Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್ ನೀಡುತ್ತೇವೆ ಎಂದು ಹಿರಿಯ ಮುಖಂಡರು ಘೋಷಿಸಿದ್ದರು. ಆದರೆ ಸದ್ಯ ಬಿಡುಗಡೆಯಾಗಿರುವ ಬಿಜೆಪಿಯ ಮೊದಲ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳಿಗೂ ಟಿಕೆಟ್ ಘೋಷಿಸಿದ್ದು ಅದರಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರು ಮಿಸ್ ಆಗಿದ್ದು, ಬೇರೆ ಪಕ್ಷಗಳಿಂದ ವಲಸೆ ಬಂದವರಿಗೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ.

ಮಂಡ್ಯ, ನಾಗಮಂಗಲ, ಕೆ.ಆರ್ ಪೇಟೆ ಮತ್ತು ಮದ್ದೂರಿನಲ್ಲಿ ಜೆಡಿಎಸ್‌ನಿಂದ ವಲಸೆ ಬಂದವರಿಗೆ ಹಾಗೂ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಂದವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಂಡ್ಯ: ಅಶೋಕ್ ಎಸ್‌.ಡಿ ಜಯರಾಂ

ಅಶೋಕ್ ಎಸ್‌.ಡಿ ಜಯರಾಂರವರು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. 2013ರ ಚುನಾವಣೆ ವೇಳೆಗೆ ಮಂಡ್ಯದಲ್ಲಿ ಹಾಲಿ ಶಾಸಕ ಎಂ.ಶ್ರೀನಿವಾಸ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಟಿಕೆಟ್ ಸಿಗದಿದ್ದರಿಂದ ಅಶೋಕ್ ಜಯರಾಂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷವು ಎಸ್.ಡಿ ಜಯರಾಂರವರನ್ನು ಸಮಾಧಾನ ಪಡಿಸಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುವಂತೆ ಮಾಡುತ್ತದೆ. ಇನ್ನು 2018ರಲ್ಲಿಯೂ ಎಂ.ಶ್ರೀನಿವಾಸ್‌ರವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ್ದರಿಂದ ಬೇಸೆತ್ತ ಅವರು ಬಿಜೆಪಿ ಸೇರಿದ್ದಾರೆ.

ಮದ್ದೂರು – ಎಸ್‌.ಪಿ ಸ್ವಾಮಿ

ಮದ್ದೂರಿನಲ್ಲಿ ಜೆಡಿಎಸ್ ಟಿಕೆಟ್ ಸಿಗುವುದಿಲ್ಲ ಎಂಬುದನ್ನು ಅರಿತು ಪಕ್ಷ ತೊರೆದು ಬಿಜೆಪಿ ಸೇರಿರುವ ಮುನ್ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿಯವರು ಬಿಜೆಪಿ ಟಿಕೆಟ್ ಘೋಷಿಸಿದೆ. ಇದು ಅವರ ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮಂಡ್ಯ ಜಿ.ಪಂ ಅಧ್ಯಕ್ಷರಾಗಿದ್ದ ಅವರ ಪತ್ನಿ ನಾಗರತ್ನರವರ ಜೊತೆಗೂಡಿ ನಾಲ್ಕು ಜಿ.ಪಂ ಸದಸ್ಯರು ಇವರೊಡನೆ ಬಿಜೆಪಿ ಸೇರಿದ್ದಾರೆ.

ಶ್ರೀರಂಗಪಟ್ಟಣ – ಸಚ್ಚಿದಾನಂದ

2013 ರಲ್ಲಿ ಶ್ರೀರಂಗಪಟ್ಟಣದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಎಲ್ ಲಿಂಗರಾಜುರವರ ಅಳಿಯ, ಕೆಪಿಸಿಸಿ ಸದಸ್ಯರಾಗಿದ್ದ ಸಚ್ಚಿದಾನಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅಭ್ಯರ್ಥಿಯಾಗಿದ್ದಾರೆ.

ನಾಗಮಂಗಲ – ಸುಧಾ ಶಿವರಾಮೇಗೌಡ

ಎರಡು ಸಲ ಶಾಸಕರಾಗಿದ್ದ ಎಲ್.ಆರ್ ಶಿವರಾಮೇಗೌಡರು 2018ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಅವರು ಕಳೆದ ವರ್ಷ ಜಿ.ಮಾದೇಗೌಡರ ವಿರುದ್ಧ ಹಗುರವಾಗಿ ಮಾತನಾಡಿದ ಕಾರಣದಿಂದ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಅವರು ಕಳೆದ ವಾರದಲ್ಲಿ ಬಿಜೆಪಿ ಸೇರಿದ್ದರು. ಅವರೇ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಅವರು ತಮ್ಮ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ತಂದಿದ್ದಾರೆ.

ಕೆ.ಆರ್ ಪೇಟೆ – ಕೆ.ಸಿ ನಾರಾಯಣಗೌಡ

ನಾರಾಯಣಗೌಡರು 2008ರಲ್ಲಿ ಕೆ.ಆರ್ ಪೇಟೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಜೆಡಿಎಸ್ ಸೇರಿ 2013, 2018ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019 ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಜಯ ಕಂಡಿದ್ದರು. ಅವರಿಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿದೆ.

ಮೇಲುಕೋಟೆ – ಡಾ.ಇಂದ್ರೇಶ್ ಕುಮಾರ್

ಮೇಲುಕೋಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೂ ಒಂದಷ್ಟು ಸಂಖ್ಯೆಯ ಓಟುಗಳನ್ನು ಪಡೆದು ತಾವೂ ನೆಲೆ ಕಂಡು, ಪಕ್ಷಕ್ಕೂ ನೆಲೆ ಕಾಣಿಸಲು ಡಾ.ಇಂದ್ರೇಶ್‌ ಕುಮಾರ್ ಮುಂದಾಗಿದ್ದಾರೆ. ಔಷಧಿ ಕಂಪನಿ ನಡೆಸುವ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಮಳವಳ್ಳಿ – ಮುನಿರಾಜು

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಮಳವಳ್ಳಿಯಲ್ಲಿ ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಇತ್ತೀಚೆಗೆ ಮತ್ತೆ ಪ್ರತ್ಯಕ್ಷರಾಗಿದ್ದು ಸಮಾಜಸೇವೆ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಇದನ್ನೂ ಓದಿ; 8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...