Homeಮುಖಪುಟಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

ಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

- Advertisement -
- Advertisement -

ದೇಶದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಬುಡಕಟ್ಟು ಮತ್ತು ಹಿಂದುಳಿದ ಜಾತಿಗಳವರ ಪ್ರಾತಿನಿಧ್ಯ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ನಗಣ್ಯವಾಗಿದ್ದು, ಅಲ್ಪಸಂಖ್ಯಾತರಾಗಿರುವ ಮೇಲ್ಜಾತಿಯ ಅಧಿಕಾರಿಗಳದ್ದೇ ಕಾರುಬಾರು ನಡೆಯುತ್ತಿರುವುದು ದೇಶದ ಸಾಮಾಜಿಕ ಅಸಮಾನತೆಗೆ ಹಿಡಿದ ಕನ್ನಡಿಯಾಗಿದೆ.

ಕೇಂದ್ರ ಸರಕಾರದ 89 ಕಾರ್ಯದರ್ಶಿಗಳಲ್ಲಿ ಪರಿಶಿಷ್ಟ ಜಾತಿಯ ಒಬ್ಬರೇ ಒಬ್ಬರು ಇದ್ದಾರೆ. ಕೇವಲ ಮೂವರು ಪರಿಶಿಷ್ಟ ಬುಡಕಟ್ಟುಗಳವರಿದ್ದು, ಇತರ ಹಿಂದುಳಿದ ಜಾತಿಗಳ ಒಬ್ಬರೇ ಒಬ್ಬರು ಇಲ್ಲ! ಇದು ಸಂಸತ್ತಿನಲ್ಲಿ ಮಂಡಿಸಲಾದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆಯ ಇತ್ತೀಚಿನ ಅಂಕಿಅಂಶಗಳಿಂದ ಸ್ಪಷ್ಟವಾಗುತ್ತದೆ. ಈ ಕಾರ್ಯದರ್ಶಿಗಳಲ್ಲಿ ಬಹುತೇಕರು ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್)ಗೆ ಸೇರಿದವರು. ಎಸ್‌ಸಿ, ಎಸ್‌ಟಿ, ಒಬಿಸಿ ಪ್ರಾತಿನಿಧ್ಯವು ಕೇಂದ್ರ ಸರಕಾರಿ ಇಲಾಖೆ/ಸಚಿವಾಲಯಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರ ಮಟ್ಟದಲ್ಲಿಯೂ ತೀರಾ ನಗಣ್ಯವಾಗಿದೆ.

ಉದಾಹರಣೆಗೆ 93 ಮಂದಿ ಹೆಚ್ಚುವರಿ ಕಾರ್ಯದರ್ಶಿಗಳ ಪೈಕಿ ಕೇವಲ ಆರು ಮಂದಿ ಎಸ್‌ಸಿಯವರಿದ್ದಾರೆ ಐವರು ಎಸ್‌ಟಿಯವರು ಇಲ್ಲಿಯೂ ಒಬ್ಬರೇ ಒಬ್ಬರು ಒಬಿಸಿಯವರಿಲ್ಲ. ಒಟ್ಟು 275 ಜಂಟಿ ಕಾರ್ಯದರ್ಶಿಗಳಲ್ಲಿ 13 ( 4.73 ಶೇಕಡಾ) ಎಸ್‌ಸಿಗಳಿದ್ದರೆ, ಒಂಬತ್ತು ಮಂದಿ (3.27 ಶೇಕಡಾ) ಎಸ್‌ಟಿಯವರಿದ್ದು, ಕೇವಲ 19 ಮಂದಿ ಮಾತ್ರ ಒಬಿಸಿಯವರಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿಯವರು ಸೇವೆಗೆ ಪ್ರವೇಶಿಸುವ ವಯಸ್ಸಿನ ಸರಾಸರಿ ಹೆಚ್ಚಾಗಿರುವುದರಿಂದ ಅವರ ಬ್ಯಾಚ್ ಕೇಂದ್ರ ಸರಕಾರದ ಕಾರ್ಯದರ್ಶಿ ಹುದ್ದೆಯ ಪರಿಗಣನೆಗೆ ಬರುವ ಮೊದಲೇ ಅವರು ನಿವೃತ್ತರಾಗುತ್ತಾರೆ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.

ಸಚಿವಾಲಯವು 1993ರಿಂದ ಅಂದರೆ ಒಬಿಸಿ ಮೀಸಲಾತಿಯನ್ನು ಆರಂಭಿಸಿದಂದಿನಿಂದ ಒಬಿಸಿ ಕುರಿತ ಅಂಕಿಅಂಶಗಳನ್ನು ಇಟ್ಟುಕೊಳ್ಳುತ್ತಿದೆ. ಮಂಡಲ್ ಆಯೋಗದ ಶಿಫಾರಸಿನ ಪ್ರಕಾರ ಸರಕಾರಿ ಉದ್ಯೋಗಗಳಲ್ಲಿ ಒಬಿಸಿಯವರಿಗೆ 27.5 ಶೇಕಡಾ, ಎಸ್‌ಸಿಯವರಿಗೆ 15 ಶೇಕಡಾ ಮತ್ತು ಎಸ್‌ಟಿಯವರಿಗೆ 7.5 ಶೇಕಡಾ ಮೀಸಲಾತಿ ಕಡ್ಡಾಯವಾಗಿದೆ. ಈ ಕುರಿತು ‘ದಿ ಪ್ರಿಂಟ್’ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ಅಧಿಕೃತ ಹೇಳಿಕೆಗಾಗಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ಲಭ್ಯವಾಗಲಿಲ್ಲ.

ಪ್ರವೇಶದ ವಯಸ್ಸು ಹೆಚ್ಚು

ತೃಣಮೂಲ ಕಾಂಗ್ರೆಸ್‌ನ ನಾಯಕ ದಿಬ್ಯೇಂದು ಅಧಿಕಾರಿಯವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಬ್ಬಂದಿ ಸಚಿವಾಲದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮೀಸಲಾತಿ ವಿಭಾಗಗಳಿಗೆ ಸೇರಿದವರಲ್ಲಿ ಹೆಚ್ಚಿನವರು ಸೇವೆಯನ್ನು ಪ್ರವೇಶಿಸುವಾಗಲೇ ಹೆಚ್ಚು ವಯಸ್ಸಾಗಿರುವುದರಿಂದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುವ ಮೊದಲೇ ನಿವೃತ್ತರಾಗುತ್ತಾರೆ ಎಂದು ತಿಳಿಸಿದ್ದಾರೆ. ಇದರ ಪರಿಣಾಮವಾಗಿ ಭಾರತ ಸರಕಾರದ ಉನ್ನತ ಸ್ಥಾನಗಳಲ್ಲಿ ಅವರ ಪ್ರಾತಿನಿಧ್ಯ ಹೋಲಿಕೆಯಲ್ಲಿ ಕಡಿಮೆಯಾಗಿದೆ. ಆದರೆ, ಪರಿಗಣನೆಗೆ ಬರುವ ಮೀಸಲಾತಿ ವಿಭಾಗದ ಅಧಿಕಾರಿಗಳಲ್ಲಿ ಸಾಧ್ಯವಿದ್ದಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

‘ಮೇಲೇರಲು ಅವಕಾಶ ನಿರಾಕರಣೆ’ 
ಆದರೆ ಪರಿಶಿಷ್ಟ ಜಾತಿಗೆ ಸೇರಿದ, ಹಿಂದೆ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿಂದೆ ಬಿಜೆಪಿಯಲ್ಲಿದ್ದ ಸಂಸದ ಉದಿತ್ ರಾಜ್ ಅವರು ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗಗಳಿಗೆ ಸೇರಿದ ಅಧಿಕಾರಿಗಳನ್ನು ಬಹುತೇಕ ಸಲ ಗುರಿಮಾಡಿಕೊಂಡು ಅವರು ಮೇಲಿನ ಹುದ್ದೆಗಳಿಗೆ ಬರದಂತೆ ತಡೆಯಲಾಗುತ್ತಿದೆ ಎಂದು ಆರೋಪಿಸಿದರು.

“ದಲಿತನಾದ ಮಾಜಿ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ನಾನು ನನ್ನ ಅನುಭವದಿಂದ ಹೇಳಬಲ್ಲೆ. ಚಿಕ್ಕಪುಟ್ಟ ಕಾರಣಗಳಿಗಾಗಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುತ್ತದೆ ಮತ್ತು ಮೇಲಾಧಿಕಾರಿಗಳು ಅವರ ಸೇವಾದಾಖಲೆಯನ್ನು ಬೇಕೆಂದೇ ಹಾಳುಗೆಡವುತ್ತಾರೆ” ಎಂದು ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಉದಿತ್ ರಾಜ್ ಹೇಳಿದರು.

“ನಾನು ಹಿಂದೆ ಬಿಜೆಪಿಯಲ್ಲಿದ್ದಾಗ ಹಿರಿಯ ಅಧಿಕಾರಿವರ್ಗದಲ್ಲಿ ಎಸ್‌ಸಿ, ಎಸ್‌ಟಿ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಪ್ರತಿಭಟಿಸಿದ್ದೆ. ಆದರೆ, ಯಾರೂ ಅದಕ್ಕೆ ಯಾವುದೇ ಗಮನ ಕೊಡಲಿಲ್ಲ. ಆದರೆ, ಈ ಪ್ರಶ್ನೆ  ಎತ್ತಿದ್ದಕ್ಕಾಗಿ ನಾನು ಬೆಲೆ ತೆರಬೇಕಾಯಿತು” ಎಂದು ಅವರು ಹೇಳಿದರು.
ಇತರ ಕಾರಣಗಳು ಈ ತಾರತಮ್ಯದ ಪ್ರಾತಿನಿಧ್ಯ್ಯಕ್ಕೆ ಮುಖ್ಯ ಕಾರಣವೆಂದರೆ ಕೇಂದ್ರ ನಿಯೋಜನೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವಾಗ ಮೀಸಲಾತಿಯನ್ನು ಪರಿಗಣನೆಗೆ ಬರದೇ ಇರುವುದು ಎಂದು ಮಾಜಿ ಐಎಎಸ್ ಅಧಿಕಾರಿಯೊಬ್ಬರು ‘ದಿ ಪ್ರಿಂಟ್’ಗೆ ತಿಳಿಸಿದರು.

“ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಕಾರಿಗಳ ವೃಂದದಿಂದ ಆಯ್ಕೆ ಮಾಡಲಾಗುತ್ತದೆ. ಆ ವೃಂದದಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಅಧಿಕಾರಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಸಹಜವಾಗಿಯೇ ಅವರ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಈ ಅಧಿಕಾರಿ ಹೇಳಿದರು.

“ಕೆಲವು ಸಲ ಐಎಎಸ್ ಅಧಿಕಾರಿಗಳು ನಿಯೋಜನೆ ಮೇರೆಗೆ ಕೇಂದ್ರ ಸರಕಾರದ ಸೇವೆಗೆ ಬರಲು ಇಚ್ಛಿಸುವುದಿಲ್ಲ ಇಲ್ಲವೇ ರಾಜ್ಯ ಸರಕಾರಗಳು ಅವರನ್ನು ಸೇವೆಯಿಂದ ಬಿಡುಗಡೆ ಮಾಡುವುದಿಲ್ಲವಾದುದರಿಂದ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಪ್ರಾತಿನಿಧ್ಯ ಕಡಿಮೆ ಇದೆ ಎಂದು ಸದ್ಯ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಹೇಳಿದರು.

ಆಧಾರ; ದಿ ಪ್ರಿಂಟ್

ಮರುನಿರೂಪನೆ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...