುತ್ತಿವೆ. ಇನ್ನು ಯಡಿಯೂರಪ್ಪನವರನ್ನು ಬಿಟ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿರುವುದಕ್ಕೆ ಬೇಸರಗೊಂಡು ಅವರು ದೆಹಲಿಯಿಂದ ವಾಪಸ್ಸಾಗಿದ್ದಾರೆ.

ಯಾರಿಗಿಲ್ಲ ಟಿಕೆಟ್?

ಜಗದೀಶ್ ಶೆಟ್ಟರ್: ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ಜಗದೀಶ್ ಶೆಟ್ಟರ್‌ರವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನಿಂದ ಬೆಳಿಗ್ಗೆ ಫೋನ್ ಕರೆ ಬಂದಿತ್ತು. ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಹೇಳುತ್ತಿದ್ದಾರೆ. ನಾನು ಮೂವತ್ತು ವರ್ಷ ಕಟ್ಟಿದ ಪಕ್ಷದವರು ನನಗೆ ಹೀಗೆ ಹೇಳುವುದು ಸರಿಯೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ನೂರಾರು ಜನರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದೇನೆ. ಆರು ಸಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇವೆ. ಯಾವುದೇ ಕಪ್ಪು ಚುಕ್ಕೆ ಹೊಂದಿಲ್ಲ. ಪಕ್ಷನಿಷ್ಟನಾಗಿದ್ದೇನೆ. ಹಾಗಿದ್ದರೂ ಟಿಕೆಟ್ ನಿರಾಕರಿಸುತ್ತಿರುವುದಕ್ಕೆ ಎಂದು ಪ್ರಶ್ನಿಸಿದ್ದೇನೆ ಎಂದಿದ್ದಾರೆ.

ಈ ಕುರಿತು ಈಗಾಗಲೇ ಬಿ.ಎಸ್ ಯಡಿಯೂರಪ್ಪನವರ ಜೊತೆ ಮಾತನಾಡಿದ್ದೇನೆ. ಪಕ್ಷದ ವರಿಷ್ಠರ ನಡೆ ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಈಶ್ವರಪ್ಪನವರ ಪುತ್ರನಿಗಿಲ್ಲ ಟಿಕೆಟ್: ಇನ್ನು ನಿವೃತ್ತಿ ಘೋಷಿಸಿರುವ ಕೆ.ಎಸ್ ಈಶ್ವರಪ್ಪನವರ ಪುತ್ರ ಕೆ.ಇ.ಕಾಂತೇಶ್‌ರವರಿಗೂ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಹೈಕಮಾಂಡ್ ಸುಳಿವು ನೀಡಿದೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರದಿಂದಲೇ ಟಿಕೆಟ್ ಕೇಳುತ್ತಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಸೇರುವ ಆಲೋಚನೆಯಲ್ಲಿದ್ದಾರೆ. ಹಾಗಾಗಿ ಈಶ್ವರಪ್ಪನ ಪುತ್ರನಿಗೆ ಟಿಕೆಟ್ ನೀಡಲು ಬಿಜೆಪಿ ಹಿಂದೇಟು ಹಾಕುತ್ತಿದೆ.

ಸಂಸದ ಬಸವರಾಜು ಮಗನಿಗೂ ಟಿಕೆಟ್ ಡೌಟ್: ತುಮಕೂರು ಸಂಸದ ಜಿ.ಎಸ್ ಬಸವರಾಜುರವರ ಪುತ್ರ ಜ್ಯೋತಿಗಣೇಶ್‌ರವರಿಗೂ ಟಿಕೆಟ್ ಸಿಗುವುದು ಅನುಮಾನವಾಗಿದೆ. ಇವರಿಬ್ಬರೂ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ತುಮಕೂರು ನಗರ ಟಿಕೆಟ್ ಗಾಗಿ ಮತ್ತೊಬ್ಬ ಆರ್‌ಎಸ್‌ಎಸ್‌ ಕಟ್ಟಾಳು ಮಾಜಿ ಶಾಸಕ ಸೊಗಡು ಶಿವಣ್ಣ ತೀವ್ರ ಪೈಪೋಟಿ ನಡೆಸುತ್ತಿದ್ದು, ಬಹುಶಃ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.

ಹಲವರ ಕ್ಷೇತ್ರ ಬದಲಾವಣೆ

ಸಚಿವ ಆರ್ ಅಶೋಕ್, ಶಾಸಕ ರವಿ ಸುಬ್ರಮಣ್ಯ, ಮಾಜಿ ಶಾಸಕ ನಂದೀಶ್ ರೆಡ್ಡಿ ಹಲವರ ಕ್ಷೇತ್ರ ಬದಲಾವಣೆ ಮಾಡಲಾಗುತ್ತದೆ ಎಂಬ ಮಾಹಿತಿಗಳು ಸಹ ಹರಿದಾಡುತ್ತಿವೆ. ಪದ್ಮನಾಭನಗರ ಮತ್ತು ಬಸವನಗುಡಿಯಲ್ಲಿ ಬಿಜೆಪಿಯಲ್ಲಿ ಯಾರೂ ನಿಂತರೂ ಗೆಲ್ಲುತ್ತಾರೆ. ಹಾಗಾಗಿ ಪೈಪೋಟಿ ಇರುವ ಬಿಟಿಎಂ ಲೇಔಟ್, ಬ್ಯಾಟರಾಯನಪುರದಂತಹ ಕ್ಷೇತ್ರಗಳಲ್ಲಿ ನಿಲ್ಲಬೇಕು ಎಂದು ತಾಕೀತು ಮಾಡಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಚುನಾವಣೆಗಳಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿಯೂ ಬಿಜೆಪಿ ಇದೇ ತಂತ್ರವನ್ನು ಅನುಸರಿಸಿತ್ತು. ಹಲವು ಹಾಲಿ ಶಾಸಕರನ್ನು ಬಿಟ್ಟು ಹೊಸಬರಿಗೆ ಟಿಕೆಟ್ ನೀಡಿತ್ತು. ಗುಜರಾತ್‌ನಲ್ಲಿ ಅದು ಯಶಸ್ವಿಯಾದರೆ, ಹಿಮಾಚಲ ಪ್ರದೇಶದಲ್ಲಿ ಮುಳುವಾಗಿತ್ತು. ಕರ್ನಾಟಕದಲ್ಲಿ ಯಾವ ಫಲಿತಾಂಶ ಬರುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...