Homeಮುಖಪುಟ8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

- Advertisement -
- Advertisement -

ಮೇ 10 ರಂದು ನಡೆಯಲಿರುವ ಕರ್ನಾಟಕದ ಚುನಾವಣೆಗೆ ಭಾರಿ ಕಸರತ್ತು ನಡೆಸಿದ ಬಿಜೆಪಿ ಕೊನೆಗೂ 189 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಸುಮಾರು 20 ರಿಂದ 30 ಹಾಲಿ ಶಾಸಕರಿಗೆ ಕೋಕ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಮೊದಲ ಪಟ್ಟಿಯಲ್ಲಿ ಕೇವಲ 8 ಜನ ಹಾಲಿ ಶಾಸಕರಿಗೆ ಮಾತ್ರ ಟಿಕೆಟ್ ಸಿಕ್ಕಿಲ್ಲ. ಅವರ ಪಟ್ಟಿ ಕೆಳಗಿನಂತಿದೆ.

ಪುತ್ತೂರು- ಸಂಜೀವ ಮಠಂದೂರು

2013 ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಶಕುಂತಲಾ ಶೆಟ್ಟಿಯವರ ಎದುರು 4,289 ಮತಗಳ ಅಂತರದಲ್ಲಿ ಸೋಲು ಕಂಡಿದ್ದ ಅವರು 2018 ರಲ್ಲಿ ಅದೇ ಶಕುಂತಲಾ ಶೆಟ್ಟಿಯವರನ್ನು 19,477 ಮತಗಳ ಅಂತರದಲ್ಲಿ ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. ಅವರಿಗೆ ಈಗ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರ ಬದಲಿಗೆ ಆಶಾ ತಿಮ್ಮಪ್ಪ ಎಂಬ ಹೊಸ ಮುಖಕ್ಕೆ ಮಣೆ ಹಾಕಿದೆ. ಕಾಂಗ್ರೆಸ್ ಇಲ್ಲಿ ಇನ್ನೂ ಟಿಕೆಟ್ ಘೋಷಿಸಿಲ್ಲ.

ಸುಳ್ಯ – ಎಸ್. ಅಂಗಾರ

1989 ರಲ್ಲಿ ಸುಳ್ಯ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಕಾಂಗ್ರೆಸ್‌ನ ಕೆ.ಕುಶಲರವರ ಎದುರು ಸೋತಿದ್ದ ಎಸ್ ಅಂಗಾರರವರು ತದನಂತರದ ಆರು ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಡಾ.ಬಿ.ರಘುರವರ ವಿರುದ್ದ 26,068 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಆದರೂ ಬಿಜೆಪಿ ಸರ್ಕಾರ ಬಂದ ನಂತರ ಅವರನ್ನು ಮಂತ್ರಿ ಮಾಡಿರಲಿಲ್ಲ. ಈಗ ಅವರ ಬದಲಿಗೆ ಭಾಗೀರಥಿ ಮುರುಲ್ಯ ಎಂಬುವವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪನವರಾಗಿದ್ದಾರೆ.

ಉಡುಪಿ – ರಘುಪತಿ ಭಟ್

ಉಡುಪಿಯಲ್ಲಿ ರಘುಪತಿ ಭಟ್ 2004, 2008 ಮತ್ತು 2018 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಪ್ರಮೋದ್ ಮಧ್ವರಾಜ್‌ರವರನ್ನು 12,044 ಮತಗಳ ಅಂತರದಲ್ಲಿ ಸೋಲಿಸಿದ್ದರು. ಆನಂತರ ಪ್ರಮೋದ್ ಮಧ್ವರಾಜ್‌ ಸಹ ಬಿಜೆಪಿ ಸೇರಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಬ್ಬರಿಗೂ ಟಿಕೆಟ್ ನಿರಾಕರಿಸಿರುವ ಬಿಜೆಪಿ ಯಶ್‌ಪಾಲ್ ಸುವರ್ಣ ಎಂಬುವವರಿಗೆ ಟಿಕೆಟ್ ನೀಡಿದೆ. ಅವರು ಹಿಜಾಬ್ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ಪ್ರಸಾದರಾಜ್ ಕಂಚನ್‌ರವರು ಇಲ್ಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಕಾಪು – ಲಾಲಾಜಿ ಮೆಂಡನ್

ಕಾಪುವಿನಲ್ಲಿ 1994-1999 ರ ಚುನಾವಣೆಗಳಲ್ಲಿ ಬಿಜೆಪಿಯಿಂದ ಸೋಲು ಕಂಡಿದ್ದ ಲಾಲಾಜಿ ಮೆಂಡನ್ ಆನಂತರ 2004, 2008 ಮತ್ತು 2018 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿನಯ್‌ ಕುಮಾರ್ ಸೊರಕೆ ವಿರುದ್ಧ 11,917 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದರು. ಈಗ ಅವರ ಬದಲಿಗೆ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕಾಂಗ್ರೆಸ್ ಇಲ್ಲಿ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ.

ಶಿರಹಟ್ಟಿ – ರಾಮಪ್ಪ ಲಮಾಣಿ

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಶಿರಹಟ್ಟಿಯಲ್ಲಿ ರಾಮಪ್ಪ ಲಮಾಣಿಯವರು 2008 ಮತ್ತು 2018 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ರಾಮಕೃಷ್ಣ ದೊಡ್ಮನಿ ವಿರುದ್ಧ 29,993 ಮತಗಗಳ ಅಂತರದಲ್ಲಿ ಜಯ ಸಾಧಿಸಿದ್ದರು. ಈಗ ಅವರ ಬದಲಿಗೆ ಡಾ.ಚಂದ್ರು ಲಮಾಣಿಯವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ.

ರಾಮದುರ್ಗ – ಮಹದೇವಪ್ಪ ಯಾದವಾಡ

ಮಹದೇವಪ್ಪ ಯಾದವಾಡರವರು ರಾಮದುರ್ಗದಲ್ಲಿ 1999 ರಲ್ಲಿ ಸೋಲು ಕಂಡಿದ್ದರು. ಆನಂತರ 2004 ಮತ್ತು 2018 ರಲ್ಲಿ ಗೆಲುವು ದಾಖಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಅಶೋಕ್ ಮಹದೇವಪ್ಪ ಪಟ್ಟಣ್ ವಿರುದ್ಧ 2,875 ಮತಗಳ ಅಂತರದಲ್ಲಿ ಜಯ ಕಂಡಿದ್ದರು. ಈಗ ಅವರ ಬದಲಿಗೆ ಬಿಜೆಪಿಯು ಚಿಕ್ಕರೇವಣ್ಣನವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಸೋತ ಅಭ್ಯರ್ಥಿ ಮಾಜಿ ಶಾಸಕ ಅಶೋಕ್ ಮಹದೇವಪ್ಪ ಪಟ್ಟಣ್ ರವರಿಗೆ ಟಿಕೆಟ್ ನೀಡಿದೆ.

ಬೆಳಗಾವಿ ಉತ್ತರ – ಅನಿಲ್ ಎಸ್ ಬೆನಕೆ

2018 ರಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅನಿಲ್ ಎಸ್ ಬೆನಕೆ ಕಾಂಗ್ರೆಸ್‌ನ ಫೈರೋಜ್ ನೂರುದ್ದೀನ್ ಸೇಠ್‌ರವರನ್ನು 17,267 ಮತಗಳ ಅಂತರದಲ್ಲಿ ಸೋಲಿಸಿದ್ದರು. ಆದರೆ ಈ ಬಾರಿ ಅವರ ಬದಲಿಗೆ ಬಿಜೆಪಿ ಡಾ.ರವಿ ಪಾಟೀಲ್‌ಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ.

ಹೊಸದುರ್ಗ – ಗೂಳಿಹಟ್ಟಿ ಶೇಖರ್

ಗೂಳಿಹಟ್ಟಿ ಶೇಖರ್ ಹೊಸದುರ್ಗದಲ್ಲಿ 2008 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡರೆ 2013 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸೋಲು ಕಂಡಿದ್ದರು. 2018 ರಲ್ಲಿ ಬಿಜೆಪಿ ಸೇರಿ ಕಾಂಗ್ರೆಸ್‌ನ ಬಿ.ಜಿ ಗೋವಿಂದಪ್ಪನವರ ಎದುರು 25,992 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈಗ ಅವರ ಬದಲಿಗೆ ಎಸ್.ಲಿಂಗಮೂರ್ತಿಯವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ಬಿ.ಜಿ ಗೋವಿಂದಪ್ಪನವರಿಗೆ ಮತ್ತೆ ಟಿಕೆಟ್ ನೀಡಿದೆ.

ಇನ್ನು ಬಿ.ಎಸ್ ಯಡಿಯೂರಪ್ಪನವರು ಶಿಕಾರಿಪುರದಲ್ಲಿ ಸ್ಪರ್ಧಿಸುತ್ತಿಲ್ಲ. ಹಾಗಾಗಿ ಅವರ ಬದಲಿಗೆ ಅವರ ಪುತ್ರ ವಿಜಯೇಂದ್ರರಿಗೆ ಟಿಕೆಟ್ ಸಿಕ್ಕರೆ, ವಿಜಯನಗರದಲ್ಲಿ ಆನಂದ್ ಸಿಂಗ್ ಬದಲಿಗೆ ಅವರ ಪುತ್ರ ಸಿದ್ಧಾರ್ಥ್ ಸಿಂಗ್‌ಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಇದನ್ನೂ ಓದಿ: ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...