Homeಮುಖಪುಟಮಾಲೂರು: ಬಿಜೆಪಿ ವಿರುದ್ಧ ಬಂಡಾಯವೆದ್ದ ಹೂಡಿ ವಿಜಯ್ ಕುಮಾರ್- ಮೋದಿ ಫೋಟೊ ಕಿತ್ತೊಗೆದ ಬೆಂಬಲಿಗರು

ಮಾಲೂರು: ಬಿಜೆಪಿ ವಿರುದ್ಧ ಬಂಡಾಯವೆದ್ದ ಹೂಡಿ ವಿಜಯ್ ಕುಮಾರ್- ಮೋದಿ ಫೋಟೊ ಕಿತ್ತೊಗೆದ ಬೆಂಬಲಿಗರು

- Advertisement -
- Advertisement -

ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪಿರುವುದರಿಂದ ಬಂಡಾಯವೆದ್ದಿರುವ ಹೂಡಿ ವಿಜಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅವರ ಬೆಂಬಲಿಗರು ತಮ್ಮ ಕಚೇರಿಗಳಲ್ಲಿ ಹಾಕಿದ್ದ ಮೋದಿ ಫೋಟೊ ಕಿತ್ತೊಗೆದು, ಬಿಜೆಪಿಯ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ.

ಜೆಡಿಎಸ್‌ನಲ್ಲಿದ್ದ ಮಾಜಿ ಶಾಸಕರಾದ ಕೆ.ಎಸ್ ಮಂಜುನಾಥ್ ಗೌಡರು ಇತ್ತೀಚೆಗೆ ಬಿಜೆಪಿ ಸೇರಿ ಟಿಕೆಟ್ ಪಡೆದಿದ್ದಾರೆ. ಇದರಿಂದ ಮೂಲ ಬಿಜೆಪಿಗರು ರೊಚ್ಚಿಗೆದ್ದಿದ್ದು ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಲ್ಕು ವರ್ಷದಿಂದ ಸಮಾಜ ಸೇವೆ ಮಾಡಿದ್ದೇನೆ. ಬಿಜೆಪಿ ಪಕ್ಷ ಕಟ್ಟಿದ್ದೇನೆ. ಆದರೆ ಪಕ್ಷದ ಮುಖಂಡರೆ ನನಗೆ ಟಿಕೆಟ್ ತಪ್ಪಿಸಿ ಜೆಡಿಎಸ್‌ನಿಂದ ಬಂದವರಿಗೆ ಟಿಕೆಟ್ ನೀಡಿದ್ದಾರೆ. ಇದರಿಂದ ನೋವಾಗಿದ್ದು, ಕಾರ್ಯಕರ್ತರ ಮಾತಿಗೆ ಬೆಲೆ ಕೊಟ್ಟು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಹೂಡಿ ವಿಜಯ್ ಕುಮಾರ್ ಘೋಷಿಸಿದ್ದಾರೆ.

ಬೆಂಬಲಿಗರ ಸಭೆ ಮುಗಿದ ಕೂಡಲೇ ಸಿಟ್ಟಿಗೆದ್ದ ವಿಜಯ್ ಕುಮಾರ್ ಬೆಂಬಲಿಗರು ತಮ್ಮ ಮನೆಗಳಲ್ಲಿ ಹಾಕಿದ್ದ ಮೋದಿ ಫೋಟೊ ಕಿತ್ತು ಎಸೆದಿದ್ದಾರೆ. ಬಿಜೆಪಿ ಬಾವುಟಗಳನ್ನು ವಿಲೇವಾರಿ ಮಾಡಿದ್ದಾರೆ. ಆದರೆ ವಿಜಯ್ ಕುಮಾರ್ ಹೊಸದಾಗಿ ಕಟ್ಟಿಸಿದ ತಮ್ಮ ಮನೆಗೆ ಮೋದಿ ನಿವಾಸ ಎಂದು ಹೆಸರಿಟ್ಟಿದ್ದರು. ಅವರು ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಕಾಂಗ್ರೆಸ್‌ನಿಂದ ಹಾಲಿ ಶಾಸಕ ಕೆ.ವೈ ನಂಜೇಗೌಡರವರಿಗೆ ಟಿಕೆಟ್ ದೊರಕಿದೆ. ಜೆಡಿಎಸ್ ರಾಮೇಗೌಡರಿಗೆ ಟಿಕೆಟ್ ಘೋಷಿಸಿದೆ. ಇನ್ನು ಬಿಜೆಪಿ ಟಿಕೆಟ್ ಕೆ.ಎಸ್ ಮಂಜುನಾಥ್ ಗೌಡರ ಪಾಲಾಗಿದೆ. ಟಿಕೆಟ್ ವಂಚಿತ ಹೂಡಿ ವಿಜಯ್ ಕುಮಾರ್ ಪಕ್ಷೇತರರಾಗಿ ಮಾಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ. ಈ ನಾಲ್ವರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದಾರೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತುಮಕೂರು ನಗರದ ಸೊಗಡು ಶಿವಣ್ಣ ಬಿಜೆಪಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಕೂಡ ಬಂಡಾಯದ ಬಾವುಟ ಹಾರಿಸಿದ್ದಾರೆ. ಜೇವರ್ಗಿಯ ದೊಡ್ಡಪ್ಪಗೌಡ ಪಾಟೀಲ್ ಬಿಜೆಪಿ ತೊರೆದು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಮಾಲೂರಿನಲ್ಲಿ ಹೂಡಿ ವಿಜಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಲಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ 2023: ಮೂರೂ ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಮತ್ತು ಮುಖ್ಯಮಂತ್ರಿ ಆಕಾಂಕ್ಷಿಗಳ ಹಗ್ಗಜಗ್ಗಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...