Homeಕರ್ನಾಟಕಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಳ್ಳುತ್ತಲೇ ಇದೆ. ಬಿಜೆಪಿ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಕೈ ತಪ್ಪಿದ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಮತ್ತೊಂದೆಡೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದರಿಂದ ಶಿವಮೊಗ್ಗ ಜಿಲ್ಲಾ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

ಈಶ್ವರಪ್ಪ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಕ್ಕೆ ಕಾರ್ಯಕರ್ತರು, ಬೆಂಬಲಿಗರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಶಿವಮೊಗ್ಗ ಪಾಲಿಕೆ ಬಿಜೆಪಿ ಸದಸ್ಯರು ಪಕ್ಷದ ವಿವಿಧ ಜವಾಬ್ದಾರಿಗಳಿಗೆ ಸಾಮೂಹಿಕ‌ ರಾಜೀನಾಮೆ ಸಲ್ಲಿಸಿದ್ದಾರೆ. ಮೇಯರ್, ಉಪಮೇಯರ್ ಸೇರಿ 19 ಸದಸ್ಯರು ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹಾಗೂ ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಭೇಟಿಯಾಗಲು ನಿರ್ಧಾರ ಮಾಡಿದ್ದಾರೆ.

ಕೆಎಸ್ ಈಶ್ವರಪ್ಪ ಅವರಿಗೆ ಟಿಕೆಟ್ ನೀಡಲಾಗುವುದಿಲ್ಲ ಎನ್ನುವ ಕಾರಣಕ್ಕೆ ಅವರಿಂದ ಬಲವಂತವಾಗಿ ರಾಜಕೀಯ ನಿವೃತ್ತಿ ಘೋ‍ಷಣೆ ಮಾಡಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಕೆಲವರು ಟಿಕೆಟ್ ನೀಡದಿದ್ದರೆ ಮುಜಗರ ಆಗಬಹುದು ಎನ್ನುವ ಕಾರಣಕ್ಕೆ ಟಿಕೆಟ್ ಘೋಷಣೆಗೆ ಕೆಲವು ಗಂಟೆಗಳ ಮುಂಚೆ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರು ಮತ್ತು ಈಶ್ವರಪ್ಪ ಆಭಿಮಾನಿಗಳು ಧರಣಿ ನಡೆಸಿದ್ದಾರೆ. ಬಿಜೆಪಿ ಕಚೇರಿಯ ಮುಂಭಾಗದ ದೀನ ದಯಾಳ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಕೆಎಸ್ ಈಶ್ವರಪ್ಪ ಅವರು ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿರುವ ಎಂಎಲ್​ಸಿ ಆಯನೂರು ಮಂಜುನಾಥ್ ಅವರು, ಈಶ್ವರಪ್ಪ ನಿವೃತ್ತಿ ಸ್ವಲ್ಪ ಆಘಾತಕಾರಿ ಮತ್ತು ಬೇಸರವಾಗಿದೆ. ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವ್ಯಕ್ತಿಗತವಾಗಿ ದ್ವೇಷಿಗಳು ಕಡಿಮೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದರೂ ಅಪಖ್ಯಾತಿಗೆ ಗುರಿಯಾಗಿದ್ದಾರೆ. ಈಶ್ವರಪ್ಪ ನಾಲಗೆ, ಮನೆಯಲ್ಲಿರುವ ವೈರಿಯಿಂದಾಗಿ ಟಿಕೆಟ್ ಸಿಕ್ಕಿಲ್ಲ. ಪುತ್ರ ವ್ಯಾಮೋಹದಿಂದ ಹೊರ ಬಂದಿದ್ದರೆ ಸ್ಪರ್ಧಿಸಬಹುದಿತ್ತು. ತನ್ನದಲ್ಲದ ತಪ್ಪಿಗೆ ಈಶ್ವರಪ್ಪ ರಾಜಕೀಯದಿಂದ ನಿವೃತ್ತಿ ಆಗಿದ್ದಾರೆ. ಕೆ.ಎಸ್.ಈಶ್ವರಪ್ಪ ನಿವೃತ್ತಿಗೆ ಕಾರ್ಯಕರ್ತರು, ಪಕ್ಷ ಕಾರಣವಲ್ಲ. ಪುತ್ರನಿಂದಾಗಿ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಶ್ವರಪ್ಪ ಯಾವತ್ತೂ ನನ್ನ ಟಾರ್ಗೆಟ್ ಆಗಿರಲಿಲ್ಲ. ಈಶ್ವರಪ್ಪ ಬದಲು ನನಗೆ ಟಿಕೆಟ್​​​ ನೀಡಿ ಎಂದು ಕೇಳಿದ್ದೇನೆ ಅಷ್ಟೇ” ಎಂದು ಹೇಳಿದರು.

ಇದನ್ನೂ ಓದಿ: ಯತ್ನಾಳ್‌ಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ಬಿಜೆಪಿಯಲ್ಲಿ ವಿರೋಧ; ಬ್ಲ್ಯಾಕ್​ಮೇಲ್​ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...