Homeಕರ್ನಾಟಕಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

ಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿ ಬಿಡುಗಡೆಯ ಬಳಿಕ ರಾಜ್ಯದ ಬಹುತೇಕ ಕಡೆಗಳಲ್ಲಿ ಬಂಡಾಯ ಜೋರಾಗಿಯೇ ಸದ್ದು ಮಾಡುತ್ತಿದೆ. ಇದೀಗ ಬಾಗಲಕೋಟೆಯಲ್ಲೂ ಬಿಜೆಪಿಯ ಬಂಡಾಯದ ಬಿಸಿ ಜೋರಾಗಿದೆ. ಸಧ್ಯ ಹಾಲಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೆ ಟಿಕೆಟ್ ಘೋಷಣೆಯಾಗಿದ್ದು, ಅವರ ಸಹೋದರ ಹಾಗೂ ಹಲವು ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಲು ಸಿದ್ಧರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಬಿಜೆಪಿಯ ಯುವ ಮುಖಂಡ, ಶಾಸಕ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು, ತಮ್ಮ ಅಭಿಮಾನಿಗಳು, ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಇಲ್ಲವೇ ಸಂತೋಷ ಹೊಕ್ರಾಣಿ ಕಣಕ್ಕೆ ಇಳಿಯುವುದು ನಿಶ್ಚಿತ ಎಂದು ಘೋಷಣೆ ಮಾಡಿದರು.

”ಈಗಾಗಲೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ್ಯಾಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಾನು ಇಲ್ಲವೇ ಸಂತೋಷ ಹೊಕ್ರಾಣಿ ಇಬ್ಬರಲ್ಲಿ ಒಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿ ಸಲಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ”ಬೂತ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಿ ಗೆಲ್ಲಿಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗ ದಲ್ಲಿ ಪ್ರಚಾರ ನಡೆಸಿದ್ದು ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ
ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಗಂಗಾಧರ ಮುರನಾಳ ಮಾತನಾಡಿ, ”ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಚರಂತಿಮಠ ಇಲ್ಲವೇ ಸಂತೋಷ ಹೊಕ್ರಾಣಿ ಸ್ಪರ್ಧಿಸಲಿದ್ದಾರೆ ಅವರನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ” ಎಂದರು.

”ನಾನು ಕಳೆದ ಹಲವು ವರ್ಷಗಳಿಂದ ಸಂಘ ಪರಿವಾರದಲ್ಲಿ ಕೆಲಸ ಮಾಡುತ್ತಾ ಬಂದಿದ್ದು ಈಗಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ಬಂಡಾಯದ ಕುರಿತು ಹೆದರಬೇಡಿ ಧೈರ್ಯದಿಂದ ಮುನ್ನುಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಂತಹ ಕೆಲಸ ಮಾಡಬೇಕಾಗಿದೆ. ಬದಲಾವಣೆ ಆಗುತ್ತಾರೆ ಎಂದು ನೋಡಿದೆವು ಆದರೆ ಅವರು ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ. ನಾಯಿ ಬಾಲ ಯಾವತ್ತೂ ಡೊಂಕು ಇದ್ದಂತೆ” ಎಂದು ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಿಂದು ಸಂಘಟನೆಯ ಮುಖಂಡ ಅಶೋಕ ಮುತ್ತಿನಮಠ ಮಾತನಾಡಿ, ”ಅನ್ಯಾಯದ ವಿರುದ್ದ ನಮ್ಮ
ಹೋರಾಟವಾಗಿದ್ದು, ಇದರಲ್ಲಿ ಜಯಶಾಲಿಯಾಗುತ್ತೇವೆ. ಇಂದು ಆಯೋಜಿಸಿದ್ದ ”ಬದಲಾವಣೆಗಾಗಿ ಪಾದಯಾತ್ರೆ”ಗೆ ಚುನಾವಣಾಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಪಾದಯಾತ್ರೆ ಯನ್ನು ರದ್ದುಪಡಿಸಲಾಗಿದೆ” ಎಂದು ತಿಳಿಸಿದರು.

ಈ ಸಭೆಯಲ್ಲಿ ಪ್ರಮುಖರಾದ ಬಸವರಾಜ ಕಟಗೇರಿ, ವಿಜಯ ಸುಲಾಖೆ, ಅರುಣ ಲೋಕಾಪೂರ, ಗುರು ಅನಗವಾಡಿ, ಬಸವರಾಜ ಮಾ ಟೂರ ಸೇರಿದಂತೆ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ ಮಾತನಾಡಿ, ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಬಾಗಲಕೋಟೆ ಮತಕ್ಷೇತ್ರದ ಶಾಸಕರು ಯಾವುದೇ ಕೆಲಸ ಮಾಡಿಲ್ಲ. ಜನರು ಬೇಸತ್ತಿದ್ದು ನಮ್ಮ ತಂಡವು ಯುವಕರಿಂದ ಕೂಡಿದ್ದು ನಮ್ಮನ್ನು ಆಯ್ಕೆ ಮಾಡಿದರೆ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ
ಕೆಲಸ ಮಾಡುತ್ತೇವೆ. ಸಮಗ್ರವಾಗಿ ಬಾಗಲಕೋಟೆ ಮತಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇವೆ ಎಂದರು. ನಮ್ಮನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...