Homeಮುಖಪುಟತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

- Advertisement -
- Advertisement -

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದತೆ ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಪಕ್ಷ ತೊರೆಯುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ಅವರ ಸಾಲಿಗೆ ಮಾಜಿ ಸಚಿವ ಸೊಗಡು ಶಿವಣ್ಣ ಕೂಡ ಸೇರಿಕೊಂಡಿದ್ದಾರೆ.

ತುಮಕೂರು ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಕಳೆದ ಒಂದು ತಿಂಗಳಿನಿಂದಲೇ ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದರು. ಆದರೆ ಅವರ ಬದಲು ಸಂಸದ ಬಸವರಾಜುರವರ ಪುತ್ರ, ಹಾಲಿ ಶಾಸಕ ಜ್ಯೋತಿಗಣೇಶ್‌ಗೆ ಬಿಜೆಪಿ ಮಣೆ ಹಾಕಿದೆ. ಇದರಿಂದ ಬಂಡಾಯವೆದ್ದಿರುವ ಸೊಗಡು ಶಿವಣ್ಣ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡುವುದು ಸತ್ಯ. ನೂರಕ್ಕೆ ನೂರು ಶೇಕಡಾ ನಾಳೆ ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಜೋಳಿಗೆ ಹಾಕಿಕೊಂಡು ನಿಂತುಕೊಳ್ಳುತ್ತೇನೆ. ನಮ್ಮ ಕ್ಷೇತ್ರದ ಮತದಾರ ದೇವರ ಸತ್ಯ ಮಾಡಿ ಹೇಳುತ್ತಿದ್ದೇನೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಘೋಷಿಸಿದ್ದಾರೆ.

ನನಗೆ ಇವತ್ತು ರಾತ್ರಿಯವರೆಗೆ ಸಮಯ ಬೇಕು. ಏಕೆಂದರೆ ಬಿಜೆಪಿ ಪಕ್ಷದ ಬಾವುಟಗಳು ನನ್ನ ಮನೆಯಲ್ಲಿವೆ. ನಾನು ಕೊನೆಯವರೆಗೂ ಅದಕ್ಕೆ ಗೌರವ ಕೊಡಬೇಕು. ಹೀಗಾಗಿ ಅವುಗಳನ್ನ ಬೇರೆ ಕಡೆಗೆ ಶಿಫ್ಟ್ ಮಾಡಬೇಕಿದೆ. ಅದಾದ ನಂತರ ರಾಜೀನಾಮೆ ಘೋಷಿಸುತ್ತೇನೆ ಎಂದಿದ್ದಾರೆ.

ಸಂಘಪರಿವಾರದ ಹಿನ್ನಲೆಯ ಬಿಜೆಪಿ ಅಭ್ಯರ್ಥಿ ಸೊಗಡು ಶಿವಣ್ಣ 1994ರಲ್ಲಿ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1999 ಮತ್ತು 2004ರಲ್ಲಿಯೂ ಸಹ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರ ಎದುರು ಗೆದ್ದು ಹ್ಯಾಟ್ರಿಕ್ ಸಾಧಿಸಿದರು. 2007ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು. ಅಲ್ಲದೆ 2008ರಲ್ಲಿ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ವಿರುದ್ಧ ಕೇವಲ 1,949 ಮತಗಳ ಅಂತರದಿಂದ ಗೆದ್ದು ಸತತ ನಾಲ್ಕನೇ ಬಾರಿಗೆ ಶಾಸಕರೆನಿಸಿಕೊಂಡರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಪರಿಸರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆ ವೇಳೆಗೆ ಬಿಜೆಪಿ ಇಬ್ಭಾಗವಾಗಿತ್ತು. ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧಿಸಿದರೆ, ಯಡಿಯೂರಪ್ಪನವರ ಕೆಜೆಪಿಯಿಂದ ಇಂಜಿನಿಯರ್ ಜಿ.ಬಿ.ಜ್ಯೋತಿ ಗಣೇಶ್ ಕಣಕ್ಕಿಳಿದಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ಕೇವಲ 3,608 ಮತಗಳಿಂದ ಗೆದ್ದು ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದರು. 2018ರ ವೇಳೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿತ್ತು. ಆಗ ಸೊಗಡು ಶಿವಣ್ಣನವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಯಡಿಯೂರಪ್ಪ ಬಣದ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಅಭ್ಯರ್ಥಿಯಾದರು.

2018ರಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಸ್ಪರ್ಧಿಸಲಿಲ್ಲ. ಆದರೆ ಈ ಬಾರಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಶಿವಣ್ಣನವರ ಹಿಂದೆ ಆರ್‌ಎಸ್‌ಎಸ್ ಇದ್ದು, ಅವರು ಈಗಾಗಲೇ ವೋಟು ಕೊಡಿ, ನೋಟು ಕೊಡಿ ಎಂದು ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದಾರೆ.

ಇನ್ನು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಮುದ್ದಹನುಮೇಗೌಡರು ಸಹ ಬಂಡಾಯದ ಸುಳಿವು ನೀಡಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಮ್ಮ ತೋಟದ ಮನೆಯಲ್ಲಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಕುಣಿಗಲ್‌ನಲ್ಲಿ ಕೃಷ್ಣಕುಮಾರ್‌ರವರಿಗೆ ಟಿಕೆಟ್ ಘೋಷಿಸಿದ ಹಿನ್ನೆಲೆಯಲ್ಲಿ ಮತ್ತೊರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜೇಶ್ ಗೌಡ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಗ ಸೊಗಡು ಶಿವಣ್ಣ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ: ತುಮಕೂರು ನಗರ: ಹೊಸ ಮುಖಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ – ಬಿಜೆಪಿಯಲ್ಲಿ ಒಳಬೇಗುದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...