Homeಮುಖಪುಟತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದತೆ ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಪಕ್ಷ ತೊರೆಯುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಅವರ ಸಾಲಿಗೆ ಮಾಜಿ ಸಚಿವ ಸೊಗಡು ಶಿವಣ್ಣ ಕೂಡ ಸೇರಿಕೊಂಡಿದ್ದಾರೆ.

ತುಮಕೂರು ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಕಳೆದ ಒಂದು ತಿಂಗಳಿನಿಂದಲೇ ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದರು. ಆದರೆ ಅವರ ಬದಲು ಸಂಸದ ಬಸವರಾಜುರವರ ಪುತ್ರ, ಹಾಲಿ ಶಾಸಕ ಜ್ಯೋತಿಗಣೇಶ್‌ಗೆ ಬಿಜೆಪಿ ಮಣೆ ಹಾಕಿದೆ. ಇದರಿಂದ ಬಂಡಾಯವೆದ್ದಿರುವ ಸೊಗಡು ಶಿವಣ್ಣ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡುವುದು ಸತ್ಯ. ನೂರಕ್ಕೆ ನೂರು ಶೇಕಡಾ ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಜೋಳಿಗೆ ಹಾಕಿಕೊಂಡು ನಿಂತುಕೊಳ್ಳುತ್ತೇನೆ. ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳುತ್ತಿದ್ದೇನೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಘೋಷಿಸಿದ್ದಾರೆ.

ನನಗೆ ಇವತ್ತು ರಾತ್ರಿಯವರೆಗೆ ಸಮಯ ಬೇಕು. ಏಕೆಂದರೆ ಬಿಜೆಪಿ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ ಎಂದಿದ್ದಾರೆ.

ಸಂಘಪರಿವಾರದ ಹಿನ್ನಲೆಯ ಬಿಜೆಪಿ ಅಭ್ಯರ್ಥಿ ಸೊಗಡು ಶಿವಣ್ಣ 1994ರಲ್ಲಿ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1999 ಮತ್ತು 2004ರಲ್ಲಿಯೂ ಸಹ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರ ಎದುರು ಗೆದ್ದು ಹ್ಯಾಟ್ರಿಕ್ ಸಾಧಿಸಿದರು. 2007ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು. ಅಲ್ಲದೆ 2008ರಲ್ಲಿ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ವಿರುದ್ಧ ಕೇವಲ 1,949 ಮತಗಳ ಅಂತರದಿಂದ ಗೆದ್ದು ಸತತ ನಾಲ್ಕನೇ ಬಾರಿಗೆ ಶಾಸಕರೆನಿಸಿಕೊಂಡರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಪರಿಸರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆ ವೇಳೆಗೆ ಬಿಜೆಪಿ ಇಬ್ಭಾಗವಾಗಿತ್ತು. ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧಿಸಿದರೆ, ಯಡಿಯೂರಪ್ಪನವರ ಕೆಜೆಪಿಯಿಂದ ಇಂಜಿನಿಯರ್ ಜಿ.ಬಿ.ಜ್ಯೋತಿ ಗಣೇಶ್ ಕಣಕ್ಕಿಳಿದಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ಕೇವಲ 3,608 ಮತಗಳಿಂದ ಗೆದ್ದು ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದರು. 2018ರ ವೇಳೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿತ್ತು. ಆಗ ಸೊಗಡು ಶಿವಣ್ಣನವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಯಡಿಯೂರಪ್ಪ ಬಣದ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಅಭ್ಯರ್ಥಿಯಾದರು.

2018ರಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಸ್ಪರ್ಧಿಸಲಿಲ್ಲ. ಆದರೆ ಈ ಬಾರಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಶಿವಣ್ಣನವರ ಹಿಂದೆ ಆರ್‌ಎಸ್‌ಎಸ್ ಇದ್ದು, ಅವರು ಈಗಾಗಲೇ ವೋಟು ಕೊಡಿ, ನೋಟು ಕೊಡಿ ಎಂದು ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದಾರೆ.

ಇನ್ನು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಮುದ್ದಹನುಮೇಗೌಡರು ಸಹ ಬಂಡಾಯದ ಸುಳಿವು ನೀಡಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಮ್ಮ ತೋಟದ ಮನೆಯಲ್ಲಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಕುಣಿಗಲ್‌ನಲ್ಲಿ ಕೃಷ್ಣಕುಮಾರ್‌ರವರಿಗೆ ಟಿಕೆಟ್ ಘೋಷಿಸಿದ ಹಿನ್ನೆಲೆಯಲ್ಲಿ ಮತ್ತೊರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜೇಶ್ ಗೌಡ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಗ ಸೊಗಡು ಶಿವಣ್ಣ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ: ತುಮಕೂರು ನಗರ: ಹೊಸ ಮುಖಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ – ಬಿಜೆಪಿಯಲ್ಲಿ ಒಳಬೇಗುದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...