Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್ ನೀಡುತ್ತೇವೆ ಎಂದು ಹಿರಿಯ ಮುಖಂಡರು ಘೋಷಿಸಿದ್ದರು. ಆದರೆ ಸದ್ಯ ಬಿಡುಗಡೆಯಾಗಿರುವ ಬಿಜೆಪಿಯ ಮೊದಲ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳಿಗೂ ಟಿಕೆಟ್ ಘೋಷಿಸಿದ್ದು ಅದರಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರು ಮಿಸ್ ಆಗಿದ್ದು, ಬೇರೆ ಪಕ್ಷಗಳಿಂದ ವಲಸೆ ಬಂದವರಿಗೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ.

ಮಂಡ್ಯ, ನಾಗಮಂಗಲ, ಕೆ.ಆರ್ ಪೇಟೆ ಮತ್ತು ಮದ್ದೂರಿನಲ್ಲಿ ಜೆಡಿಎಸ್‌ನಿಂದ ವಲಸೆ ಬಂದವರಿಗೆ ಹಾಗೂ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಂದವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಂಡ್ಯ: ಅಶೋಕ್ ಎಸ್‌.ಡಿ ಜಯರಾಂ

ಅಶೋಕ್ ಎಸ್‌.ಡಿ ಜಯರಾಂರವರು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. 2013ರ ಚುನಾವಣೆ ವೇಳೆಗೆ ಮಂಡ್ಯದಲ್ಲಿ ಹಾಲಿ ಶಾಸಕ ಎಂ.ಶ್ರೀನಿವಾಸ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಟಿಕೆಟ್ ಸಿಗದಿದ್ದರಿಂದ ಅಶೋಕ್ ಜಯರಾಂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷವು ಎಸ್.ಡಿ ಜಯರಾಂರವರನ್ನು ಸಮಾಧಾನ ಪಡಿಸಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುವಂತೆ ಮಾಡುತ್ತದೆ. ಇನ್ನು 2018ರಲ್ಲಿಯೂ ಎಂ.ಶ್ರೀನಿವಾಸ್‌ರವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ್ದರಿಂದ ಬೇಸೆತ್ತ ಅವರು ಬಿಜೆಪಿ ಸೇರಿದ್ದಾರೆ.

ಮದ್ದೂರು – ಎಸ್‌.ಪಿ ಸ್ವಾಮಿ

ಮದ್ದೂರಿನಲ್ಲಿ ಜೆಡಿಎಸ್ ಟಿಕೆಟ್ ಸಿಗುವುದಿಲ್ಲ ಎಂಬುದನ್ನು ಅರಿತು ಪಕ್ಷ ತೊರೆದು ಬಿಜೆಪಿ ಸೇರಿರುವ ಮುನ್ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿಯವರು ಬಿಜೆಪಿ ಟಿಕೆಟ್ ಘೋಷಿಸಿದೆ. ಇದು ಅವರ ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮಂಡ್ಯ ಜಿ.ಪಂ ಅಧ್ಯಕ್ಷರಾಗಿದ್ದ ಅವರ ಪತ್ನಿ ನಾಗರತ್ನರವರ ಜೊತೆಗೂಡಿ ನಾಲ್ಕು ಜಿ.ಪಂ ಸದಸ್ಯರು ಇವರೊಡನೆ ಬಿಜೆಪಿ ಸೇರಿದ್ದಾರೆ.

ಶ್ರೀರಂಗಪಟ್ಟಣ – ಸಚ್ಚಿದಾನಂದ

2013 ರಲ್ಲಿ ಶ್ರೀರಂಗಪಟ್ಟಣದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಎಲ್ ಲಿಂಗರಾಜುರವರ ಅಳಿಯ, ಕೆಪಿಸಿಸಿ ಸದಸ್ಯರಾಗಿದ್ದ ಸಚ್ಚಿದಾನಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅಭ್ಯರ್ಥಿಯಾಗಿದ್ದಾರೆ.

ನಾಗಮಂಗಲ – ಸುಧಾ ಶಿವರಾಮೇಗೌಡ

ಎರಡು ಸಲ ಶಾಸಕರಾಗಿದ್ದ ಎಲ್.ಆರ್ ಶಿವರಾಮೇಗೌಡರು 2018ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಅವರು ಕಳೆದ ವರ್ಷ ಜಿ.ಮಾದೇಗೌಡರ ವಿರುದ್ಧ ಹಗುರವಾಗಿ ಮಾತನಾಡಿದ ಕಾರಣದಿಂದ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಅವರು ಕಳೆದ ವಾರದಲ್ಲಿ ಬಿಜೆಪಿ ಸೇರಿದ್ದರು. ಅವರೇ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಅವರು ತಮ್ಮ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ತಂದಿದ್ದಾರೆ.

ಕೆ.ಆರ್ ಪೇಟೆ – ಕೆ.ಸಿ ನಾರಾಯಣಗೌಡ

ನಾರಾಯಣಗೌಡರು 2008ರಲ್ಲಿ ಕೆ.ಆರ್ ಪೇಟೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಜೆಡಿಎಸ್ ಸೇರಿ 2013, 2018ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019 ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಜಯ ಕಂಡಿದ್ದರು. ಅವರಿಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿದೆ.

ಮೇಲುಕೋಟೆ – ಡಾ.ಇಂದ್ರೇಶ್ ಕುಮಾರ್

ಮೇಲುಕೋಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೂ ಒಂದಷ್ಟು ಸಂಖ್ಯೆಯ ಓಟುಗಳನ್ನು ಪಡೆದು ತಾವೂ ನೆಲೆ ಕಂಡು, ಪಕ್ಷಕ್ಕೂ ನೆಲೆ ಕಾಣಿಸಲು ಡಾ.ಇಂದ್ರೇಶ್‌ ಕುಮಾರ್ ಮುಂದಾಗಿದ್ದಾರೆ. ಔಷಧಿ ಕಂಪನಿ ನಡೆಸುವ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಮಳವಳ್ಳಿ – ಮುನಿರಾಜು

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಮಳವಳ್ಳಿಯಲ್ಲಿ ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಇತ್ತೀಚೆಗೆ ಮತ್ತೆ ಪ್ರತ್ಯಕ್ಷರಾಗಿದ್ದು ಸಮಾಜಸೇವೆ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಇದನ್ನೂ ಓದಿ; 8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...